AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದ ಹಾಗೂ ಆಪ್ತಸಹಾಯಕರ ಫೋನ್ ಕಾಲ್ ಡೀಟೇಲ್ಸ್ ಸಂಗ್ರಹ: ದೂರು ನೀಡಿದ ಎಂಬಿ ಪಾಟೀಲ್

ಚುನಾವಣೆ ಸಮಯದಲ್ಲಿ ದೂರವಾಣಿ ಕದ್ದಾಲಿಕೆ, ಕಾಲ್ ಡಿಟೇಲ್ಸ್ ಸಂಗ್ರಹ ಆರೋಪಗಳು ಕೇಳಿಬರುತ್ತವೆ. ಇದೀಗ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರ ಕುಟುಂಬದ ಹಾಗೂ ಆಪ್ತ ಸಹಾಯಕರ ಕಾಲ್ ಡೀಟೇಲ್ಸ್ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕುಟುಂಬದ ಹಾಗೂ ಆಪ್ತಸಹಾಯಕರ ಫೋನ್ ಕಾಲ್ ಡೀಟೇಲ್ಸ್ ಸಂಗ್ರಹ: ದೂರು ನೀಡಿದ ಎಂಬಿ ಪಾಟೀಲ್
ಎಂಬಿ ಪಾಟೀಲ್
Rakesh Nayak Manchi
Rakesh Nayak Manchi|

Updated on:Mar 19, 2023 | 6:25 PM

Share

ವಿಜಯಪುರ: ಚುನಾವಣೆ (Karnataka Assembly Election 2023) ಸಮಯದಲ್ಲಿ ದೂರವಾಣಿ ಕದ್ದಾಲಿಕೆ, ಕಾಲ್ ಡೀಟೇಲ್ಸ್ ಸಂಗ್ರಹ (CDR) ಆರೋಪಗಳು ಕೇಳಿಬರುತ್ತವೆ. ಇದೀಗ ಬಬಲೇಶ್ವರ ಕ್ಷೇತ್ರ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ಕುಟುಂಬದ ಹಾಗೂ ಆಪ್ತ ಸಹಾಯಕರ ಕಾಲ್ ಡೀಟೇಲ್ಸ್ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನನ್ನ, ನನ್ನ ಕುಟುಂಬದ ಹಾಗೂ ಆಪ್ತಸಹಾಯಕರ ಪೋನ್ ಕಾಲ್ ಡೀಟೇಲ್ಸ್ ಸಂಗ್ರಹ ಮಾಡಲಾಗುತ್ತಿದ್ದು, ಈ ಕುರಿತು ಪೊಲೀಸ್ ಇಲಾಖೆಗೆ ದೂರು ಸಲ್ಲಿಕೆ ಮಾಡಿರುವುದಾಗಿ ಎಂಬಿ ಪಾಟೀಲ್ ಹೇಳಿದರು. ಘಟನೆ ಕುರಿತು ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಫೋನ್ ಟ್ಯಾಪ್ ಆಗಿಲ್ಲ, ಫೋನ್ ಸಿಡಿಆರ್ ಆಗಿದೆ ಎಂದರು.

ನಮ್ಮ ಕರೆಗಳ ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಬಹಳಷ್ಟು ಜನರಿಗೆ ಸಿಡಿಆರ್ ತೆಗೆಯುವ ಚಾಳಿ ಇದೆ. ನಮ್ಮ ದೂರವಾಣಿ ಕರೆಗಳ ಡೀಟೇಲ್ಸ್ ಸಂಗ್ರಹ ಯಾರು ಮಾಡಿದ್ದಾರೆ ಎಂದು ಹೆಸರು ಹೇಳುವುದಿಲ್ಲ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಹಾಗೇನಾದರೂ ಆದರೆ ಸರ್ಕಾರ ಜವಾಬ್ದಾರಿಯಾಗಿರುತ್ತದೆ ಎಂದು ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Pre-Poll Survey: ಬಬಲೇಶ್ವರದಲ್ಲಿ ಎಂಬಿ ಪಾಟೀಲ್, ತಿಪಟೂರಿನಲ್ಲಿ ಬಿಸಿ ನಾಗೇಶ್ ಗೆಲುವಿನ ಸಾಧ್ಯತೆ; ಸಮೀಕ್ಷೆ

ಫೋನ್ ಡೀಟೇಲ್ಸ್ ಸಂಗ್ರಹವನ್ನು ನನ್ನ ವಿರೋಧಿಗಳು ಮಾಡುತ್ತಿದ್ದಾರೆ, ಇದರಲ್ಲಿ ಯಾವುದೇ ಅನುಮಾನ ಅಲ್ಲ, ಪಕ್ಕಾ ಮಾಹಿತಿ ಇದೆ. ಚುನಾವಣೆಯಲ್ಲಿ ಖಾಸಗಿ ಮಾಹಿತಿ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ವಿಶ್ವಾಸಾರ್ಹ ತಿಳಿದುಕೊಂಡು ಪತ್ರ ಬರೆದಿದ್ದೇನೆ. ಕೆಲವೊಂದು ಅಧಿಕಾರಿಗಳು ಆಮಿಷಕ್ಕಾಗಿ ಸಿಡಿಆರ್ ಕೊಡುವವರು ಇರುತ್ತಾರೆ. ಅದಕ್ಕಾಗಿ ಬಿಜೆಪಿಯವರದ್ದಾಗಲಿ ಸಾಮಾನ್ಯ ವ್ಯಕ್ತಿಯದ್ದಾಗಿ ಫೋನ್ ಡೀಟೇಲ್ಸ್ ಸಂಗ್ರಹ ಮಾಡಬಾರದು. ಹೀಗಾಗಿ ಡಿಜಿ ಹಾಗೂ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Sun, 19 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!