AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijaya Sankalp Yatra: ನಡ್ಡಾ ಕಾರ್ಯಕ್ರಮಕ್ಕೆ ಗೈರಾದ ವಿ ಸೋಮಣ್ಣ, ಕುತೂಹಲ ಮೂಡಿಸಿತು ಸಚಿವರ ನಡೆ

ಬಿಜೆಪಿಯ ವಿಜಯಸಂಕಲ್ಪ ಯಾತ್ರೆಗೆ ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸಿದ್ದರೂ ಜಿಲ್ಲೆಯ ಉಸ್ತುವಾರಿ ಸಚಿವ ವಿ.ಸೋಮಣ್ಣ ಗೈರಾಗಿದ್ದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ.

Vijaya Sankalp Yatra: ನಡ್ಡಾ ಕಾರ್ಯಕ್ರಮಕ್ಕೆ ಗೈರಾದ ವಿ ಸೋಮಣ್ಣ, ಕುತೂಹಲ ಮೂಡಿಸಿತು ಸಚಿವರ ನಡೆ
ಸಚಿವ ವಿ ಸೋಮಣ್ಣ
ಗಂಗಾಧರ​ ಬ. ಸಾಬೋಜಿ
|

Updated on:Mar 01, 2023 | 7:31 PM

Share

ಚಾಮರಾಜನಗರ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿಯ (bjp) ವಿಜಯಸಂಕಲ್ಪ ಯಾತ್ರೆಗೆ (Vijaya Sankalp Yatra) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದ್ದಾರೆ. ಆದರೆ ಜಿಲ್ಲೆಯ ಉಸ್ತುವಾರಿ ಸಚಿವ ಆಗಿರುವ ವಿ.ಸೋಮಣ್ಣ ಮಾತ್ರ ಯಾತ್ರೆಗೆ ಗೈರಾಗಿದ್ದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ. ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಂದರೂ, ಯಾತ್ರೆಗೆ ಆಗಮಿಸದ ಸಚಿವ ವಿ.ಸೋಮಣ್ಣ ನಡೆ ಸದ್ಯ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆ ಇಂದಿನಿಂದ ಆರಂಭವಾಗಿದ್ದು, 20ರವರೆಗೆ ನಡೆಯಲಿದೆ.

ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಕೂಡ ಗೈರು

ಸಚಿವ ಸೋಮಣ್ಣ ನಂತರ ಕೊಳ್ಳೇಗಾಲ ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಕೂಡ ಯಾತ್ರೆಗೆ ಗೈರಾಗಿದ್ದಾರೆ. ಈಗಾಗ್ಲೇ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕ್ಷೇತ್ರದಲ್ಲಿ ಮಾತು ಕೇಳಿಬಂದಿತ್ತು. ಇದೀಗ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಭಾಗಿಯಾದ್ರು ಸಮಾವೇಶದಿಂದ ದೂರವುಳಿದ್ದಾರೆ. ಪ್ರಜಾಧ್ವನಿ ಯಾತ್ರೆ ವೇಳೆ ಜಿಎನ್ ನಂಜುಂಡಸ್ವಾಮಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಡಿ.ಕೆ. ಶಿವಕುಮಾರ ಹೇಳಿದ್ದರು.

ಅರಣ್ಯ ಕಾಯ್ದೆಯಡಿ ಬೇಡಗಂಪಣ, ಸೋಲಿಗ ಸಮುದಾಯದವರಿಗೆ ಜಮೀನು ನೀಡುವುದಾಗಿ ಘೋಷಿಸಿದ ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಬಹಳ ವರ್ಷಗಳಿಂದ ಬೆಟ್ಟದಲ್ಲಿ ಬೇಡಗಂಪಣ, ಸೋಲಿಗರು ಸಮುದಾಯದವರು ವಾಸಿಸುತ್ತಿದ್ದಾರೆ. ಆದರೆ ಅವರಿಗೆ ಜಮೀನಿನ ಹಕ್ಕಿಲ್ಲ. ಅರಣ್ಯ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ಆರೋಗ್ಯ ಸಮಸ್ಯೆ ಆದರೆ ಪರಿಹಾರವಾಗಿ ಪಿಎಚ್​ಸಿ ಸ್ಥಾಪನೆ ಮಾಡುತ್ತೇವೆ. ಸ್ತ್ರೀಶಕ್ತಿ ಸಂಘಕ್ಕೆ ವಿಶೇಷ ಅನುದಾನ ನೀಡುತ್ತಿದ್ದೇವೆ. ಬೇಡಗಂಪಣ ಸಮುದಾಯ ಎಸ್​ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಸಿಗಲಿ ಎಂದು ಮಾದಪ್ಪನಿಗೆ ನಡ್ಡಾ ಅವರು ಸಂಕಲ್ಪ ಮಾಡಿದ್ದಾರೆ ಎಂದರು.

ಇದನ್ನೂ ಓದಿ: Vijaya Sankalp Yatra: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ; ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ನಡ್ಡಾ ಹೇಳಿಕೆ

ತಳಸಮುದಾಯದ ದ್ರೌಪದಿ ಮುರ್ಮುಗೆ ಬಿಜೆಪಿ ಉನ್ನತ ಸ್ಥಾನ ನೀಡಿದೆ. ರೈತರಿಗೆ ವಿಶೇಷ ಅನುದಾನ, ಬಾಲಕಿಯರಿಗೆ ಉಚಿತ ಶಿಕ್ಷಣ ನೀಡುತ್ತೇವೆ. ಮಾದಪ್ಪನ ಆಶೀರ್ವಾದದೊಂದಿಗೆ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದ್ದು, ಯಾತ್ರೆ ಮುಗಿಯುವವರೆಗೆ ಬಿಜೆಪಿ ದಿಗ್ವಿಜಯ ಸಾಧಿಸುತ್ತೆ ಎಂದು ಹೇಳಿದರು.

ಕಾಂಗ್ರೆಸ್​ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ

ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಬೇಕು. ನಾವು ಅಧಿಕಾರಕ್ಕೆ ಬಂದು ಚಾಮರಾಜನಗರ ಅಭಿವೃದ್ಧಿ ಮಾಡಿದ್ದೇವೆ. ನಮ್ಮ ಸರ್ಕಾರ ಜನರಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಎಲ್ಲಾ ವರ್ಗದ ಜನರಿಗೂ‌ ನ್ಯಾಯ ಒದಗಿಸಿದ್ದೇವೆ. ಇನ್ನೊಂದು ವಾರದಲ್ಲಿ ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ಯಾಕೇಜ್ ನೀಡ್ತೇನೆ ಎಂದರು.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಗೆದ್ದರೆ ಅವರು ಹೇಳಿದಂತೆ ಕೇಳುತ್ತೇನೆ; ಕೆಎಸ್​​ ಈಶ್ವರಪ್ಪ

ಭ್ರಷ್ಟಾಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್. ಆ ಭಾಗ್ಯ ಈ ಭಾಗ್ಯ ಎಂದು ಎಲ್ಲಾ ಕಡೆ ಭ್ರಷ್ಟಾಚಾರ ‌ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಚಾಮರಾಜನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಲಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಿರಿ. BSY ಕಟ್ಟಿರುವ ಭವ್ಯ ಕರ್ನಾಟಕವನ್ನು ನವ ಕರ್ನಾಟಕ ಮಾಡೋಣ. ಚಂಗಡಿ ಗ್ರಾಮದ ಪುನರ್ವಸತಿ ಕಾರ್ಯದ ಯೋಜನೆ ಸಿದ್ಧವಾಗಿದೆ. ಕೆಲವೇ ದಿನಗಳಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು.

BSY ಕೊಂಡಾಡಿದ ಸಿಎಂ ಬೊಮ್ಮಾಯಿ

ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ವಿದ್ಯುತ್​ ತಂದಿದ್ದರು. ನೆರೆ ಸಂದರ್ಭದಲ್ಲಿ ಪ್ರವಾಸ ಮಾಡಿ ಪರಿಹಾರ ಘೋಷಣೆ ಮಾಡಿದರು. ಭಾಗ್ಯಲಕ್ಷ್ಮೀ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಜಾರಿಗೆ ತಂದರು. ಬಿಎಸ್​ವೈ ಸಿಎಂ ಆಗಿದ್ದಾಗ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಯಡಿಯೂರಪ್ಪರನ್ನು ಸಿಎಂ ಬೊಮ್ಮಾಯಿ ಕೊಂಡಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:24 pm, Wed, 1 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ