AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಸಿತ ಭಾರತ ಸಂಕಲ್ಪ ಯಾತ್ರೆ: ಪ್ರಲ್ಹಾದ್ ಜೋಶಿ ಭಾಷಣದ ವೇಳೆ ರಾಜ್ಯ ಸರ್ಕಾರದ ವಿರುದ್ಧ ರೈತನ ಆಕ್ರೋಶ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವರೂರ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಇದೀಗ ದೇಶ ಅಭಿವೃದ್ಧಿ ಆಗಬೇಕೆಂದು ಮೋದಿ ಸಂಕಲ್ಪ ಮಾಡಿದ್ದಾರೆ. ಎಲ್ಲ ಯೋಜನೆಗಳು ಎಲ್ಲರಿಗೂ ಸಿಗಬೇಕು, ಇದು ಮೋದಿ ಗ್ಯಾರಂಟಿ ವಾಹನ ಎಂದು ಹೇಳುತ್ತಿದ್ದಂತೆ ರೈತರೊಬ್ಬರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆ: ಪ್ರಲ್ಹಾದ್ ಜೋಶಿ ಭಾಷಣದ ವೇಳೆ ರಾಜ್ಯ ಸರ್ಕಾರದ ವಿರುದ್ಧ ರೈತನ ಆಕ್ರೋಶ
ಪ್ರಲ್ಹಾದ್ ಜೋಶಿ
ಶಿವಕುಮಾರ್ ಪತ್ತಾರ್
| Edited By: |

Updated on: Dec 09, 2023 | 7:12 PM

Share

ಹುಬ್ಬಳ್ಳಿ, ಡಿ.9: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವರೂರ ಗ್ರಾಮದಲ್ಲಿ ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆ (Viksit Bharat Sankalp Yatra) ನಡೆಯಿತು. ಯಾತ್ರೆಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಭಾಷಣ ಮಾಡುತ್ತಿದ್ದಾಗ ರೈತರೊಬ್ಬರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಘಟನೆ ನಡೆಯಿತು.

ವಿಕಸಿತ ಭಾರತ ಸಂಕಲ್ಪಯಾತ್ರೆ ಅಂದರೆ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಮೋದಿಯವರು ಬರುವುದಕ್ಕಿಂತ ಮುಂಚೆ ಸಾಕಷ್ಟು ಭ್ರಷ್ಟಾಚಾರ ನಡೆದಿತ್ತು. ಭ್ರಷ್ಟಾಚಾರ ಮಾಡಿ ನಮ್ಮ ದೇಶಕ್ಕೆ ಯಾವುದೇ ಸೌಲಭ್ಯ ಸಿಕ್ಕಿರಲಿಲ್ಲ. ಇದೀಗ ದೇಶ ಅಭಿವೃದ್ಧಿ ಆಗಬೇಕೆಂದು ಮೋದಿ ಸಂಕಲ್ಪ ಮಾಡಿದ್ದಾರೆ. ಎಲ್ಲ ಯೋಜನೆಗಳು ಎಲ್ಲರಿಗೂ ಸಿಗಬೇಕು, ಇದು ಮೋದಿ ಗ್ಯಾರಂಟಿ ವಾಹನ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಇದನ್ನೂ ಓದಿ: ಮೋದಿ ಹೆಸರು ತೆಗೆದು ಬಯ್ಯದೇ ಇದ್ರೆ ಸಿದ್ದರಾಮಯ್ಯಗೆ ಊಟ ರುಚಿಸುವುದಿಲ್ಲ -ಪ್ರಹ್ಲಾದ್​​ ಜೋಶಿ

ಈ ನಡುವೆ ರೈತರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ರಾಜ್ಯದಲ್ಲಿ ಈಗ ಇರುವುದು ಬ್ರಹ್ಮ ರಾಕ್ಷಸ ಸರ್ಕಾರ. ಹೊತ್ತಲ್ಲದ ಹೊತ್ತಿನಲ್ಲಿ ಕರೆಂಟ್ ಕೊಡುತ್ತಾರೆ. ಯಾರಿಗೆ ಬೇಕಾಗಿತ್ತು ಈ ಗ್ಯಾರಂಟಿ, ಸಿಎಂಗೆ ವಿದ್ಯುತ್ ಕೇಳಿದರೆ ಕೊಡೋಕೆ ಆಗಲ್ಲ ಎಂದಿದ್ದಾರೆ. ಶಾಲಾ ಮಕ್ಕಳಿಗೆ ಬಸ್ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್