AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಇಲ್ಲ, ಜನರಿಗೆ ಬಿಪಿಎಲ್​ ಕಾರ್ಡ್ ಇಲ್ಲ: ಇದು ಬಿಜೆಪಿ ಸರ್ಕಾರದ ಬೀಳ್ಕೊಡಿಗೆ ಭಾಷಣ ಎಂದ ಖಾದರ್

ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗುವುದಿಲ್ಲ. ಜನಸಾಮಾನ್ಯರಿಗೆ ಒಂದು ಬಿಪಿಎಲ್ ಕಾರ್ಡ್ ಕೊಡುವುದಿಲ್ಲ. ಗರ್ಭಿಣಿಯರಿಗೆ ತಾಯಿ ಕಾರ್ಡ್ ಕೊಡ್ತಿಲ್ಲ ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್​ ಕಿಡಿಕಾರಿದರು.

TV9 Web
| Edited By: |

Updated on: Feb 15, 2023 | 6:34 PM

Share

ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗುವುದಿಲ್ಲ. ಜನಸಾಮಾನ್ಯರಿಗೆ ಒಂದು ಬಿಪಿಎಲ್ ಕಾರ್ಡ್ ಕೊಡುವುದಿಲ್ಲ. ಗರ್ಭಿಣಿಯರಿಗೆ ತಾಯಿ ಕಾರ್ಡ್ ಕೊಡ್ತಿಲ್ಲ ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ (U.T. Khader) ಕಿಡಿಕಾರಿದರು. ಭೋಜನ ವಿರಾಮದ ಬಳಿಕ ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ 7 ಕೆಜಿ ಅಕ್ಕಿ ಕೊಡುತ್ತಿದ್ದಿದ್ದನ್ನು 5 ಕೆಜಿಗೆ ತಂದು ನಿಲ್ಲಿಸಿದ್ದಾರೆ. ಸರಿಯಾದ ಸಮಯದಲ್ಲಿ ಅಕ್ಕಿ ಕೂಡ ಬರಲ್ಲ. ಕ್ವಾಲಿಟಿ ನೋಡಲ್ಲ. ಬಿಪಿಎಲ್ ಕಾರ್ಡ್​ನ್ನು ಇದುವರೆಗೂ ಕೊಟ್ಟಿಲ್ಲ. ಆಸ್ಪತ್ರೆಗೆ ಬಿಪಿಎಲ್ ಕಾರ್ಡ್ ಕಡ್ಡಾಯ ಮಾಡಿದರು. ಕಾರ್ಡ್ ಇಲ್ಲದವರು ಎಲ್ಲಿಗೆ ಹೋಗಬೇಕು? ಆಸ್ಪತ್ರೆಯ ಬಿಲ್ ಕಟ್ಟೋದು ಎಲ್ಲಿಂದ? ಇವರು ರಿಪೋರ್ಟ್ ಕಾರ್ಡ್ ಹಿಡಿದಿಕೊಂಡು ಹೋಗುತ್ತಾರಂತೆ. ಕರಾವಳಿಯಲ್ಲಿ ಇದುವರೆಗೂ ಕುಚ್ಚಲಕ್ಕಿ ಕೊಡುತ್ತಿಲ್ಲ ಎಂದು ವಾಗ್ದಾಳಿ ಮಾಡಿದರು.

ಇದು ಸರ್ಕಾರಕ್ಕೆ ಬೀಳ್ಕೊಡುಗೆ ಭಾಷಣ

ರಾಜ್ಯಪಾಲರ ಭಾಷಣ ಇದು ಸರ್ಕಾರಕ್ಕೆ ಬೀಳ್ಕೊಡುಗೆ ಭಾಷಣ. ಯಡಿಯೂರಪ್ಪ ಪರಿಶ್ರಮದ ಫಲದಿಂದ ಇಂದು ಬಹಳಷ್ಟು ಬಿಜೆಪಿ ನಾಯಕರು ದೆಹಲಿಯಲ್ಲಿ ಇದ್ದಾರೆ. ಆದರೆ ಯಡಿಯೂರಪ್ಪ ಘೋಷಿಸಿರುವ 2 ವರ್ಷದ ಯೋಜನೆ ಸಂಪೂರ್ಣ ಮಾಡಲು ಕೊಡಲಿಲ್ಲ. ಹೈಕಮಾಂಡ್ ಕಿವಿ ಊದಿ ಯಡಿಯೂರಪ್ಪನವರಿಗೆ ಕಣ್ಣೀರು ತರಿಸಿದ್ರು. ಅಲ್ಲದೇ ರಾಜೀನಾಮೆ ಕೊಡುವ ಪರಿಸ್ಥಿತಿಗೆ ತಂದು ನಿಲ್ಲಿಸಿದ್ರು. ಬಿಎಸ್​ವೈ ಬಗ್ಗೆ ಮಾತನಾಡುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ ರಾಜ್ಯಪಾಲರ ಭಾಷಣದ ಬಗ್ಗೆ ಮಾತನಾಡಿ ಎಂದು ಸ್ಪೀಕರ್ ಪೀಠದಲ್ಲಿದ್ದ ಕುಮಾರ್ ಬಂಗಾರಪ್ಪರಿಂದ ಖಾದರ್​​ಗೆ ಸೂಚನೆ ನೀಡಲಾಯಿತು.

ಇದನ್ನೂ ಓದಿ: ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಜಡ್ಜ್​ ಹುದ್ದೆಗೆ ರಾಜೀನಾಮೆ, ಯಾವ ಪಕ್ಷ, ಯಾವ ಕ್ಷೇತ್ರ?

ಡಬಲ್ ಇಂಜಿನ್‌ನ ಇಂಧನ ಕೋಮುವಾದದ ಇಂಧನ

ಜನರಿಗೆ ಕಷ್ಟ ಬರುವಾಗ ಇಂಜಿನ್ ಆಫ್ ಆಗುತ್ತದೆ. ಇದು ಡಬಲ್ ಇಂಜಿನ್ ಸರ್ಕಾರದ ಸಮಸ್ಯೆ ಎಂದು ಕಿಡಿಕಾರಿದರು. ಯಾರದ್ದೂ ಇಂಜಿನ್ ವರ್ಕ್ ಆಗಲ್ಲವೆಂದು. ನರಳಾಡಿ ಸತ್ತವನು ಸತ್ತ, ಬದುಕಿದವನು ಬದುಕಿದ. ಡಬಲ್ ಇಂಜಿನ್‌ನ ಇಂಧನ ಕೋಮುವಾದದ ಇಂಧನ. ಇಂಜಿನ್‌ನಿಂದ ಬರುವ ಹೊಗೆ ಸಮಾಜ‌ ಒಡೆಯುವ ವಿಷಕಾರಿ ಹೊಗೆ. ಭ್ರಷ್ಟಾಚಾರದಿಂದಲೇ‌ ಇಂಜಿನ್ ತಯಾರು ಮಾಡಲಾಗಿದೆ ಯು.ಟಿ.ಖಾದರ್ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಬ್ರಾಹ್ಮಣ ಸಿಎಂ ವಿಚಾರ: ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ವಿಧಾನ ಪರಿಷತ್​​ ಮಾಜಿ ಸದಸ್ಯೆ ಎಸ್​ ಆರ್​ ಲೀಲಾ

ಎಪಿಎಲ್ ಆಗಿರುವವರು ಬಿಪಿಎಲ್ ಆಗುತ್ತಾರೆ 

ಆಸ್ಪತ್ರೆಗೆ ಹೋಗುವಾಗ ಎಪಿಎಲ್ ಆಗಿರುತ್ತಾರೆ. ಅಲ್ಲಿಂದ ಬರುವಾಗ ಬಿಪಿಎಲ್ ಆಗಿ ಬರುತ್ತಾರೆ. ಪ್ರತಿ ಕ್ಷೇತ್ರದಲ್ಲಿ 57 ಸಾವಿರ ಮನೆ ಇರುವ ಕಡೆ 60 ಸಾವಿರ ಕಾರ್ಡ್ ಕೊಟ್ಟಿದ್ದಾರೆ. ನಾವು ಬಿಪಿಎಲ್ ಇರುವುದನ್ನು ಎಪಿಎಲ್ ಮಾಡಿರುವ ಬಗ್ಗೆ ರೆಕಾರ್ಡ್ ತೆಗೆದು ನೋಡಲಿ. ಎಷ್ಟೋ ಜನರು ಬಿಪಿಎಲ್​ನಿಂದ ಎಪಿಎಲ್ ಮಾಡಿರುವುದಕ್ಕೆ ನಮ್ಮ ಮೇಲೆ ಬೇಸರ ಆಗಿದ್ದಾರೆ. ಎಷ್ಟೋ ಅನರ್ಹರಿಗೆ ಬಿಪಿಎಲ್ ಕಾರ್ಡ್ ಬದಲಾಗಿ ಎಪಿಎಲ್ ಕೊಡ್ತಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು. 5% ಕಳ್ಳರನ್ನು ಹಿಡಿಯಲು ಹೋಗಿ 95% ಜನರ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿದರು.

ಖಾದರ್​ಗೆ ತಿರುಗೇಟು ನೀಡಿದ ಸಿದ್ದು ಸವದಿ

ಕೋವಿಡ್ ವೇಳೆ ಲಸಿಕೆ ಮಾಡಿದ್ದು ಪ್ರೈವೇಟ್ ಕಂಪನಿ. ಕೋವಿಡ್ ಲಸಿಕೆ ತಯಾರು ಮಾಡಿದವನಿಗೆ ಅವಾರ್ಡ್ ಕೊಡಬೇಕಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಕೊಡುಗೆ ಏನೂ ಇಲ್ಲ. ನಮ್ಮ ಗ್ರಹಚಾರ ಪೂನಾವಾಲಾ ದೇಶ ಬಿಟ್ಟು ಓಡಿ ಹೋದ ಎಂದು ಖಾದರ್ ಹೇಳಿದರು. ಮಧ್ಯ ಪ್ರವೇಶ ಮಾಡಿದ ತೇರದಾಳ ಶಾಸಕ ಸಿದ್ದು ಸವದಿ ಪೂನಾವಾಲಾ ಮೇಲೆ ಪ್ರೀತಿ ಇದ್ದರೆ ಅವರ ಲಸಿಕೆ ತಿರಸ್ಕಾರ ಮಾಡಿದ್ರಲ್ಲಾ? ಗಂಡಸ್ತನ ಹೋಗುತ್ತದೆ ಯಾರೂ ಲಸಿಕೆ ತಗೋಬೇಡಿ ಅಂದ್ರಲ್ವಾ? ಆವತ್ತು ನೀವೇ ಲಸಿಕೆ ತೆಗೆದುಕೊಳ್ಳಬೇಡಿ ಸಾಯ್ತಾರೆ ಅಂದ್ರಲ್ವಾ ಎಂದು ಖಾದರ್​ಗೆ ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು