AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಫೈಟ್​: ಪ್ರಜಾಧ್ವನಿ ಮಾದರಿಯಲ್ಲೇ ಕಾಂಗ್ರೆಸ್​ ವಿರುದ್ಧ ಪ್ರತಿಧ್ವನಿ ಯಾತ್ರೆಗೆ ವೀರಶೈವ ಲಿಂಗಾಯತ ಯುವ ವೇದಿಕೆ ತೀರ್ಮಾನ

ದಕ್ಷಿಣ ಕರ್ನಾಟಕದಲ್ಲೂ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿಗೆ ಟಿಕೆಟ್​ ನೀಡುವಂತೆ ಕಾಂಗ್ರೆಸ್​ನಲ್ಲಿ ಬೇಡಿಕೆ ಹೆಚ್ಚಿದ್ದು, ಒಂದು ವೇಳೆ ಟಿಕೆಟ್​ ನೀಡದಿದ್ದರೇ ಪಕ್ಷದ ವಿರುದ್ಧ ಸಮರ ಸಾರಲು ಸಮುದಾಯದ ಮುಖಂಡರು ತಯಾರಿ ನಡೆಸಿದ್ದಾರೆ.

ಟಿಕೆಟ್​ ಫೈಟ್​: ಪ್ರಜಾಧ್ವನಿ ಮಾದರಿಯಲ್ಲೇ ಕಾಂಗ್ರೆಸ್​ ವಿರುದ್ಧ ಪ್ರತಿಧ್ವನಿ ಯಾತ್ರೆಗೆ  ವೀರಶೈವ ಲಿಂಗಾಯತ ಯುವ ವೇದಿಕೆ ತೀರ್ಮಾನ
ವೀರಶೈವ ಲಿಂಗಾಯತ (ಎಡಚಿತ್ರ) ಕಾಂಗ್ರೆಸ್​ (ಬಲಚಿತ್ರ)
ವಿವೇಕ ಬಿರಾದಾರ
|

Updated on:Mar 13, 2023 | 1:41 PM

Share

ಬೆಂಗಳೂರು: ಕರ್ನಾಟಕದಲ್ಲಿ ವೀರಶೈವ ಲಿಂಗಾಯತ (Veerashaiva Lingayat) ಪ್ರಬಲ ಸಮುದಾಯವಾಗಿದ್ದು, ಟಿಕೆಟ್​ ಹಂಚಿಕೆ ವಿಚಾರವಾಗಿ ಸಾಕಷ್ಟು ಲಾಬಿ ನಡೆಯುತ್ತಿದೆ. ಕಾಂಗ್ರೆಸ್​ (Congress) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಸಕಲ ಸಿದ್ದತೆ ಮಾಡಿಕೊಂಡಿದ್ದು, ಇನ್ನೇನು ಕೆಲವೆ ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡಲಿದೆ. ಆದರೆ ಈ ಬಾರಿ ಟಿಕೆಟ್​ ಹಂಚಿಕೆ ಕಾಂಗ್ರೆಸ್​ಗೆ ತೆಲೆನೋವಾಗಿ ಪರಿಣಮಿಸಿದೆ. ಕಳೆದ ಬಾರಿಗಿಂತ ಈ ಬಾರಿ ಜಾತಿವಾರು ಟಿಕೆಟ್​ ಹಂಚಿಕೆಗೆ ಭಾರಿ ಬೇಡಿಕೆ ಇದೆ. ಒಕ್ಕಲಿಗರು, ವೀರಶೈವ ಲಿಂಗಾಯತರು, ದಲಿತರು, ಹಿಂದುಳಿದ ವರ್ಗದವರು ಹೀಗೆ ಎಲ್ಲ ಪ್ರಬಲ ಸಮುದಾಯದವರು ನಮ್ಮ ಸಮುದಾಯಕ್ಕೆ ಹೆಚ್ಚಿನ ಟಿಕೆಟ್​ ನೀಡಬೇಕೆಂದು ಬೇಡಿಕೆ ಇಡುತ್ತಿದ್ದಾರೆ. ಇದೇ ಟಿಕೆಟ್​ ವಿಚಾರವಾಗಿ ವೀರಶೈವ ಲಿಂಗಾಯತ ಯುವ ವೇದಿಕೆ ಕಾಂಗ್ರೆಸ್ ವಿರುದ್ಧ ತಿರುಗಿ ಬೀಳಲು ರೆಡಿಯಾಗುತ್ತಿದ್ದು, ಪ್ರಜಾಧ್ವನಿ ಯಾತ್ರೆ ಮಾಡಲು ತೀರ್ಮಾನ ಮಾಡಿಕೊಂಡಿದೆ.

ಹೌದು ದಕ್ಷಿಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಟಿಕೆಟ್ ಬೇಡಿಕೆ ಇಟ್ಟಿರುವ ಲಿಂಗಾಯತ ಸಮುದಾಯ, ಬೇಡಿಕೆ ಈಡೇರುವ ಸ್ಪಷ್ಟ ಭರವಸೆ ಸಿಗದ ಹಿನ್ನಲೆ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಕಾಂಗ್ರೆಸ್​ ವಿರುದ್ಧ ಪ್ರಜಾಧ್ವನಿ ಮಾದರಿಯಲ್ಲೇ ಪ್ರತಿಧ್ವನಿ ಯಾತ್ರೆ ಮಾಡಲು ತೀರ್ಮಾನ ಮಾಡಿಕೊಂಡಿದೆ. ಅಲ್ಲದೇ ಟಿಕೆಟ್ ಕೊಡದ‌ ಜಿಲ್ಲೆಗಳಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಧ್ವನಿ ಯಾತ್ರೆ ಮಾಡಲು ತೀರ್ಮಾನಿಸಿದ್ದು, ಕಾಂಗ್ರೆಸ್​ಗೆ ತೆಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜಾತಿವಾರು ಟಿಕೆಟ್​ ಲಾಬಿ ಶುರು, ಯಾವ ಸಮುದಾಯ ಎಷ್ಟು ಟಿಕೆಟ್​ಗೆ ಬೇಡಿಕೆ?

ಈ ಸಂಬಂಧ ಜಯನಗರದಲ್ಲಿ ಈಗಾಗಲೇ ಬಸ್‌ವೊಂದನ್ನ ರೆಡಿ ಮಾಡಿಸಲಾಗುತ್ತಿದ್ದು, ಚಾಮರಾಜನಗರ, ಮೈಸೂರು, ಬೆಂಗಳೂರು, ಹಾಸನ ಭಾಗದಲ್ಲಿ ಲಿಂಗಾಯತರಿಗೆ ಟಿಕೆಟ್ ಬೇಕು ಎಂದು ಸಮುದಾಯ ಒತ್ತಾಯ ಮಾಡುತ್ತಿದ್ದು, ಇಲ್ಲದಿದ್ದರೆ ಪಕ್ಷದ ವಿರುದ್ಧವಾಗಿ ರಣಕಹಳೆ ಊದಲು ತಯಾರಿ ನಡೆಸಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿರುವ ಎಂಎಲ್​ಸಿ ಪುಟ್ಟಣ್ಣ ರಾಜಾಜಿನಗರದ ಕ್ಷೇತ್ರದ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಪುಟ್ಟಣ ಕಾಂಗ್ರೆಸ್ ಸೇರ್ಪಡೆಯಿಂದ ಸ್ಥಳೀಯ ಕಾಂಗ್ರೆಸ್​ ನಾಯಕರಲ್ಲಿ ಅಸಮಾಧಾನ ಮೂಡಿದೆ. ಇನ್ನು ಚಿಕ್ಕಪೇಟೆ ಕ್ಷೇತ್ರಲ್ಲದಲ್ಲಿಯೂ ಗಂಗಾಬಿಕೆ ಮಲ್ಲಿಕಾರ್ಜುನ್ ಲಿಂಗಾಯತ ಸಮುದಾಯದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಟಿಕೆಟ್ ನೀಡುವ ಬಗ್ಗೆ ರಾಜ್ಯ ನಾಯಕರು ಸ್ಪಷ್ಟ ನಿರ್ಧಾರ ತಿಳಿಸಿಲ್ಲ. ಹೀಗಾಗಿ ಕೈ ನಾಯಕರ ವರ್ತನೆಗೆ ಬೇಸತ್ತು, ಕಾಂಗ್ರೆಸ್ ವಿರೋಧಿ ಪ್ರಚಾರಕ್ಕೆ ವೀರಶೈವ ಸಮುದಾಯ ಅಣಿಯಾಗುವ ಸಾಧ್ಯತೆ ಇದೆ.

ಕನಿಷ್ಠ 70 ಟಿಕೆಟ್​ಗೆ ಬೇಡಿಕೆ ಇಟ್ಟ ವೀರಶೈವ ಲಿಂಗಾಯತ

ವೀರಶೈವ ಲಿಂಗಾಯತ ಕರ್ನಾಟಕದಲ್ಲಿ ಪ್ರಬಲ ಸಮುದಾಯ ಎನಿಸಿಕೊಂಡಿದೆ. ಕೆಲ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಯಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ 70 ಟಿಕೆಟ್​ ತಮ್ಮ ಸಮುದಾಯದ ಅಭ್ಯರ್ಥಿಗಳಿಗೆ ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮನವಿ ಮಾಡಿದೆ. ಕಳೆದ ಅಂದರೆ 2028ರ ವಿಧಾನಸಭೆ ಚುನಾವಣೆಯಲ್ಲಿ 40ಕ್ಕೂ ಹೆಚ್ಚು ಟಿಕೆಟ್​​ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ನೀಡಲಾಗಿತ್ತು. ಇದೀಗ ಮಹಾಸಭೆಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾಗಿ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಲಿಂಗಾಯತ ಸಮುದಾಯದ ನಾಯಕರು ಬೆಂಗಳೂರಿನಲ್ಲಿ ಸಭೆ ಮಾಡಿದ್ದು, ಈ ಬಾರಿ ಕನಿಷ್ಠ 70 ಟಿಕೆಟ್​ ಲಿಂಗಾಯತರಿಗೆ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಈ ಬಗ್ಗೆ ಲಿಂಗಾಯತ ನಾಯಕರು ರಾಜ್ಯ ಚುನಾವಣೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿದ್ದಾರೆ. ಇನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕ್ರಪ್ಪ ಕಾಂಗ್ರೆಸ್​ ಶಾಸಕ ಮತ್ತು ಪ್ರಬಲ ನಾಯಕರಾಗಿದ್ದು ಮೌನ ಮುರಿಯುತ್ತಿಲ್ಲ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Mon, 13 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ