AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕಾರಣದಲ್ಲಿ ಶುರುವಾಯ್ತು ಚಡ್ಡಿ ರಾಜಕೀಯ: ಬಿಕೆ ಹರಿಪ್ರಸಾದ್ ಬಗ್ಗೆ​ ಜೋಶಿ ಹೇಳಿದ್ದಿಷ್ಟು

ರಾಜ್ಯ ರಾಜಕಾರಣದಲ್ಲಿ ಚಡ್ಡಿ ರಾಜಕೀಯ ಶುರುವಾಗಿದೆ. ಪಂಚೆ ಹಾಕಿಕೊಂಡು ಹ್ಯುಬ್ಲೋಟ್‌ ವಾಚ್‌ ಕಟ್ಟಿಕೊಂಡು, ಒಳಗೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್​ ನಾಯಕ ಬಿಕೆ ಹರಿಪ್ರಸಾದ್​ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಿಷ್ಟು

ರಾಜ್ಯ ರಾಜಕಾರಣದಲ್ಲಿ ಶುರುವಾಯ್ತು ಚಡ್ಡಿ ರಾಜಕೀಯ: ಬಿಕೆ ಹರಿಪ್ರಸಾದ್ ಬಗ್ಗೆ​ ಜೋಶಿ ಹೇಳಿದ್ದಿಷ್ಟು
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on: Dec 10, 2023 | 11:48 AM

Share

ಹುಬ್ಬಳ್ಳಿ, ಡಿಸೆಂಬರ್​ 10: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress)​ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಅವರು​ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದರು. “ಪಂಚೆ ಹಾಕಿಕೊಂಡು ಹ್ಯುಬ್ಲೋಟ್‌ ವಾಚ್‌ ಕಟ್ಟಿಕೊಂಡು, ಒಳಗೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ” ಎಂದು ಹೇಳಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಪ್ರತಿಕ್ರಿಯಿಸಿ ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇಲ್ಲ, ಒಳಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ ಚಡ್ಡಿ ಹಾಕಿದ್ದಾರೆ ಎಂದು ಹರಿಪ್ರಸಾದ್ ಹೇಳಿದ್ದರು. ಹರಿಪ್ರಸಾದ್ ಚಡ್ಡಿ ಹಾಕಿದ್ದಾರೋ ಇಲ್ಲವೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಂಎಲ್​ಸಿ ಬಿಕೆ ಹರಿಪ್ರಸಾದ್ ಯಾವ ಅರ್ಥದಲ್ಲಿ ಈ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಬಿಕೆ ಹರಿಪ್ರಸಾದ್​ ಅವರು ಬಿಜೆಪಿಗೆ ಬೈದಿದ್ದಾರೆ. ಎಲ್ಲ ಮಾತಾಡಿ ಕೊನೆಗೆ ಬಿಜೆಪಿಗೆ ಬೈದರು. ಬಿಕೆ ಹರಿಪ್ರಸಾದ್ ಅವರ​ ವಿರುದ್ಧ ಕಾಂಗ್ರೆಸ್​ನಲ್ಲಿ ಮಸಲತ್ತು ಮಾಡುತ್ತಿದ್ದಾರೆ. ಮಸಲತ್ತು ಮಾಡುತ್ತಿರುವವರ ವಿರುದ್ಧ ಬಿಕೆ ಹರಿಪ್ರಸಾದ್​​ಗೆ ಮಾತನಾಡುವ ತಾಕತ್​ ಇಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಚಡ್ಡಿ ಬಗ್ಗೆ ಮಾತನಾಡುವ ಜಮೀರ್ ಅಹ್ಮದ್​ ಖಾನ್,​ ಸಿಟಿ ರವಿ ಜೊತೆ ಚಡ್ಡಿ ಹಾಕಿ ನಿಂತವ್ರಲ್ಲಾ! ಜಮೀರನ್ನ ಹುಟ್ಟಿಸಿದ್ದೇ ಜೆಡಿಎಸ್ ಎಂದ ಚನ್ನಪಟ್ಟಣ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ

ಬಿಕೆ ಹರಿಪ್ರಸಾದ್ ಅವರನ್ನು ಈಡಿಗ ಸಮುದಾಯ ಗುರುತಿಸಿದೆ. ಅದರ ವಿರುದ್ಧ ಸಿದ್ದರಾಮಯ್ಯ ಸಮಾವೇಶ ಮಾಡುತ್ತಿದ್ದಾರೆ. ಅವರು ಎಷ್ಟು ಪುಟೀತಾರೆ ನೋಡಿ‌ ಮುಂದೆ ಮಾತಾಡೋಣ ಎಂದು ಹೇಳಿದರು.

ಸರ್ಕಾರದಲ್ಲಿ ಜಗಳ, ಪರಸ್ಪರ ಕೆಸರೆಚಾಟ ಹೆಚ್ಚಾಗಿದೆ. ಇದರಿಂದ ಆಡಳಿತದ ಮೇಲೆ ಪರಿಣಾಮ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ನೀಡುವ ಅಕ್ಕಿ ಬಿಟ್ಟು ಒಂದು ಕಾಳು ಅಕ್ಕಿ ಕೂಡ ರಾಜ್ಯ ಸರ್ಕಾರ ಕೊಟ್ಟಿಲ್ಲ. ಅದನ್ನೇ ಅನ್ನಭಾಗ್ಯ ಅಂತಿದ್ದಾರೆ. ಇದು ಸಿಸಿ (ಕಾಂಪಿಟೇಷನ್ ಇನ್ ಕರಪ್ಷನ್) ಸರ್ಕಾರ. ಸರ್ಕಾರ ವಿದ್ಯುತ್​ ಕೊಡುತ್ತಿಲ್ಲ ಎಂದು ರೈತರೇ ಹೇಳುತ್ತಿದ್ದಾರೆ. ಸರ್ಕಾರ ತನ್ನ ಕಂಟ್ರೋಲ್‌ ‌ಕಳೆದುಕೊಂಡಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ