AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Poll 2023: ಕಾಂಗ್ರೆಸ್​ನಲ್ಲಿ ಜಾತಿವಾರು ಟಿಕೆಟ್​ ಲಾಬಿ ಶುರು, ಯಾವ ಸಮುದಾಯ ಎಷ್ಟು ಟಿಕೆಟ್​ಗೆ ಬೇಡಿಕೆ?

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಇದರ ಮಧ್ಯೆ ಕಾಂಗ್ರೆಸ್​ನಲ್ಲಿ ಟಿಕೆಟ್​ ಹಂಚಿಕೆಯಲ್ಲಿ ಜಾತಿ ಲೆಕ್ಕಾಚಾರ ಜೋರಾಗಿದೆ. ತಮ್ಮ ಸಮುದಾಯಕ್ಕೆ ಇಂತಿಷ್ಟು ಟಿಕೆಟ್​ ನೀಡಬೇಕೆಂದು ಬೇಡಿಕೆ ಇಟ್ಟಿವೆ.

Karnataka Assembly Poll 2023: ಕಾಂಗ್ರೆಸ್​ನಲ್ಲಿ ಜಾತಿವಾರು ಟಿಕೆಟ್​ ಲಾಬಿ ಶುರು, ಯಾವ ಸಮುದಾಯ ಎಷ್ಟು ಟಿಕೆಟ್​ಗೆ ಬೇಡಿಕೆ?
ಕಾಂಗ್ರೆಸ್​ ಪಕ್ಷದ ಧ್ವಜ (ಸಾಂದರ್ಭಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on:Mar 09, 2023 | 3:55 PM

Share

ಬೆಂಗಳೂರು:  ವಿಧಾನಸಭೆ ಚುನಾವಣೆಗಾಗಿ (Kazrnataka Assembly Elections 2023) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್‌ನಲ್ಲಿ (Congress)ಜಾತಿವಾರು ಟಿಕೆಟ್​ ಲಾಬಿ ಶುರುವಾಗಿದೆ. ತಮ್ಮ-ತಮ್ಮ ಸಮುದಾಯಕ್ಕೆ ಹೆಚ್ಚು ಟಿಕೆಟ್​ ನೀಡಬೇಕೆಂದು ನಾಯಕರುಗಳು ಒತ್ತಡ ಹೇರಲಾರಂಭಿಸಿದ್ದಾರೆ. ಜಾತಿವಾರು ಟಿಕೆಟ್ ಬೇಡಿಕೆ ಕಳೆದ ಬಾರಿಗಿಂತ ಈ ಸಲ ಹೆಚ್ಚಾಗಿದೆ. ಜಾತಿ ನಾಯಕರ ಸಂಖ್ಯಾ ಬಲದಿಂದ ಸಾಮಾಜಿಕ ನ್ಯಾಯದ ಹೆಸರಲ್ಲಿ ಹೆಚ್ಚುವರಿ ಟಿಕೆಟ್ ಬೇಡಿಕೆ ಹೆಚ್ಚುತ್ತಿದ್ದು, ಕಾಂಗ್ರೆಸ್​​ ಹೈಕಮಾಂಡ್​ಗೆ ದೊಡ್ಡ ತಲೆಬಿಸಿ ತಂದಿಟ್ಟಿದೆ. ಹಾಗಾದ್ರೆ, ಯಾವೆಲ್ಲ ಸಮುದಾಯಗಳು ಎಷ್ಟೆಷ್ಟು ಟಿಕೆಟ್​ಗೆ ಬೇಡಿಕೆ ಇಟ್ಟಿವೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.​

ಇದನ್ನೂ ಓದಿ: Karnataka Assembly Poll 2023: ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ, ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ 120 ಕ್ಷೇತ್ರಗಳ ಟಿಕೆಟ್​ ಅಂತಿಮ

ಕನಿಷ್ಠ 70 ಟಿಕೆಟ್​ಗೆ ಬೇಡಿಕೆ ಇಟ್ಟ ವೀರಶೈವ ಲಿಂಗಾಯತ

ವೀರಶೈವ ಲಿಂಗಾಯತ ಕರ್ನಾಟಕದಲ್ಲಿ ಪ್ರಬಲ ಸಮುದಾಯ ಎನಿಸಿಕೊಂಡಿದೆ. ಕೆಲ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಯಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ 70 ಟಿಕೆಟ್​ ತಮ್ಮ ಸಮುದಾಯದ ಅಭ್ಯರ್ಥಿಗಳಿಗೆ ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮನವಿ ಮಾಡಿದೆ. ಕಳೆದ ಅಂದರೆ 2028ರ ವಿಧಾನಸಭೆ ಚುನಾವಣೆಯಲ್ಲಿ 40ಕ್ಕೂ ಹೆಚ್ಚು ಟಿಕೆಟ್​​ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ನೀಡಲಾಗಿತ್ತು. ಇದೀಗ ಮಹಾಸಭೆಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾಗಿ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಲಿಂಗಾಯತ ಸಮುದಾಯದ ನಾಯಕರು ಬೆಂಗಳೂರಿನಲ್ಲಿ ಸಭೆ ಮಾಡಿದ್ದು, ಈ ಬಾರಿ ಕನಿಷ್ಠ 70 ಟಿಕೆಟ್​ ಲಿಂಗಾಯತರಿಗೆ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಈ ಬಗ್ಗೆ ಲಿಂಗಾಯತ ನಾಯಕರು ರಾಜ್ಯ ಚುನಾವಣೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿದ್ದಾರೆ.

ಕುರುಬ ಸಮುದಾಯದಿಂದ 40 ಟಿಕೆಟ್​ಗೆ ಬೇಡಿಕೆ

ಇನ್ನು ಲಿಂಗಾಯತ ಟಿಕೆಟ್ ಬೇಡಿಕೆ ಬೆನ್ನಲ್ಲೇ ಕುರುಬ ಸಮುದಾಯ ಕೂಡಾ ತಮ್ಮ ಸಮುದಾಯಕ್ಕೆ 40 ಟಿಕೆಟ್​ ಬೇಡಿಕೆ ಇಟ್ಟಿದೆ. ಈ ಬಗ್ಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಪತ್ರಿಕಾಗೋಷ್ಠಿ ನಡೆಸಿ, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 40 ಕ್ಷೇತ್ರಗಳಲ್ಲಿ ಕುರುಬ ಸಮುದಾಯದಕ್ಕೆ ಟಿಕೆಟ್ ನೀಡಬೇಕು ಮನವಿ ಮಾಡಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬ ಸಮುದಾಯದ 20 ಜನರಿಗೆ ಟಿಕೆಟ್ ನೀಡಿತ್ತು. 2018 ರಲ್ಲಿ 8 ಮಂದಿ ಕುರುಬ ಸಮುದಾಯದ ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 150 ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದು, ಈ ನಿಟ್ಟಿನಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆನ್ನುವುದು ಕುರುಬ ಸಮುದಾಯದ ಬೇಡಿಕೆ ಆಗಿದೆ.

ಹೆಚ್ಚಿನ ಟಿಕೆಟ್​ಗಾಗಿ ಸಿದ್ದು ಭೇಟಿಯಾದ ಮುಸ್ಲಿಂ ಸಮುದಾಯ

ಇನ್ನು ಮುಸ್ಲಿಮ್ ನಾಯಕರು ಸಹ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಸಮುದಾಯಕ್ಕೆ ಹೆಚ್ಚು ಟಿಕೆಟ್​ ನೀಡಬೇಕೆಂದು ಮನವಿ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಈ ಬಾರಿ ಕನಿಷ್ಠ 25 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ನಿನ್ನೆ(ಮಾ.08) ರಾತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮುಸ್ಲಿಂ ಮೌಲ್ವಿಗಳು ಸಹ ಭೇಟಿ ಮಾಡಿ ತಮ್ಮ ಸಮುದಾಯಕ್ಕೆ ಹೆಚ್ಚು ಟಿಕೆಟ್​​ ನೀಡುವಂತೆ ಮನವಿ ಮಾಡಿದ್ದಾರೆ. ಶಾಸಕರಾದ ಜಮೀರ್ ಅಹಮ್ಮದ್, ರಿಜ್ವಾನ್ ಅರ್ಷದ್, ಅಬ್ದುಲ್ ಜಬ್ಬಾರ್ ಖಾನ್ ಮತ್ತು ಮೌಲ್ವಿಗಳು ನಿನ್ನೆ(ಮಾ.08) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಜೊತೆ ಸಭೆ ಮಾಡಿದ್ದು, ಟಿಕೆಟ್ ಬೇಡಿಕೆ ಸಂಬಂಧ ಚರ್ಚೆ ಮಾಡಿದ್ದಾರೆ.

 ಯಾವ ಸಮುದಾಯ ಎಷ್ಟು ಟಿಕೆಟ್​ಗೆ​ ಬೇಡಿಕೆ?

  • ವೀರಶೈವ ಲಿಂಗಾಯತ – 70
  • ಪರಿಶಿಷ್ಟ ಜಾತಿ (ಬಲ-ಎಡ)-30
  • ಪರಿಶಿಷ್ಟ ಪಂಗಡ- 20
  • ಒಕ್ಕಲಿಗ-48
  • ಒಬಿಸಿ-52
  • ಮುಸ್ಲಿಂ-25

ಕಳೆದ ಚುನಾವಣೆಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್​?

  • ಲಿಂಗಾಯತ-47
  • ಒಕ್ಕಲಿಗ 46
  • ಒಬಿಸಿ 50
  • ಮುಸ್ಲಿಂ 17
  • ಕ್ರಿಶ್ಚಿಯನ್ 2
  • ಜೈನ್​ 2
  • ಬ್ರಾಹ್ಮಣ 6
  • ಪರಿಶಿಷ್ಟ ಜಾತಿ (ಬಲ-ಎಡ) 14, 9
  • ಪರಿಶಿಷ್ಟ ಪಂಗಡ 17

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:51 pm, Thu, 9 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್