AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನಾದ ನೇತೃತ್ವ ಯಾರಿಗೆ? ಚುನಾವಣಾ ಆಯೋಗ ನಿರ್ಧರಿಸುವುದನ್ನು ತಡೆಯುವಂತೆ ಸುಪ್ರೀಂಗೆ ಠಾಕ್ರೆ ಬಣ ಮನವಿ

ಉದ್ಧವ್ ಠಾಕ್ರೆ ವಿರುದ್ದ ಬಂಡಾಯವೆದ್ದ ಶಾಸಕರನ್ನು ಅನರ್ಹಗೊಳಿಸಬೇಕೆಂಬ ಅರ್ಜಿ ಬಗ್ಗೆ ಇನ್ನೂ ನಿರ್ಧಾರ ಬಂದಿಲ್ಲ. ಹೀಗಿರುವಾಗ ಅಲ್ಲಿಯವರೆಗೆ ಶಿವಸೇನಾದ ನೇತೃತ್ವ ಯಾರಿಗೆ ಎಂಬುದರ ಬಗ್ಗೆ ನಿರ್ಧರಿಸುವುದು ಬೇಡ ಎಂದ ಠಾಕ್ರೆ ಬಣ ಹೇಳಿದೆ.

ಶಿವಸೇನಾದ ನೇತೃತ್ವ ಯಾರಿಗೆ? ಚುನಾವಣಾ ಆಯೋಗ ನಿರ್ಧರಿಸುವುದನ್ನು ತಡೆಯುವಂತೆ  ಸುಪ್ರೀಂಗೆ ಠಾಕ್ರೆ ಬಣ ಮನವಿ
ಉದ್ಧವ್ ಠಾಕ್ರೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 25, 2022 | 12:58 PM

Share

ದೆಹಲಿ: ಶಿವಸೇನಾ (Shiv Sena) ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದಲ್ಲಿರಬೇಕೆ ಅಥವಾ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) ನೇತೃತ್ವದಲ್ಲಿರಬೇಕೆ ಎಂಬುದರ ಬಗ್ಗೆ ಚುನಾವಣಾ ಆಯೋಗ ನಿರ್ಧರಿಸುವುದನ್ನು ತಡೆಯಬೇಕು ಎಂದು ಕೋರಿ ಉದ್ಧವ್ ಬಣ ಸುಪ್ರೀಂಕೋರ್ಟ್​​ನಲ್ಲಿ ಮನವಿ ಸಲ್ಲಿಸಿದೆ. ಉದ್ಧವ್ ಠಾಕ್ರೆ ವಿರುದ್ದ ಬಂಡಾಯವೆದ್ದ ಶಾಸಕರನ್ನು ಅನರ್ಹಗೊಳಿಸಬೇಕೆಂಬ ಅರ್ಜಿ ಬಗ್ಗೆ ಇನ್ನೂ ನಿರ್ಧಾರ ಬಂದಿಲ್ಲ. ಹೀಗಿರುವಾಗ ಅಲ್ಲಿಯವರೆಗೆ ಶಿವಸೇನಾದ ನೇತೃತ್ವ ಯಾರಿಗೆ ಎಂಬುದರ ಬಗ್ಗೆ ನಿರ್ಧರಿಸುವುದು ಬೇಡ ಎಂದ ಠಾಕ್ರೆ ಬಣ ಹೇಳಿದೆ. ಬಿಜೆಪಿ ಸಹಕಾರದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದ ಶಿಂಧೆ ತಾವೇ ನಿಜವಾದ ಶಿವಸೇನಾ ಎಂದು ಹೇಳುತ್ತಿದೆ. ಶಿವಸೇನಾಕ್ಕೆ ಯಾರು ನೇತೃತ್ವ ವಹಿಸಬೇಕು ಎಂಬುದ ಬಗ್ಗೆ ನಿರ್ಧರಿಸಲು ಎರಡೂ ಬಣಗಳು ಸಾಕ್ಷ್ಯ ಮತ್ತು ಲಿಖಿತ ಹೇಳಿಕೆಯನ್ನು ಆಗಸ್ಟ್ 8ರಒಳಗೆ ಸಲ್ಲಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಇದಾದ ನಂತರವೇ ಚುನಾವಣಾ ಆಯೋಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿತ್ತು.

ಬಂಡಾಯ ಶಿವಸೇನಾ ಶಾಸಕರ ಅನರ್ಹತೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ, ಹೀಗಿರುವಾಗ ಯಾವ ಬಣ ಶಿವಸೇನಾವನ್ನು ಪ್ರತಿನಿಧಿಕರಿಸುತ್ತದೆ ಎಂಬುದರ ಬಗ್ಗೆ ಚುನಾವಣಾ ಆಯೋಗ ನಿರ್ಧರಿಸುವಂತಿಲ್ಲ ಎಂದು ಠಾಕ್ರೆ ಬಣ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮನವಿಯಲ್ಲಿ ಹೇಳಿದೆ.

55 ಶಾಸಕರ ಪೈಕಿ 40 ಶಾಸಕರು ಮತ್ತು 18 ಲೋಕಸಭಾ ಸಂಸದರ ಪೈಕಿ 12 ಸಂಸದರ ಬೆಂಬಲ ತಮಗಿದೆ ಎಂದು ಶಿಂಧೆ ಬಣ ಹೇಳಿದೆ. ಶಿವಸೇನಾದಲ್ಲಿ ಒಡಕು ಇದೆ ಎಂಬುದು ಸ್ಪಷ್ಟ. ಇದರಲ್ಲಿ ಒಂದು ಠಾಕ್ರೆ ಬಣ ಮತ್ತೊಂದು ಶಿಂಧೆ ಬಣ. ಎರಡೂ ಬಣಗಳು ತಾನೇ ನಿಜವಾದ ಶಿವಸೇನಾ ಎಂದು ವಾದಿಸುತ್ತಿವೆ ಎಂದು ಎರಡೂ ಬಣಗಳಿಗೆ ಶನಿವಾರ ನೋಟಿಸ್ ನೀಡಿದ ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ
Image
ನಕ್ಸಲರ ಬೆದರಿಕೆ ಇದ್ದರೂ ಏಕನಾಥ್ ಶಿಂದೆಗೆ ಝಡ್ ಪ್ಲಸ್ ಭದ್ರತೆ ನೀಡಲಿಲ್ಲ: ಬಂಡಾಯ ಶಾಸಕರ ಆರೋಪ
Image
Maharashtra Politics: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ಬಣಕ್ಕೆ ಚುನಾವಣಾ ಆಯೋಗ ನೊಟೀಸ್
Image
20 ಶಾಸಕರ ಬೆಂಬಲವೂ ಸಿಗದ ವ್ಯಕ್ತಿ: ಸುಪ್ರೀಂ ಕೋರ್ಟ್‌ನಲ್ಲಿ ಸೇನಾ, ಶಿಂದೆ ಬಣ ಮುಖಾಮುಖಿ

ಎರಡೂ ಬಣಗಳಿಂದ ಸಾಕ್ಷ್ಯ ದಾಖಲೆ ಮತ್ತು ಲಿಖಿತ ಹೇಳಿಕೆ ಪಡೆದ ನಂತರವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.  ಠಾಕ್ರೆ ಬಣವನ್ನು ಅನರ್ಹಗೊಳಿಸುವಂತೆ ಶಿಂಧೆ ಬಣ ಮಹಾರಾಷ್ಟ್ರ ಸ್ಪೀಕರ್ ಗೆ ಮನವಿ ಮಾಡಿದೆ. ಆದರೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಡಿ ಎಂದು ಜುಲೈ 11ರಂದು ಸುಪ್ರೀಂಕೋರ್ಟ್ ಸ್ಪೀಕರ್ ರಾಹುಲ್ ನರ್ವೇಕರ್ ಅವರಲ್ಲಿ ಹೇಳಿದೆ.

Published On - 12:30 pm, Mon, 25 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ