AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vice President Elections Date ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ

2022 ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. ನಾಮನಿರ್ದೇಶನಕ್ಕೆ ಜುಲೈ 17 ಕೊನೆಯ ದಿನಾಂಕ ಎಂದು ಚುನಾವಣಾ ಆಯೋಗ ತಿಳಿಸಿದೆ.

Vice President Elections Date ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ
ಸಂಸತ್ ಭವನ
TV9 Web
| Edited By: |

Updated on:Jun 29, 2022 | 4:53 PM

Share

ಭಾರತದ ಮುಂದಿನ ಉಪರಾಷ್ಟ್ರಪತಿಯನ್ನು(Vice-President) ಆಯ್ಕೆ ಮಾಡಲು ಚುನಾವಣೆ ಅಗತ್ಯವಿದ್ದಲ್ಲಿ ಆಗಸ್ಟ್ 6 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ (Election Commission) ದಿನಾಂಕ ಪ್ರಕಟಿಸಿದೆ.  2022 ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನಾಮನಿರ್ದೇಶನಕ್ಕೆ ಜುಲೈ 17 ಕೊನೆಯ ದಿನಾಂಕ ಎಂದು ಆಯೋಗ ತಿಳಿಸಿದೆ.ಎರಡೂ ಸದನಗಳ ಸಂಸದರು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು(M. Venkaiah Naidu)ಅವರ ಅಧಿಕಾರಾವಧಿಯು ಆಗಸ್ಟ್ 10, 2022 ರಂದು ಕೊನೆಗೊಳ್ಳುತ್ತಿದೆ. “ಭಾರತದ ಸಂವಿಧಾನದ 68 ನೇ ವಿಧಿಯ ಪ್ರಕಾರ, ನಿರ್ಗಮಿಸುತ್ತಿರುವ ಉಪರಾಷ್ಟ್ರಪತಿಯ ಅಧಿಕಾರದ ಅವಧಿಯು ಮುಕ್ತಾಯಗೊಳ್ಳುವುದರಿಂದ ಉಂಟಾಗುವ ಖಾಲಿ ಸ್ಥಾನವನ್ನು ತುಂಬುವುದಕ್ಕಾಗಿ ಉಪರಾಷ್ಟ್ರಪತಿಯವರ ಅವಧಿ ಮುಗಿಯುವ ಮೊದಲು ಚುನಾವಣೆ ಅಗತ್ಯವಿದೆ” ಎಂದು ಆಯೋಗ ಹೇಳಿದೆ.

ಪ್ರಮುಖ ದಿನಾಂಕಗಳು

ಚುನಾವಣಾ ಆಯೋಗ ಅಧಿಸೂಚನೆ ಪ್ರಕಟ: ಜುಲೈ 5,2022

ನಾಮಪತ್ರ ಸಲ್ಲಿಕೆ:  ಜುಲೈ 19 2022

ನಾಮಪತ್ರ ಪರಿಶೀಲನೆ:  ಜುಲೈ 20 2022

ನಾಮಪತ್ರ ಹಿಂಪಡೆಯಲಿರುವ ದಿನಾಂಕ: ಜುಲೈ 22, 2022

ಚುನಾವಣಾ ದಿನಾಂಕ: ಆಗಸ್ಟ್ 6, 2022

ಮತದಾನ – ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಗೆ

ಮತ ಎಣಿಕೆ: ಆಗಸ್ಟ್ 6, 2022

Published On - 4:21 pm, Wed, 29 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?