AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ

ಗ್ಯಾರಂಟಿ ಕಾರ್ಡ್​ನಲ್ಲಿ ಸಹಿಹಾಕುವಾಗ ಯೋಚನೆ ಮಾಡಬೇಕಿತ್ತು. ಸುಳ್ಳು ಹೇಳುವುದು ಕಾಂಗ್ರೆಸ್ ಡಿಎನ್​​ಎನಲ್ಲಿದೆ. ಹಿಮಾಚಲಪ್ರದೇಶ, ರಾಜಸ್ಥಾನದಲ್ಲಿ ಗ್ಯಾರಂಟಿ ಈಡೇರಿಸಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ
ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​​ ಜೋಶಿ
ಹರೀಶ್ ಜಿ.ಆರ್​.
| Edited By: |

Updated on: Jun 28, 2023 | 7:01 PM

Share

ದೆಹಲಿ: ಯಾರನ್ನೂ ಕೇಳದೆ ಸಿದ್ದರಾಮಯ್ಯ ಅಕ್ಕಿ ಘೋಷಣೆ ಮಾಡಿದ್ದಾರೆ. ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ. ನೈಸರ್ಗಿಕ ವಿಕೋಪ, ತುರ್ತು ಪರಿಸ್ಥಿತಿಯಲ್ಲಿ ಅಕ್ಕಿ ಕೊಡಬೇಕು. ಕೇಂದ್ರದ ಬಳಿ ಅಕ್ಕಿ ಇದ್ದರೆ ಕೊಡುತ್ತಿದ್ದೆವು ಎಂದಿದ್ದಾರೆ.

ಬೇರೆ ರಾಜ್ಯಗಳು ಕೂಡ ಅಕ್ಕಿ ಕೇಳಿದರೆ ಎಲ್ಲಿಂದ ಕೊಡುವುದು. ಕೇಂದ್ರ ಸರ್ಕಾರದ ಬಳಿ ಅಕ್ಕಿ ಸ್ಟಾಕ್ ಇರಲೇಬೇಕು. ಗ್ಯಾರಂಟಿ ಕಾರ್ಡ್​ನಲ್ಲಿ ಸಹಿಹಾಕುವಾಗ ಯೋಚನೆ ಮಾಡಬೇಕಿತ್ತು. ಸುಳ್ಳು ಹೇಳುವುದು ಕಾಂಗ್ರೆಸ್ ಡಿಎನ್​​ಎನಲ್ಲಿದೆ. ಹಿಮಾಚಲಪ್ರದೇಶ, ರಾಜಸ್ಥಾನದಲ್ಲಿ ಗ್ಯಾರಂಟಿ ಈಡೇರಿಸಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ವಿಪಕ್ಷ ನಾಯಕರ ಜೊತೆ ಒಳ ಒಪ್ಪಂದ: ಶಾಸಕ ಯತ್ನಾಳ್​ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ

10 ಕೆಜಿ ಅಕ್ಕಿಗೆ ಹಣ ಕೊಟ್ಟಿದ್ರೆ ಮರ್ಯಾದಸ್ಥರ ಲಕ್ಷಣ 

ಕಾಂಗ್ರೆಸ್​ ಕೊಟ್ಟ ಮಾತಿನಂತೆ 10 ಕೆಜಿ ಅಕ್ಕಿಗೆ ಹಣ ಕೊಡಬೇಕು. ಚುನಾವಣೆಗೂ ಮುನ್ನ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಕೇಂದ್ರ ಸರ್ಕಾರ 5 KG ಅಕ್ಕಿ ಕೊಡುತ್ತಿದೆ ಎಂದು ಒಪ್ಪಿಕೊಂಡಂತಾಗಿದೆ. ಇಂದು ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ನಾವೇ ಅಕ್ಕಿಕೊಟ್ಟಿದ್ದು ಎಂದು ದಾರಿ ತಪ್ಪಿಸುತ್ತಿದ್ದರು.

ಹೇಳಿದಂತೆ 10 ಕೆಜಿ ಅಕ್ಕಿಗೆ ಸಿದ್ದರಾಮಯ್ಯ ಹಣ ಕೊಡಬೇಕು. ಕನಿಷ್ಠ ಪಕ್ಷ 5 ಕೆಜಿ ಅಕ್ಕಿಗೆ ಹಣ ಕೊಟ್ರಲ್ಲ ಅನ್ನೋದು ಸಮಾಧಾನ. 10 ಕೆಜಿ ಅಕ್ಕಿಗೆ ಹಣ ಕೊಟ್ಟಿದ್ರೆ ಮರ್ಯಾದಸ್ಥರ ಲಕ್ಷಣ ಆಗುತ್ತಿತ್ತು ಎಂದು ಹರಿಯಿದ್ದಾರೆ.

ಇದನ್ನೂ ಓದಿ: ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ ಟೀಕೆ

ಪಕ್ಷದ ನಾಯಕರ ವಿರುದ್ಧ ರೇಣುಕಾರ್ಯ ಅಸಮಧಾನ ವಿಚಾರವಾಗಿ ಮಾತನಾಡಿದ ಅವರು, ನಾವು ಸೋತಿರಬಹುದು, ನಮ್ಮದು ಐಡಿಯಾಲಜಿ ಪಾರ್ಟಿ. ಯಾವುದೇ ನಾಯಕರು ಬಹಿರಂಗವಾಗಿ ಮಾತನಾಡಬಾರದು. ಪಕ್ಷ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕು. ಶೀಘ್ರದಲ್ಲೇ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆಯಾಗಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ