AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾಗಿ ರಾಜೀನಾಮೆ ಹಿಂಪಡೆದ ಸಚಿವ ದಿನೇಶ್ ಕಾಟಿಕ್

ಇಲಾಖೆಯ ಅಧಿಕಾರಿಗಳು ತನಗೆ ಸೂಕ್ತ ಗೌರವವನ್ನು ನೀಡುತ್ತಿಲ್ಲ. ನಮಾಮಿ ಗಂಗೆ ಮತ್ತು ಹರ್ ಘರ್ ಜಲ್ ಯೋಜನೆಗಳ ಅನುಷ್ಠಾನದಲ್ಲಿ ನಿಯಮಗಳನ್ನು ಅನುಸರಿಸುತ್ತಿಲ್ಲ. ವರ್ಗಾವಣೆ ಹೆಸರಿನಲ್ಲಿ ನನ್ನ ಇಲಾಖೆಯಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ದಿನೇಶ್ ಕಾಟಿಕ್ ಆರೋಪಿಸಿದ್ದರು.

ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾಗಿ ರಾಜೀನಾಮೆ ಹಿಂಪಡೆದ ಸಚಿವ ದಿನೇಶ್ ಕಾಟಿಕ್
ದಿನೇಶ್ ಕಾಟಿಕ್
TV9 Web
| Updated By: ಸುಷ್ಮಾ ಚಕ್ರೆ|

Updated on: Jul 22, 2022 | 10:59 AM

Share

ನವದೆಹಲಿ: ವರ್ಗಾವಣೆಯಲ್ಲಿ ಅವ್ಯವಹಾರ ಹಾಗೂ ದಲಿತ ಎಂಬ ಕಾರಣಕ್ಕೆ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಉತ್ತರ ಪ್ರದೇಶದ ಜಲಶಕ್ತಿ ಖಾತೆ ಸಚಿವ ದಿನೇಶ್ ಕಾಟಿಕ್ (Dinesh Khatik) ರಾಜೀನಾಮೆ ಪತ್ರ ಕಳುಹಿಸಿದ್ದರು. ಅದಾದ ಒಂದು ದಿನದ ಬಳಿಕ ದಿನೇಶ್ ಕಾಟಿಕ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದು, ಸಚಿವರಾಗಿ ಕೆಲಸ ಮುಂದುವರೆಸುವುದಾಗಿ ಹೇಳಿಕೆ ನೀಡಿದ್ದಾರೆ.

ತಮ್ಮ ರಾಜೀನಾಮೆಯನ್ನು ಕಳುಹಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಜಲಶಕ್ತಿ ರಾಜ್ಯ ಸಚಿವ ದಿನೇಶ್ ಕಾಟಿಕ್ ಗುರುವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ತಮ್ಮ ನಡುವಿನ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗಿರುವುದರಿಂದ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.

ದಿನೇಶ್ ಕಾಟಿಕ್ ಅವರು ಜುಲೈ 19ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಗವರ್ನರ್ ಆನಂದಿಬೆನ್ ಪಟೇಲ್ ಅವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬರೆದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿಕೊಂಡಿದ್ದರು. ಆ ಪತ್ರದಲ್ಲಿ ದಿನೇಶ್ ಕಾಟಿಕ್ ಅವರು ತಮ್ಮ ಇಲಾಖೆಯ ಭ್ರಷ್ಟಾಚಾರ ಮತ್ತು ಸಚಿವಾಲಯದಲ್ಲಿನ ಅಧಿಕಾರಿಗಳ ವರ್ತನೆಯೇ ತಮ್ಮ ರಾಜೀನಾಮೆಗೆ ಕಾರಣ ಎಂದು ಉಲ್ಲೇಖಿಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಆದರೆ, ಇದೀಗ ಅವರ ಅಸಮಾಧಾನ ಕಡಿಮೆಯಾಗಿದ್ದು, ರಾಜೀನಾಮೆ ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಗುರುವಾರ ಸಂಜೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ದಿನೇಶ್ ಕಾಟಿಕ್, ನಾನು ನನ್ನ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಮುಂದೆ ಇಟ್ಟಿದ್ದೇನೆ. ಅವುಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಪತ್ರದಲ್ಲಿ ಉಲ್ಲೇಖಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಸಿಎಂ ಮುಂದೆ ಸಮಸ್ಯೆಗಳನ್ನು ಮಂಡಿಸಿದ್ದೇನೆ ಎಂದರು.

ತಮ್ಮ ಇಲಾಖೆಯ ಅಧಿಕಾರಿಗಳು ತನಗೆ ಸೂಕ್ತ ಗೌರವವನ್ನು ನೀಡುತ್ತಿಲ್ಲ. ನಮಾಮಿ ಗಂಗೆ ಮತ್ತು ಹರ್ ಘರ್ ಜಲ್ ಯೋಜನೆಗಳ ಅನುಷ್ಠಾನದಲ್ಲಿ ನಿಯಮಗಳನ್ನು ಅನುಸರಿಸುತ್ತಿಲ್ಲ. ವರ್ಗಾವಣೆ ಹೆಸರಿನಲ್ಲಿ ನನ್ನ ಇಲಾಖೆಯಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ದಿನೇಶ್ ಕಾಟಿಕ್ ಆರೋಪಿಸಿದ್ದರು.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ