AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಪ್ಪನವರ್​ಗೆ ನಿಗಮ ಮಂಡಳಿ ಸಿಕ್ಕರೂ ಅಧಿಕಾರ ವಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಕಾರಣವೇನು?

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಶಾಸಕ ವಿಜಯಾನಂದ ಕಾಶಪ್ಪನವರ್​, ಕ್ರೀಡಾ ಪ್ರಾಧಿಕಾರದ ಬೈಲಾ ಬದಲಾವಣೆ ಆದ ಮೇಲೆ ನಾನು ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯ. ಬೈಲಾ ಬದಲಾಗದಿದ್ದರೆ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ.

ಕಾಶಪ್ಪನವರ್​ಗೆ ನಿಗಮ ಮಂಡಳಿ ಸಿಕ್ಕರೂ ಅಧಿಕಾರ ವಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಕಾರಣವೇನು?
ವಿಜಯಾನಂದ ಕಾಶಪ್ಪನವರ್
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 31, 2024 | 7:12 PM

Share

ಬೆಂಗಳೂರು, ಜನವರಿ 31: ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar)​ ಅವರಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾ (ನಿಬಂಧನೆ ತಿದ್ದುಪಡಿ) ದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ. ಸದ್ಯ ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಶಾಸಕ ವಿಜಯಾನಂದ ಕಾಶಪ್ಪನವರ್​, ಕ್ರೀಡಾ ಪ್ರಾಧಿಕಾರದ ಬೈಲಾ ಬದಲಾವಣೆ ಆದ ಮೇಲೆ ನಾನು ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯ. ಬೈಲಾ ಬದಲಾಗದಿದ್ದರೆ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಬೈಲಾ ಬದಲಾದರೆ ನಾನು ಅಧ್ಯಕ್ಷ ಆಗುತ್ತೇನೆ: ಶಾಸಕ ವಿಜಯಾನಂದ ಕಾಶಪ್ಪನವರ್

ಈಗ ಅಲ್ಲಿ ಅಧ್ಯಕ್ಷರು ಸಚಿವರೇ ಇದ್ದಾರೆ. ಬೈಲಾ ಬದಲಾದರೆ ನಾನು ಅಧ್ಯಕ್ಷ ಆಗುತ್ತೇನೆ, ಹಾಗಾದರೆ ಮಾತ್ರ ಆ ಸ್ಥಾನ ಪಡೆಯುತ್ತೇನೆ. ಇಲ್ಲದೇ ಹೋದರೆ ನಾನು ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಆಗುವುದಿಲ್ಲ. ನಾನು ಶಾಸಕನಾಗಿಯೇ ಸಂತೋಷದಿಂದ ಇರುತ್ತೇನೆ. ಸಣ್ಣ ಪುಟ್ಟ ತೊಂದರೆ ಆಗಿಯೇ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ:  ಲಿಂಗಾಯತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕು, ನಾನೂ ಸಚಿವ ಸ್ಥಾನದ ಆಕಾಂಕ್ಷಿ: ವಿಜಯಾನಂದ ಕಾಶಪ್ಪನವರ್

ನಮ್ಮ ಕುಟುಂಬದ್ದು ಸಮಸ್ಯೆ ನಾವೇ ಬಗೆಹರಿಸಿಕೊಳ್ಳಲು ರೆಡಿ ಇದ್ದೀವಲ್ಲ. ಬೇರೆ ಹೊರಗಡೆಯವರದ್ದಲ್ಲ ಇದು. ನಮ್ಮ ಮನೆಯೊಳಗೇ ನಮ್ಮ ನಾಯಕರೇ ಮಾಡಿದ ನಿರ್ಧಾರ. ನಮ್ಮವರೇ ಸರಿ ಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಕಾಯುತ್ತೇನೆ. ನನ್ನನ್ನು ಸಚಿವನನ್ನಾಗಿಯೇ ಮಾಡಿ ಎಂದು ಸಿಎಂಗೆ ಹೇಳಿದ್ದೆ. ಈಗ ತಗೋ ಅಂತ ಸಿಎಂ ಹೇಳಿದ ಮೇಲೆ ಭರವಸೆ ಇಟ್ಟಿದ್ದೇನೆ. ಈ ಜಗತ್ತಲ್ಲಿ ಯಾರಿಗೆ ಸಮಾಧಾನ ಇದೆ ಹೇಳಿ? ಸಚಿವರಾಗಬೇಕು ಅಂದುಕೊಂಡವರಿಗೆ ನಿಗಮ ಮಂಡಳಿ ಕೊಟ್ಟರೆ ಸಮಾಧಾನ ಮಾಡುವುದಕ್ಕಾಗತ್ತಾ ಎಂದು ಪ್ರಶ್ನಿಸಿದ್ದಾರೆ.

ಅದನ್ನು ಸಮಯವೇ ನಿರ್ಧಾರ ಮಾಡುತ್ತದೆ

ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರ ಈಗ ಹೇಳಲು ಸಾಧ್ಯವಿಲ್ಲ. ಅದನ್ನು ಸಮಯವೇ ನಿರ್ಧಾರ ಮಾಡುತ್ತದೆ. ಈಗಲೇ ಮಾತನಾಡಿದರೆ ಈ ಸಮಯದಲ್ಲಿ ಹೇಳಿದರೆ ಅದು ಬಹಳ ಮುಂಚಿತ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಮಂತ್ರಿ ಸ್ಥಾನ ಈಗ ಸಿಕ್ಕಿಲ್ಲ, ಆದರೆ ಮುಂದೆ ಖಂಡಿತ ಸಿಗಲಿದೆ: ವಿಜಯಾನಂದ್ ಕಾಶಪ್ಪನವರ್, ಶಾಸಕ

ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಮನಸ್ಸಿನಲ್ಲಿಯೂ ಇದೆ. ಖಂಡಿತವಾಗಿಯೂ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ. ಎರಡು ವರ್ಷದ ನಂತರವೂ ಸಚಿವರನ್ನಾಗಿ ಮಾಡಬಹುದು. ಎರಡು ವರ್ಷದ ನಂತರ ಯಾಕೆ ಮಂತ್ರಿ ಆಗಬಾರದ? ಅರ್ಹತೆ ಇಲ್ವಾ ನಮ್ಮತ್ರ ಎಂದು ಪ್ರಶ್ನಿಸಿದರು.

ನಮಗೆ ವಿಶ್ವಾಸ ಇದೆ ನಮ್ಮ ನಾಯಕರ ಮೇಲೆ ವಿಶ್ವಾಸವಿದೆ. ಕೆಲವೊಂದಿಷ್ಟು ದಿನ ಆದ ಮೇಲೆ ಸಚಿವ ಸ್ಥಾನ ನೀಡಬಹುದು. ಒಂದು ವರ್ಷ ಮಂತ್ರಿ ಆಗುತ್ತೇನೋ, 2 ವರ್ಷ ಮಂತ್ರಿ ಆಗುತ್ತೇನೋ ಒಟ್ಟಿನಲ್ಲಿ ಇದೇ ಸರ್ಕಾರದಲ್ಲಿ ಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ