ರಾಹುಲ್ ಗಾಂಧಿಗೆ ಲೋಕಸಭೆ ಚುನಾವಣೆ ಸೋಲಿ‌ನ‌ ಕನಸು ಬೀಳುತ್ತಿದೆ: ಪ್ರಹ್ಲಾದ್​ ಜೋಶಿ

| Updated By: ವಿವೇಕ ಬಿರಾದಾರ

Updated on: Apr 01, 2024 | 1:32 PM

ಬಿಜೆಪಿ, ಆರ್​​ಎಸ್​ಎಸ್​ ವಿಷವಿದ್ದಂತೆ, ಅದರ ರುಚಿ ನೋಡಬೇಡಿ ಎಂಬ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಮಲ್ಲಿಕಾರ್ಜುನ ಖರ್ಗೆ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.

ರಾಹುಲ್ ಗಾಂಧಿಗೆ ಲೋಕಸಭೆ ಚುನಾವಣೆ ಸೋಲಿ‌ನ‌ ಕನಸು ಬೀಳುತ್ತಿದೆ: ಪ್ರಹ್ಲಾದ್​ ಜೋಶಿ
ಪ್ರಹ್ಲಾದ್ ಜೋಶಿ
Follow us on

ಹುಬ್ಬಳ್ಳಿ, ಏಪ್ರಿಲ್​ 01: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಲೋಕಸಭೆ ಚುನಾವಣೆ (Lok Sabha Election) ಸೋಲಿ‌ನ‌ ಕನಸು ಬೀಳುತ್ತಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ (Pralhad Joshi) ವಾಗ್ದಾಳಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಕೇವಲ 40 ಕ್ಷೇತ್ರ ಗೆಲ್ಲುತ್ತೇವೆ ಅಂತ ಹೇಳುತ್ತಾರೆ. ಕಾಂಗ್ರೆಸ್​ ನಾಯಕರಿಗೂ ಸೋಲುತ್ತೇವೆ ಅಂತ ಅರ್ಥ ಆಗಿದೆ. ಹೀಗಾಗಿ ಚುನಾವಣಾ ಆಯೋಗ, EVM ಮೇಲೆ ಅನುಮಾನಪಡುತ್ತಾರೆ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಾಗ EVM ಸಮಸ್ಯೆ ಇರಲಿಲ್ಲ. ಆದರೆ ನಾವು ಗೆದ್ದರೆ ಮಾತ್ರ ಇವಿಎಂ ಸಮಸ್ಯೆ ಇದೆ ಅಂತ ಕಾಂಗ್ರೆಸ್​ನವರು ಹೇಳುತ್ತಾರೆ. ಕಾಂಗ್ರೆಸ್ಸಿನವರು ಸೋಲಿನ ಭಯದಿಂದ ಹತಾಶರಾಗಿ ಮಾತನಾಡುತ್ತಿದ್ದಾರೆ ಕಾಂಗ್ರೆಸ್ ಪಕ್ಷ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಮೋದಿ ಅವರ ನೇತೃತ್ವದಲ್ಲಿ ಬಹಳ ಬದಲಾವಣೆಯಾಗಿದೆ. ಬಿಜೆಪಿಯನ್ನು ಗೆಲ್ಲಿಸಬೇಕೆಂದು ಜನ‌ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿ, ಆರ್​​ಎಸ್​ಎಸ್​ ವಿಷವಿದ್ದಂತೆ, ಅದರ ರುಚಿ ನೋಡಬೇಡಿ ಎಂಬ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಜೋಶಿ, ಮಲ್ಲಿಕಾರ್ಜುನ ಖರ್ಗೆ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಡಿಕೆಶಿ ಟ್ರಬಲ್‌ ಶೂಟರ್ ಆಗಿದ್ದರೇ ದೇಶಾದ್ಯಂತ ಕಾಂಗ್ರೆಸ್​​ಗೆ ಆಗಿರುವ ಟ್ರಬಲ್ ಶೂಟ್​ ಮಾಡಲಿ: ಪ್ರಹ್ಲಾದ್ ಜೋಶಿ ಲೇವಡಿ

ಇನ್ನು ಬಿಜೆಪಿಯು ಬಾಂಗ್ಲಾದೇಶ ಜೊತೆಗೆ ಸೌಹಾರ್ದ ಗಡಿ ಒಪ್ಪಂದ ಮಾಡಿಕೊಂಡಂತೆ ನಾವು ಶ್ರೀಲಂಕೆಗೆ ಸ್ನೇಹದ ಸಂಕೇತವಾಗಿ ಕಚತೀವು ದ್ವೀಪ ಕೊಟ್ಟಿದ್ದೇವೆ ಎಂಬ ಮಲ್ಲಿಕಾರ್ಜುನ್​ ಖರ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಒಂದು ಸಾರ್ವಭೌಮ ಸರ್ಕಾರ ಒಮ್ಮೆ ಒಪ್ಪಂದಕ್ಕೆ ಸಹಿ ಹಾಕಿದ ಮೇಲೆ ಅದನ್ನು ವಾಪಸ್ ಪಡೆಯಲು ಸಾಧ್ಯವೇ? ಅನೇಕ ದೇಶಗಳ ಜೊತೆ ಒಡಂಬಡಿಕೆ ಮಾಡಿಕೊಂಡಿರುತ್ತೇವೆ. ಸರ್ಕಾರ ಬದಲಾದ ಕೂಡಲೇ ಆ ಒಡಂಬಡಿಕೆ ರದ್ದು ಮಾಡಿಕೊಳ್ಳಲು ಆಗಲ್ಲ. ನೀವು ದ್ವೀಪವನ್ನು ಕೊಟ್ಟಿದ್ದು ಯಾಕೆ ಅಂತ ಹೇಳಿ. ನಮ್ಮ ಮೂರ್ಖತನದಿಂದ ಕೊಟ್ಟಿದ್ದೇವೆ ಅಂತ ಒಪ್ಪಿಕೊಳ್ಳಲಿ. ನಮ್ಮ ದೇಶದ ನೆಲ ಜಲದ ಬಗ್ಗೆ ನಮಗೆ ಕಾಳಜಿ ಇರಲಿಲ್ಲ ಅಂತ ಒಪ್ಪಿಕೊಳ್ಳಲಿ. ಅದನ್ನು ಬಿಟ್ಟು ಈ ರೀತಿ ಬಾಲಿಶ ಹೇಳಿಕೆ ನೀಡೋದನ್ನ ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಗ್ಯಾರಂಟಿ ವ್ಯಕ್ತಿಯ ಜೀವನವನ್ನು ಬದಲಾಯಿಸುತ್ತದೆ: ಸದಾನಂದಗೌಡ

ಪ್ರಧಾನಿ ಮೋದಿ ಅವರ ಗ್ಯಾರಂಟಿ ವ್ಯಕ್ತಿಯ ಜೀವನವನ್ನು ಬದಲಾಯಿಸುತ್ತದೆ. ಆದರೆ ಕಾಂಗ್ರೆಸ್​ನವರದ್ದು ಚುನಾವಣೆಗೆ ಬಂದಿರುವ ಗ್ಯಾರಂಟಿ. ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬುದ್ಧಿ ಕಲಿಸಬೇಕು. ಕಾಂಗ್ರೆಸ್​ಗೆ ಬುದ್ಧಿ ಕಲಿಸದಿದ್ದರೆ ಕುಡಿಯಲು ನೀರು ಸಹ ಕೊಡಲ್ಲ. ಮೂರು ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಅಧಃಪತನ ಆಗುತ್ತದೆ. ಆ ನಂತರ ಜನಪರವಾದ ಆಡಳಿತ ಇರುವ ಸರ್ಕಾರ ಬರುತ್ತದೆ. ಕರ್ನಾಟಕದಲ್ಲಿ ಮೈತ್ರಿ ಪಕ್ಷ 28ಕ್ಕೆ 28 ಸ್ಥಾನಗಳಲ್ಲೂ ಗೆಲ್ಲುತ್ತದೆ. ಫಲಿತಾಂಶ ಪ್ರಕಟವಾದ 3 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ