AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಗ್ಯಾರಂಟಿಗೆ ಗ್ಯಾರಂಟಿಯೇ ಇಲ್ಲ; ಕಾಂಗ್ರೆಸ್‌ ವಿರುದ್ಧ ಪ್ರಲ್ಹಾದ್‌ ಜೋಶಿ ಕಿಡಿ

ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸಲಾಗುವುದು ಎಂಬ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳಿಕೆಗೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಸೇರಿದಂತೆ ಇನ್ನಿತರ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನೇರವಾಗಿ ಜನರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ‌ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಗ್ಯಾರಂಟಿಗೆ ಗ್ಯಾರಂಟಿಯೇ ಇಲ್ಲ; ಕಾಂಗ್ರೆಸ್‌ ವಿರುದ್ಧ ಪ್ರಲ್ಹಾದ್‌ ಜೋಶಿ ಕಿಡಿ
ಪ್ರಹ್ಲಾದ್​ ಜೋಶಿ
TV9 Web
| Edited By: |

Updated on: Jan 31, 2024 | 3:38 PM

Share

ಬೆಂಗಳೂರು, (ಜನವರಿ 31): ಲೋಕಸಭೆ ಚುನಾವಣೆಯಲ್ಲಿ (Loksbaha Elections 2024) ಸೋತರೆ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ರದ್ದುಪಡಿಸಲಾಗುವುದು ಎಂಬ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ (Balakrishna) ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇನ್ನು ಇದಕ್ಕೆ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರತಿಕ್ರಿಯಿಸಿದ್ದು, ನೇರವಾಗಿ ಜನರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳುವುದನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ ಎಂದು ‌ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗೆ ಮತ ನೀಡಿ, ಅಕ್ಷತೆಗಲ್ಲ ಎಂಬುದು ನಮ್ಮ ಉದ್ದೇಶ: ಹೇಳಿಕೆ ಸಮರ್ಥಿಸಿಕೊಂಡ ಹೆಚ್​​ಸಿ ಬಾಲಕೃಷ್ಣ

ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್, ತನ್ನ ಚುನಾವಣಾ ಗ್ಯಾರಂಟೀಗಳನ್ನೂ ಈಡೇರಿಸುತ್ತಿಲ್ಲ. ಖಂಡಿತವಾಗಿಯೂ ಮುಂದಿನ ಚುನಾವಣೆಯಲ್ಲಿ ಜನತೆ ಕೈ ಗೆ “ಕೈ” ಕೊಡಲಿದ್ದಾರೆ ಎಂದಿದ್ದಾರೆ.

ಬಾಲಕೃಷ್ಣ ಹೇಳಿದ್ದೇನು?

ಮಂಗಳವಾರ ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ್ದ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ, ಬಿಜೆಪಿಯವರು ಮಂದಿರದ ಹೆಸರಿನಲ್ಲಿ ಅಕ್ಷತೆ ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಉಚಿತ ಗ್ಯಾರಂಟಿಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಸ್ಥಾನ ದೊರೆಯುವಂತೆ ಮಾಡದಿದ್ದರೆ ಗ್ಯಾರಂಟಿಗಳ ಬಗ್ಗೆ ಜನರಿಗೆ ಒಲವಿಲ್ಲ ಎಂಬ ಸಂದೇಶ ರವಾನೆಯಾಗುತ್ತದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದರು.

ಅಲ್ಲದೆ, ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದೂ ಅವರು ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು