AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ

ಗ್ಯಾರಂಟಿ ಕಾರ್ಡ್​ನಲ್ಲಿ ಸಹಿಹಾಕುವಾಗ ಯೋಚನೆ ಮಾಡಬೇಕಿತ್ತು. ಸುಳ್ಳು ಹೇಳುವುದು ಕಾಂಗ್ರೆಸ್ ಡಿಎನ್​​ಎನಲ್ಲಿದೆ. ಹಿಮಾಚಲಪ್ರದೇಶ, ರಾಜಸ್ಥಾನದಲ್ಲಿ ಗ್ಯಾರಂಟಿ ಈಡೇರಿಸಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ
ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​​ ಜೋಶಿ
ಹರೀಶ್ ಜಿ.ಆರ್​.
| Edited By: |

Updated on: Jun 28, 2023 | 7:01 PM

Share

ದೆಹಲಿ: ಯಾರನ್ನೂ ಕೇಳದೆ ಸಿದ್ದರಾಮಯ್ಯ ಅಕ್ಕಿ ಘೋಷಣೆ ಮಾಡಿದ್ದಾರೆ. ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ. ನೈಸರ್ಗಿಕ ವಿಕೋಪ, ತುರ್ತು ಪರಿಸ್ಥಿತಿಯಲ್ಲಿ ಅಕ್ಕಿ ಕೊಡಬೇಕು. ಕೇಂದ್ರದ ಬಳಿ ಅಕ್ಕಿ ಇದ್ದರೆ ಕೊಡುತ್ತಿದ್ದೆವು ಎಂದಿದ್ದಾರೆ.

ಬೇರೆ ರಾಜ್ಯಗಳು ಕೂಡ ಅಕ್ಕಿ ಕೇಳಿದರೆ ಎಲ್ಲಿಂದ ಕೊಡುವುದು. ಕೇಂದ್ರ ಸರ್ಕಾರದ ಬಳಿ ಅಕ್ಕಿ ಸ್ಟಾಕ್ ಇರಲೇಬೇಕು. ಗ್ಯಾರಂಟಿ ಕಾರ್ಡ್​ನಲ್ಲಿ ಸಹಿಹಾಕುವಾಗ ಯೋಚನೆ ಮಾಡಬೇಕಿತ್ತು. ಸುಳ್ಳು ಹೇಳುವುದು ಕಾಂಗ್ರೆಸ್ ಡಿಎನ್​​ಎನಲ್ಲಿದೆ. ಹಿಮಾಚಲಪ್ರದೇಶ, ರಾಜಸ್ಥಾನದಲ್ಲಿ ಗ್ಯಾರಂಟಿ ಈಡೇರಿಸಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ವಿಪಕ್ಷ ನಾಯಕರ ಜೊತೆ ಒಳ ಒಪ್ಪಂದ: ಶಾಸಕ ಯತ್ನಾಳ್​ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ

10 ಕೆಜಿ ಅಕ್ಕಿಗೆ ಹಣ ಕೊಟ್ಟಿದ್ರೆ ಮರ್ಯಾದಸ್ಥರ ಲಕ್ಷಣ 

ಕಾಂಗ್ರೆಸ್​ ಕೊಟ್ಟ ಮಾತಿನಂತೆ 10 ಕೆಜಿ ಅಕ್ಕಿಗೆ ಹಣ ಕೊಡಬೇಕು. ಚುನಾವಣೆಗೂ ಮುನ್ನ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಕೇಂದ್ರ ಸರ್ಕಾರ 5 KG ಅಕ್ಕಿ ಕೊಡುತ್ತಿದೆ ಎಂದು ಒಪ್ಪಿಕೊಂಡಂತಾಗಿದೆ. ಇಂದು ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ನಾವೇ ಅಕ್ಕಿಕೊಟ್ಟಿದ್ದು ಎಂದು ದಾರಿ ತಪ್ಪಿಸುತ್ತಿದ್ದರು.

ಹೇಳಿದಂತೆ 10 ಕೆಜಿ ಅಕ್ಕಿಗೆ ಸಿದ್ದರಾಮಯ್ಯ ಹಣ ಕೊಡಬೇಕು. ಕನಿಷ್ಠ ಪಕ್ಷ 5 ಕೆಜಿ ಅಕ್ಕಿಗೆ ಹಣ ಕೊಟ್ರಲ್ಲ ಅನ್ನೋದು ಸಮಾಧಾನ. 10 ಕೆಜಿ ಅಕ್ಕಿಗೆ ಹಣ ಕೊಟ್ಟಿದ್ರೆ ಮರ್ಯಾದಸ್ಥರ ಲಕ್ಷಣ ಆಗುತ್ತಿತ್ತು ಎಂದು ಹರಿಯಿದ್ದಾರೆ.

ಇದನ್ನೂ ಓದಿ: ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ ಟೀಕೆ

ಪಕ್ಷದ ನಾಯಕರ ವಿರುದ್ಧ ರೇಣುಕಾರ್ಯ ಅಸಮಧಾನ ವಿಚಾರವಾಗಿ ಮಾತನಾಡಿದ ಅವರು, ನಾವು ಸೋತಿರಬಹುದು, ನಮ್ಮದು ಐಡಿಯಾಲಜಿ ಪಾರ್ಟಿ. ಯಾವುದೇ ನಾಯಕರು ಬಹಿರಂಗವಾಗಿ ಮಾತನಾಡಬಾರದು. ಪಕ್ಷ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕು. ಶೀಘ್ರದಲ್ಲೇ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆಯಾಗಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ