AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲ್ಲದ ಕಾಂಗ್ರೆಸ್ ಶಾಸಕ-ಬಿಜೆಪಿ ಸಂಸದರ ಜಟಾಪಟಿ: ನಾರಾಯಣಸ್ವಾಮಿ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದ ಮುನಿಸ್ವಾಮಿ

ಕೋಲಾರ(Kolar) ಕಾನೂನು ಸುವ್ಯವಸ್ಥೆ ಬಗ್ಗೆ ನಾನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಶ್ನಿಸಿದ್ದು, ರೈತರ ಅಹವಾಲು ಕೇಳಿ ಎಂದು ಸಚಿವರಿಗೆ ಮನವಿ ಮಾಡಿದೆ. ನಿಮ್ಮ ಪಕ್ಷದಲ್ಲೂ ಭೂಗಳ್ಳರು ಇದ್ದು, ಸರ್ಕಾರಿ ಜಮೀನನ್ನು ತೆರವುಗೊಳಿಸಿ ಜನರಿಗೆ ನ್ಯಾಯ ಕೊಡಬೇಕು ಅಂದರೆ, ನಿಮ್ಮ ಪಕ್ಕದಲ್ಲಿರುವ ಭೂಗಳ್ಳರ ವಿರುದ್ಧ ಕ್ರಮ ಕೈಗೊಳ್ಳಿ, ನಾರಾಯಣಸ್ವಾಮಿ ನನ್ನ ಲೋಫರ್ ಎಂದು ಪದ ಬಳಕೆ ಮಾಡಿದರು ಎಂದು ಸಂಸದ

ನಿಲ್ಲದ ಕಾಂಗ್ರೆಸ್ ಶಾಸಕ-ಬಿಜೆಪಿ ಸಂಸದರ ಜಟಾಪಟಿ:  ನಾರಾಯಣಸ್ವಾಮಿ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದ ಮುನಿಸ್ವಾಮಿ
ಎಂಪಿ ಮುನಿಸ್ವಾಮಿ
Follow us
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 28, 2023 | 1:44 PM

ಬೆಂಗಳೂರು, ಸೆ.28: ಬಿಜೆಪಿ ಸಂಸದ ಎಸ್.ಮುನಿಸ್ವಾಮಿ (S.Muniswamy) ಮತ್ತು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್​.ನಾರಾಯಣಸ್ವಾಮಿ (S.N.Narayanaswamy) ನಡುವೆ ಜಟಾಪಟಿಗೆ ಸಂಬಂಧಿಸಿದಂತೆ ‘ ಕೋಲಾರ(Kolar) ಕಾನೂನು ಸುವ್ಯವಸ್ಥೆ ಬಗ್ಗೆ ನಾನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಶ್ನಿಸಿದ್ದು, ರೈತರ ಅಹವಾಲು ಕೇಳಿ ಎಂದು ಸಚಿವರಿಗೆ ಮನವಿ ಮಾಡಿದೆ. ನಿಮ್ಮ ಪಕ್ಷದಲ್ಲೂ ಭೂಗಳ್ಳರು ಇದ್ದು, ಸರ್ಕಾರಿ ಜಮೀನನ್ನು ತೆರವುಗೊಳಿಸಿ ಜನರಿಗೆ ನ್ಯಾಯ ಕೊಡಬೇಕು ಅಂದರೆ, ನಿಮ್ಮ ಪಕ್ಕದಲ್ಲಿರುವ ಭೂಗಳ್ಳರ ವಿರುದ್ಧ ಕ್ರಮ ಕೈಗೊಳ್ಳಿ, ನಾರಾಯಣಸ್ವಾಮಿ ನನ್ನ ಲೋಫರ್ ಎಂದು ಪದ ಬಳಕೆ ಮಾಡಿದರು. ನಾನು ಅದಕ್ಕೆ ವಾಪಸ್ಸು ತಿರುಗಿದೆನೇ ಹೊರತು, ಅವರಿಗೆ ಕೆಟ್ಟ ಪದ ಬಳಕೆ ಮಾಡಿಲ್ಲ ಎಂದು ಕೋಲಾರ ಸಂಸದ ಎಸ್. ಮುನಿಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

‘ಈ ವೇಳೆ ಎಸ್ಪಿ ಸೇರಿ ಪೊಲೀಸರು ನನ್ನನ್ನು ಬಲವಂತವಾಗಿ ಹೊರಗೆ ಕಳುಹಿಸಿದ್ರು, ಎಸ್ಪಿ ಅವರು ನಾರಾಯಣಸ್ವಾಮಿ ಕಾಂಗ್ರೆಸ್ ಏಜೆಂಟ್ ಅಂತೆ. ನನ್ನನ್ನು ತಬ್ಬಿದ್ದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತೆ. ನಾನು ಅವಾಚ್ಯ ಶಬ್ದಗಳು ಬಳಸಿದ್ರೆ, ನನ್ನ ವಿರುದ್ದವೂ ಕ್ರಮ ತಗೊಳ್ಳಲಿ. ನಾನು ಯಾರಿಗೂ ಯಾವುದೇ ನಿಂದನೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಇದೆ ಎಂದು ದೌರ್ಜನ್ಯ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ, ಸಿಎಂ ಸೆಕ್ಯುರಿಟಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ಕ್ರಮ ತಗೆದುಕೊಳ್ಳಬೇಕು. ನಾನೊಬ್ಬ ದಲಿತ ಸಂಸದನಾಗಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:ರಾಜಭವನ ತಲುಪಿದ ಕೋಲಾರ ಬಿಜೆಪಿ ಸಂಸದ ಮುನಿಸ್ವಾಮಿ-ಕಾಂಗ್ರೆಸ್​ ಶಾಸಕ ನಾರಾಯಣಸ್ವಾಮಿ ಜಟಾಪಟಿ

ಇನ್ನು ಇದೇ ವೇಳೆ ಅವರದ್ದೇ ಪಕ್ಷದಲ್ಲಿರುವ ಶಾಸಕರು ನೂರಾರು ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದಕ್ಕೆ ನನ್ನ ಬಳಿ ದಾಖಲೆಗಳು ಇವೆ. ಶಾಸಕ ನಾರಾಯಣ ಸ್ವಾಮಿ ಅಕ್ರಮವಾಗಿ ಸರ್ಕಾರಿ ಭೂಮಿಗೆ ಬೇಲಿ ಹಾಕಿದ್ದಾರೆ. ಡಿ.ಕೆ. ರವಿ ಇದ್ದಾಗ ಎಲ್ಲಾ ಸರ್ಕಾರದ ಭೂಮಿಗೆ ಬೇಲಿ ಹಾಕಿದ್ದರು. ಡಿ.ಕೆ. ರವಿ ಸಾವಿಗೆ ನಾರಾಯಣ ಸ್ವಾಮಿ ಕೂಡ ಕಾರಣ ಎನ್ನುವ ಮಾತಿದೆ. ಗೋಮಾಳ ಭೂಮಿ, ಸರ್ಕಾರಿ ಕ್ವಾರೆ ಎಲ್ಲದಕ್ಕೂ ನಾರಾಯಣ ಸ್ವಾಮಿ ಬೇಲಿ ಹಾಕಿದ್ದಾರೆ. ಇನ್ನು ಕೋಲಾರ ಕ್ಲಾರ್ಕ್ ಟವರ್ ದ್ವಾರದಲ್ಲಿ ಕತ್ತಿ ಹಾಕಿದ ವಿಚಾರ ‘ ಈದ್ ಮಿಲಾದ್ ಎಂದು ಕತ್ತಿಗಳ ದ್ವಾರ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ರೆ ನಗರ ಸಭೆಯವರು ಅನುಮತಿ ಕೊಟ್ಟಿದ್ದಾರೆ ಎಂದು ಪೊಲೀಸರು ಹೇಳುತ್ತಾರೆ.

‘ನಾವು ಅಲ್ಲಿ ಗಣೇಶ ಹಬ್ಬಕ್ಕೆ ತ್ರಿಶೂಲ ಹಾಕ್ತೀವಿ ಅಂದಾಗ ಅದಕ್ಕೆ ಅವಕಾಶ ಕೊಟ್ಟಿಲ್ಲ. ಇದು ಎಷ್ಟರ ಮಟ್ಟಿಗೆ ಸರಿ?. ಕೋಲಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಜಿಲ್ಲೆಯಲ್ಲಿ ವೇಶ್ಯಾವಾಟಿಕೆ , ಒಟ್ಟು 16 ಕೊಲೆಗಳು ಆಗಿವೆ. ನಿನ್ನೆ(ಸೆ.27) 2 ಕೊಲೆಗಳು ಆಗಿವೆ. ಎಸ್ಪಿ ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ. ಸಂಸದ ಆದ ಮೇಲೆ ಆದ ಅಭಿವೃದ್ಧಿ ಕಾರ್ಯಕ್ರಮಗಳ‌ ‌ಹೆಸರು‌‌ ಹೇಳಿ ಎಂಬ ಪ್ರಶ್ನೆಗೆ ತಡಬಡಾಯಿಸಿದ‌ ಮುನಿಸ್ವಾಮಿ, ಅಭಿವೃದ್ಧಿ ‌ಕಾಮಗಾರಿಗಳ‌ ಹೆಸರು‌ ಹೇಳದೇ ಮತ್ತೊಂದು ಸುದ್ದಿಗೋಷ್ಟಿ ಕರೆದು ಮಾತಾಡ್ತೇನೆ ಎಂದು ಜಾರಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ