AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ರಾಷ್ಟ್ರಪತಿ ಚುನಾವಣೆಯ ಮತದಾನದಲ್ಲಿ ಭಾಗಿಯಾಗಲ್ಲ ಟಿಎಂಸಿ: ನಿರ್ಧಾರ ಪ್ರಕಟಿಸಿದ ಮಮತಾ

ಮಮತಾ  ಬ್ಯಾನರ್ಜಿ ಅವರು  ಧನ್​​ಖರ್  ಮತ್ತು  ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಡಾರ್ಜಲಿಂಗ್​​ನಲ್ಲಿ ಭೇಟಿ ಆದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ.

ಉಪ ರಾಷ್ಟ್ರಪತಿ ಚುನಾವಣೆಯ ಮತದಾನದಲ್ಲಿ ಭಾಗಿಯಾಗಲ್ಲ ಟಿಎಂಸಿ: ನಿರ್ಧಾರ ಪ್ರಕಟಿಸಿದ ಮಮತಾ
ಮಮತಾ ಬ್ಯಾನರ್ಜಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 21, 2022 | 7:11 PM

ಮುಂಬರುವ ಉಪ ರಾಷ್ಟ್ರಪತಿ ಚುನಾವಣೆಯ ಮತದಾನದಲ್ಲಿ(Vice Presidential election) ಮಮತಾ ಬ್ಯಾನರ್ಜಿ ನೇತೃತ್ವದ  ತೃಣಮೂಲ ಕಾಂಗ್ರೆಸ್ ಭಾಗಿಯಾಗುವುದಿಲ್ಲ ಎಂದು  ಹೇಳಿದೆ. ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಚುನಾವಣಾ ಕಣದಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ   ಜಗದೀಪ್ ಧನ್​​​​ಖರ್ (Jagdeep Dhankhar) ಮತ್ತು ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ (Margaret Alva) ಇದ್ದಾರೆ. ಮಮತಾ ಬ್ಯಾನರ್ಜಿ ಅವರು  ಕಳೆದ ವಾರ ಧನ್​​ಖರ್  ಮತ್ತು  ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಡಾರ್ಜಲಿಂಗ್​​ನಲ್ಲಿ  ಭೇಟಿ ಆದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಧನ್​​ಖರ್ ಅವರು ತಮ್ಮನ್ನು  ಬೆಂಬಲಿಸುವಂತೆ ಮಮತಾ ಬ್ಯಾನರ್ಜಿ ಅವರಲ್ಲಿ ಕೇಳಿದ್ದರು ಎಂದು ಮೂಲಗಳು ವರದಿ ಮಾಡಿವೆ.

ಟಿಎಂಸಿ ನಿರ್ಧಾರದ ಬಗ್ಗೆ ಮಾತನಾಡಿದ ಸಂಸದ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ಎನ್ ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಧನ್ ಖರ್ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಅದೇ ವೇಳೆ ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿ ಘೋಷಣೆ ಮಾಡುವಾಗ ಟಿಎಂಸಿಯನ್ನು ಸಂಪರ್ಕಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ ಎರಡೂ ಸದನದಲ್ಲಿ ಟಿಎಂಸಿಗೆ 35 ಸಂಸದರು ಇದ್ದಾರೆ. ಹೀಗಿರುವಾಗ ನಮ್ಮಲ್ಲಿ ಒಂದು ಮಾತು ಹೇಳದೆ ವಿಪಕ್ಷಗಳ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

Published On - 5:55 pm, Thu, 21 July 22

ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ