AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಅನುಭವ ಬಳಸಿಕೊಳ್ಳುವುದು ಬಿಡುವುದು ಹೈಕಮಾಂಡ್​​​​ಗೆ ಬಿಟ್ಟಿದ್ದು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ವಿ ಸೋಮಣ್ಣ ಮತ್ತೆ ಬೇಡಿಕೆ

ಪ್ರಾಣದ ಹಂಗು ತೊರೆದು ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಹಾಗಾಗಿ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಇತ್ತೀಚೆಗೆ ಹೈಕಮಾಂಡ್​ಗೆ ಮನವಿ ಮಾಡಿದ್ದರು. ಇದೀಗ ಮತ್ತೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿರುವ ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟರೆ ಅದರ ಮಜವೇ ಬೇರೆ ಇರುತ್ತೆ ಎಂದು ಹೇಳಿದ್ದಾರೆ.

ನನ್ನ ಅನುಭವ ಬಳಸಿಕೊಳ್ಳುವುದು ಬಿಡುವುದು ಹೈಕಮಾಂಡ್​​​​ಗೆ ಬಿಟ್ಟಿದ್ದು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ವಿ ಸೋಮಣ್ಣ ಮತ್ತೆ ಬೇಡಿಕೆ
ಮಾಜಿ ಸಚಿವ ವಿ.ಸೋಮಣ್ಣ
ಪ್ರಸನ್ನ ಗಾಂವ್ಕರ್​
| Edited By: |

Updated on:Aug 12, 2023 | 3:05 PM

Share

ಬೆಂಗಳೂರು, ಆಗಸ್ಟ್​ 12: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟರೆ ಅದರ ಮಜವೇ ಬೇರೆ ಇರುತ್ತೆ. ನನ್ನ ಅನುಭವ ಬಳಸಿಕೊಳ್ಳುವುದು, ಬಿಡುವುದು ಹೈಕಮಾಂಡ್​​​​ಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಮಾಜಿ ಸಚಿವ ವಿ.ಸೋಮಣ್ಣ (V Somanna)  ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬೇಡಿಕೆ ಇಟ್ಟಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​​​ ಮಾದರಿಯಲ್ಲೇ ಬಿಜೆಪಿಯಲ್ಲೂ 2 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸಲಿ. ಆ ಮೂಲಕ ನಾವು ಹಾಗೇ ಕೆಲಸ ಮಾಡಬಹುದು. ನನಗೆ ಅವಕಾಶ ನೀಡಿದರೆ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗಿಂತ ವೇಗವಾಗಿ​​​​​​ ಕೆಲಸ ಮಾಡುತ್ತೇನೆ. ಸದ್ಯ ಹೈಕಮಾಂಡ್ ಅಂಗಳದಲ್ಲಿ ಬಾಲ್ ಇದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಪಕ್ಷದಲ್ಲಿ ನೂರಾರು ನಾಯಕರು ಇದ್ದಾರೆ. ಕಾರ್ಯಾಧ್ಯಕ್ಷರ ಮೂಲಕ ಕಾಂಗ್ರೆಸ್​​ನವರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಮಿಷನ್ ಆರೋಪ ನಾವು ಮಾಡುತ್ತಿಲ್ಲ

ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿಕೆಯಿಂದ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ನಾವು ಅನುಭವಿಸಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಂಪಣ್ಣ ಹೇಳಿರುವುದೆಲ್ಲಾ ಸತ್ಯ ಎನ್ನುತ್ತಿದ್ದರು. ಈಗ ಯಾಕೆ ಕೆಂಪಣ್ಣ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದರು.

ಇದನ್ನೂ ಓದಿ: ಬೊಮ್ಮಾಯಿ ಕಾಲದ ಬೇಕಾಬಿಟ್ಟಿ ಕಾಮಗಾರಿಗೆ ಹಣಕಾಸು ಇಲಾಖೆಯೇ ಒಪ್ಪಿರಲಿಲ್ಲ: ಜಗದೀಶ್​ ಶೆಟ್ಟರ್ ಸಿಡಿಗುಂಡು!

ಈಗ ಕಮಿಷನ್ ಆರೋಪ ನಾವು ಮಾಡುತ್ತಿಲ್ಲ. ಗುತ್ತಿಗೆದಾರರು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಲಿತರಾಗಬಾರದು. ಉಪಮುಖ್ಯಮಂತ್ರಿ ಸ್ಥಾನದಿಂದ ಇನ್ನೊಂದು ಹೆಜ್ಜೆ ಮುಂದೆ ಹೋಗೋದಿದೆ ಎಂದು ಹೇಳಿದರು.

ಗುತ್ತಿಗೆದಾರರ ಕಾಮಗಾರಿ ಬಿಲ್​​​​​ ತಡೆಹಿಡಿಯುವುದು ಬೇಡ

ಗುತ್ತಿಗೆದಾರರ ಬಿಲ್ ಹಿಡಿದುಕೊಳ್ಳುವುದು ಬೇಡ. ಡಿ.ಕೆ.ಶಿವಕುಮಾರ್​​ ನನಗೆ ಬೇಕಾದಂತಹ ವ್ಯಕ್ತಿ. ಹಿಂದೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಅಂತಾ ನಾನೇ ಹೇಳಿದ್ದೆ. ಆದರೆ ರಾಜಕೀಯ ಬೇರೆ, ಅವರನ್ನು ಬೇರೆಯವರಿಗೆ ಹೋಲಿಸಲ್ಲ. ಗುತ್ತಿಗೆದಾರರ ಕಾಮಗಾರಿ ಬಿಲ್​​​​​ ತಡೆಹಿಡಿಯುವುದು ಬೇಡ ಎಂದರು.

ಇದನ್ನೂ ಓದಿ: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್​​ನಲ್ಲಿ ಬೆಂಕಿ ಪ್ರಕರಣ: ಬೆಂಜೀನ್​​​ನಿಂದ ದುರಂತ ಸಂಭವಿಸಿರಬಹುದು: ಮುಖ್ಯ ಇಂಜಿನಿಯರ್​ ಬಿಎಸ್ ಪ್ರಹ್ಲಾದ್ ​ ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್​​ನಲ್ಲಿ ಬೆಂಕಿ ಪ್ರಕರಣವಾಗಿ ಪ್ರತಿಕ್ರಿಯೆ ನೀಡಿದ್ದು, ನನ್ನ ಪ್ರಕಾರ ಇದೊಂದು ಆಕಸ್ಮಿಕವಾಗಿ ನಡೆದಿರುವ ಘಟನೆ. ಆದರೆ ಡಿಕೆ ಶಿವಕುಮಾರ್​​ ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದ್ದಾರೆ. ಸರ್ಕಾರ, ಅಧಿಕಾರ ಎಂದಿಗೂ ಶಾಶ್ವತವಲ್ಲ. ನಾನು ನಿಮಗೆ ನೀತಿ ಪಾಠ ಹೇಳೋದಕ್ಕೆ ಬಂದಿಲ್ಲ.

ಗುತ್ತಿಗೆದಾರರಿಗೆ ಯಾವ ಜಾತಿ, ಪಕ್ಷವೂ ಇಲ್ಲ. ಗುತ್ತಿಗೆದಾರರು ಎಲ್ಲರೂ ತಪ್ಪಿತಸ್ಥರು ಅಂದ್ದರೆ ನಾನು ಒಪ್ಪುವುದಿಲ್ಲ. ಗುತ್ತಿಗೆದಾರರ ಸಂಕಷ್ಟದ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಗುತ್ತಿಗೆದಾರರನ್ನು ಒಂದೇ ಅಳತೆಗೋಲಿನಲ್ಲಿ ನೋಡಬೇಡಿ. ಅಧಿಕಾರ ಎಂದಿಗೂ ಶಾಶ್ವತ ಅಲ್ಲ. ಸದನದೊಳಗೆ ಮಾತಾಡಬೇಕಾದ ನಾನೀಗ ಹೊರಗೆ ಮಾತಾಡುತ್ತಿದ್ದೇನೆ. ಅದೆಲ್ಲ ಪ್ರಕೃತಿ ನಿಯಮ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:57 pm, Sat, 12 August 23

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು