AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ರಾಷ್ಟ್ರಪತಿ ಚುನಾವಣೆಯ ಮತದಾನದಲ್ಲಿ ಭಾಗಿಯಾಗಲ್ಲ ಟಿಎಂಸಿ: ನಿರ್ಧಾರ ಪ್ರಕಟಿಸಿದ ಮಮತಾ

ಮಮತಾ  ಬ್ಯಾನರ್ಜಿ ಅವರು  ಧನ್​​ಖರ್  ಮತ್ತು  ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಡಾರ್ಜಲಿಂಗ್​​ನಲ್ಲಿ ಭೇಟಿ ಆದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ.

ಉಪ ರಾಷ್ಟ್ರಪತಿ ಚುನಾವಣೆಯ ಮತದಾನದಲ್ಲಿ ಭಾಗಿಯಾಗಲ್ಲ ಟಿಎಂಸಿ: ನಿರ್ಧಾರ ಪ್ರಕಟಿಸಿದ ಮಮತಾ
ಮಮತಾ ಬ್ಯಾನರ್ಜಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 21, 2022 | 7:11 PM

Share

ಮುಂಬರುವ ಉಪ ರಾಷ್ಟ್ರಪತಿ ಚುನಾವಣೆಯ ಮತದಾನದಲ್ಲಿ(Vice Presidential election) ಮಮತಾ ಬ್ಯಾನರ್ಜಿ ನೇತೃತ್ವದ  ತೃಣಮೂಲ ಕಾಂಗ್ರೆಸ್ ಭಾಗಿಯಾಗುವುದಿಲ್ಲ ಎಂದು  ಹೇಳಿದೆ. ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಚುನಾವಣಾ ಕಣದಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ   ಜಗದೀಪ್ ಧನ್​​​​ಖರ್ (Jagdeep Dhankhar) ಮತ್ತು ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ (Margaret Alva) ಇದ್ದಾರೆ. ಮಮತಾ ಬ್ಯಾನರ್ಜಿ ಅವರು  ಕಳೆದ ವಾರ ಧನ್​​ಖರ್  ಮತ್ತು  ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಡಾರ್ಜಲಿಂಗ್​​ನಲ್ಲಿ  ಭೇಟಿ ಆದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಧನ್​​ಖರ್ ಅವರು ತಮ್ಮನ್ನು  ಬೆಂಬಲಿಸುವಂತೆ ಮಮತಾ ಬ್ಯಾನರ್ಜಿ ಅವರಲ್ಲಿ ಕೇಳಿದ್ದರು ಎಂದು ಮೂಲಗಳು ವರದಿ ಮಾಡಿವೆ.

ಟಿಎಂಸಿ ನಿರ್ಧಾರದ ಬಗ್ಗೆ ಮಾತನಾಡಿದ ಸಂಸದ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ಎನ್ ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಧನ್ ಖರ್ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಅದೇ ವೇಳೆ ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿ ಘೋಷಣೆ ಮಾಡುವಾಗ ಟಿಎಂಸಿಯನ್ನು ಸಂಪರ್ಕಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ ಎರಡೂ ಸದನದಲ್ಲಿ ಟಿಎಂಸಿಗೆ 35 ಸಂಸದರು ಇದ್ದಾರೆ. ಹೀಗಿರುವಾಗ ನಮ್ಮಲ್ಲಿ ಒಂದು ಮಾತು ಹೇಳದೆ ವಿಪಕ್ಷಗಳ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

Published On - 5:55 pm, Thu, 21 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ