AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಜಗದೀಶ್​ ಶೆಟ್ಟರ್​​ಗೆ ಅಮಿತ್​ ಶಾ ದೂರವಾಣಿ ಕರೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯಾಗಿತ್ತು. ಇದಾದ ನಂತರ ಶೆಟ್ಟರ್​​ ವಿರುದ್ಧ ಬಿಜೆಪಿ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರು ಕಿಡಿಕಾರುತ್ತಾ ಬಂದಿದ್ದರು. ಆದರೆ ಇದೀಗ ಬಿಜೆಪಿ ಹೈಕಮಾಂಡ್​ ನಾಯಕರು ಜಗದೀಶ್​ ಶೆಟ್ಟರ್​ ಅವರಿಗೆ ಕರೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಜಗದೀಶ್​ ಶೆಟ್ಟರ್​​ಗೆ ಅಮಿತ್​ ಶಾ ದೂರವಾಣಿ ಕರೆ
ಅಮಿತ್​ ಶಾ (ಎಡಚಿತ್ರ) ಜಗದೀಶ್​ ಶೆಟ್ಟರ್​ (ಬಲಚಿತ್ರ)
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Aug 26, 2023 | 2:36 PM

Share

ಹುಬ್ಬಳ್ಳಿ: ಕಾಂಗ್ರೆಸ್​​ನ (Congress) ಆಪರೇಷನ್​ ಹಸ್ತ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಬಿಜೆಪಿ (BJP) ಮತ್ತು ಜೆಡಿಎಸ್​ನ ಕೆಲ ನಾಯಕರು ಘರವಾಪಸಿ ಮಾಡುತ್ತಾರೆ ಎಂಬ ವಂದತಿ ಹರಡಿದೆ. ಈ ಮಧ್ಯೆ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಮತ್ತು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​​ ಹೆಬ್ಬಾರ್​ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ಪಾಳಯದಲ್ಲಿ ಕೋಲಾಹಲ ಎಬ್ಬಿಸಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಲಿಂಗಾಯತ ಮತಗಳೇ ಇದ್ದು, ಇಲ್ಲಿ ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರನ್ನು ಪಕ್ಷಕ್ಕೆ ಕರೆತರಲು ಕಾಂಗ್ರೆಸ್​​ ಹವಣಿಸುತ್ತಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಮುಂದಾಳತ್ವ ವಹಿಸುವ ಸಾಧ್ಯತೆಯೂ ಇದೆ.

ಕಳೆದ ವಿಧಾನಸಭೆಯಲ್ಲಿ ಟಿಕೆಟ್​ ಕೈ ತಪ್ಪಿದ್ದರಿಂದ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಜಗದೀಶ್​ ಶೆಟ್ಟರ್​ ಕಮಲ ನಾಯಕರ ವಿರುದ್ಧ ಸಮರಸಾರಿದ್ದಾರೆ. ಅಲ್ಲದೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಪ್ತ, ಮಾಜಿ ಶಾಸಕ ಎಸ್​​ಐ ಚಿಕ್ಕನಗೌಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಶೆಟ್ಟರ್​ ಗಾಳ ಹಾಕಿದ್ದು, ಇದು ಬಹುತೇಕ ಯಶಸ್ವಿಯಾಗಿದೆ. ಈ ನಡುವೆಯೇ ರಾಜಕೀಯ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಶೆಟ್ಟರ್​​ಗೆ ಕರೆ ಮಾಡಿದ್ದಾರೆ. ನಿನ್ನೆ (ಆ.25) ಸಂಜೆ ಅಮಿತ್​ ಶಾ ಕರೆ ಮಾಡಿದ್ದು, ಮನವೊಲಿಸಲು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮಿತ್​ ಶಾ, ಜಗದೀಶ್​ ಶೆಟ್ಟರ್​ಗೆ ಕರೆ ಮಾಡಿ 10 ನಿಮಿಷ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶೆಟ್ಟರ್ ಆಪ್ತ ಮೂಲಗಳಿಂದ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್​

ಇನ್ನು ಏಳೆಂಟು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲ್ಲಿದ್ದು, ಇದಕ್ಕೂ ಮುನ್ನ ಪಕ್ಷ ಬಿಟ್ಟು ಹೋದ ನಾಯಕರ ಮನವೊಲಿಕೆಗೆ ಬಿಜೆಪಿ ಕೇಂದ್ರ ನಾಯಕರೇ ಮುಂದಾಗಿದ್ದಾರೆ. ಇತ್ತೀಚಿಗೆ ಸಂಸದೆ ಶೋಭಾ ಕರಂದ್ಲಾಜೆ ಕೂಡ ಜಗದೀಶ್​ ಶೆಟ್ಟರ್​ ಮತ್ತು ಶಾಸಕ ಲಕ್ಷ್ಮಣ ಸವದಿ ಅವರಿಗೆ ಪರೋಕ್ಷವಾಗಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು.

ಯಾರೇ ಪಕ್ಷ ಬಿಟ್ಟಿದ್ದರು ಅವರಿಗೆ ಪ್ರಧಾನಿ ಮೋದಿಗಾಗಿ ಸ್ವಾಗತವಿದೆ. ಪಕ್ಷ ಬಿಟ್ಟವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ. ನಮ್ಮ ದೇಶದ ನಾಯಕನನ್ನು ಇಂದು ಪ್ರಪಂಚ ಒಪ್ಪುತ್ತಿದೆ. ಅವರನ್ನು ಮತ್ತೆ ಪ್ರಧಾನಿ ಮಾಡಲು ಯಾರೇ ಪಾರ್ಟಿ ಬಿಟ್ಟಿದ್ದರೂ ವಾಪಸ್ ಬರಲು ವಿನಂತಿ ಮಾಡುತ್ತೇನೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:33 pm, Sat, 26 August 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ