AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಹೈದರಾಬಾದ್​ ಭೇಟಿ ವೇಳೆ ಚಂದ್ರಬಾಬು ನಾಯ್ಡು ಜತೆ ಸಭೆ ನಡೆಸುವ ಸಾಧ್ಯತೆ

ನಾಯ್ಡು ಅವರು 2018 ರಲ್ಲಿ ಸಾರ್ವತ್ರಿಕ ಚುನಾವಣೆಗೆ ಸುಮಾರು ಒಂದು ವರ್ಷ ಮುಂಚೆ ಎನ್​​ಡಿಎಯಿಂದ ದೂರವಾಗಿದ್ದರು. ನಂತರ ನಡೆದ ರಾಜ್ಯ ಚುನಾವಣೆಯಲ್ಲಿ ಅವರ ಸೋಲಿಗೆ ಈ ವಿಭಜನೆಯೇ ಕಾರಣ ಎಂದು ಹಲವರು ಆರೋಪಿಸಿದ್ದರು.

ಅಮಿತ್ ಶಾ ಹೈದರಾಬಾದ್​ ಭೇಟಿ ವೇಳೆ ಚಂದ್ರಬಾಬು ನಾಯ್ಡು ಜತೆ ಸಭೆ ನಡೆಸುವ ಸಾಧ್ಯತೆ
ಚಂದ್ರಬಾಬು ನಾಯ್ಡು -ಅಮಿತ್ ಶಾ
TV9 Web
| Edited By: |

Updated on: Aug 21, 2022 | 6:48 PM

Share

ಹೈದರಾಬಾದ್: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ಇಂದು ಹೈದರಾಬಾದ್‌ಗೆ (Hyderabad) ಭೇಟಿ ನೀಡುವ ಸಂದರ್ಭದಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಅದೇ ವೇಳೆ ಶಾ ರಾಮೋಜಿ ಫಿಲ್ಮ್ ಸಿಟಿಗೆ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇಬ್ಬರ ನಡುವಿನ ಸಭೆಯು ತೆಲಂಗಾಣ ರಾಜ್ಯ ಚುನಾವಣೆಗೆ ಮುನ್ನ ಹೊಸ ಮೈತ್ರಿಗಳನ್ನು ಸೂಚಿಸಬಹುದು. ನಾಯ್ಡು ಅವರು 2018 ರಲ್ಲಿ ಸಾರ್ವತ್ರಿಕ ಚುನಾವಣೆಗೆ ಸುಮಾರು ಒಂದು ವರ್ಷ ಮುಂಚೆ ಎನ್​​ಡಿಎಯಿಂದ ದೂರವಾಗಿದ್ದರು. ನಂತರ ನಡೆದ ರಾಜ್ಯ ಚುನಾವಣೆಯಲ್ಲಿ ಅವರ ಸೋಲಿಗೆ ಈ ವಿಭಜನೆಯೇ ಕಾರಣ ಎಂದು ಹಲವರು ಆರೋಪಿಸಿದ್ದರು. ಬಜೆಟ್ ನಲ್ಲಿ ಕೇಂದರದ ಬಿಜೆಪಿ ಸರ್ಕಾರ ಆಂಧ್ರ ಪ್ರದೇಶವನ್ನು ಕಡೆಗಣಿಸಿದೆ ಎಂದು ನಾಯ್ಡು ಆರೋಪಿಸಿದ್ದು ಆಂಧ್ರಪ್ರದೇಶಕ್ಕೆ ಆಗಿರುವ ಅನ್ಯಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಹೊಣೆ ಎಂದಿದ್ದರು.

ನಾನು ಈ ನಿರ್ಧಾರ ತೆಗೆದುಕೊಂಡಿದ್ದು ಸ್ವಾರ್ಥಕ್ಕಾಗಿ ಅಲ್ಲ, ಆಂಧ್ರಪ್ರದೇಶದ ಹಿತಾಸಕ್ತಿಗಾಗಿ, ನಾಲ್ಕು ವರ್ಷಗಳಿಂದ ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ, 29 ಬಾರಿ ದೆಹಲಿಗೆ ಹೋಗಿದ್ದೇನೆ. ಅನೇಕ ಬಾರಿ ಕೇಳಿದ್ದೇನೆ. ಇದು ಕೇಂದ್ರದ ಕೊನೆಯ ಬಜೆಟ್. ಇದರಲ್ಲಿ ಆಂಧ್ರಪ್ರದೇಶದ ಪ್ರಸ್ತಾಪವಿಲ್ಲ ಎಂದು ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ನಾಯ್ಡು ಅವರು ವಿಧಾನಸಭೆಯಲ್ಲಿ ಹೇಳಿದ್ದರು.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ