AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾಲಯ ಲೋಕಾರ್ಪಣೆ ವಿಷಯದಲ್ಲಿ ಕಾಂಗ್ರೆಸ್​- ಬಿಜೆಪಿ ನಡುವೆ ವಾರ್: ಹೆಚ್​​ಕೆ ಪಾಟೀಲ್ ವಿರುದ್ಧ ಸಂಕನೂರ ಕಿಡಿ

ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಿರ್ಮಾಣವಾಗಿರುವ ಹೈಟೆಕ್ ತಾರಾಲಯ ವಿಷಯದಲ್ಲಿ ಶಾಸಕ ಹೆಚ್​.ಕೆ.ಪಾಟೀಲ್​ ಮತ್ತು ಬಿಜೆಪಿ ಎಂಎಂಸಿ ಸಂಕನೂರ ನಡುವೆ ಕ್ರೆಡಿಟ್​ ಫೈಟ್​ ನಡೆಯುತ್ತಿದೆ.

ತಾರಾಲಯ ಲೋಕಾರ್ಪಣೆ ವಿಷಯದಲ್ಲಿ ಕಾಂಗ್ರೆಸ್​- ಬಿಜೆಪಿ ನಡುವೆ ವಾರ್: ಹೆಚ್​​ಕೆ ಪಾಟೀಲ್ ವಿರುದ್ಧ ಸಂಕನೂರ ಕಿಡಿ
ಬಿಜೆಪಿ ಎಂಎಂಸಿ ಸಂಕನೂರ, ಶಾಸಕ ಹೆಚ್​.ಕೆ.ಪಾಟೀಲ್​
ಗಂಗಾಧರ​ ಬ. ಸಾಬೋಜಿ
|

Updated on: Mar 19, 2023 | 4:52 PM

Share

ಗದಗ: 8.58 ಕೋಟಿ ವೆಚ್ಚದಲ್ಲಿ ನಗರದ ಬೆಟಗೇರಿಯಲ್ಲಿ ನಿರ್ಮಾಣವಾಗಿರುವ ಹೈಟೆಕ್ ತಾರಾಲಯವನ್ನು ಶಾಸಕ ಹೆಚ್​.ಕೆ.ಪಾಟೀಲ್ (HK Patil) ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಬೆಟಗೇರಿಯಲ್ಲಿ ತಾರಾಲಯ ನಿರ್ಮಾಣದಲ್ಲಿ ಸಿದ್ದರಾಮಯ್ಯ ಕೊಡುಗೆ ಅಪಾರ ಎಂದು ಭಾಷಣದಲ್ಲಿ ಪ್ರಸ್ತಾಪಿಸಿದರು. ಬಳಿಕ ಮಾತನಾಡಿದ ಬಿಜೆಪಿ ಎಂಎಂಸಿ ಸಂಕನೂರ ಹೆಚ್​.ಕೆ.ಪಾಟೀಲ್ ವಿರುದ್ಧ ಕಿಡಿಕಾರಿದರು. ತರಾತುರಿಯಲ್ಲಿ ತಾರಾಲಯ ಲೋಕಾರ್ಪಣೆ ಮಾಡಿದ್ದಾರೆ. ತಾರಾಲಯ ಲೋಕಾರ್ಪಣೆಗೆ ಡಿಸಿ ಯಾಕೆ ಅನುಮತಿ‌ ಕೊಟ್ಟರು ಎಂದು ಪ್ರಶ್ನಿಸಿದರು. ತಾರಾಲಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ 7.3 ಕೋಟಿ ರೂ. ನೀಡಿದೆ ಎಂದರು. ಆ ಮೂಲಕ ತಾರಾಲಯ ಲೋಕಾರ್ಪಣೆ ವಿಷಯದಲ್ಲಿ ಕಾಂಗ್ರೆಸ್​ ಮತ್ತು BJP ನಡುವೆ ಕ್ರೆಡಿಟ್​ಗಾಗಿ ಫೈಟ್ ಶುರುವಾದಂತಾಗಿದೆ.

ನಮ್ಮ ಸಚಿವರಾದ ಅಶ್ವಥ್ ನಾರಾಯಣ, ಬಿ.ಸಿ ಪಾಟೀಲ್, ಸಿ.ಸಿ ಪಾಟೀಲ್​​ರನ್ನು ಬಿಟ್ಟು‌ ಲೋಕಾರ್ಪಣೆ ಮಾಡುತ್ತೀರಾ ಎಂದು ವಾದ್ಗಾಳಿ ಮಾಡಿದರು. ಚುನಾವಣೆ ವೇಳೆ ಲಾಭ ಪಡೆಯಲು ಹೊರಟಿರಾ ಹೆಚ್​.ಕೆ ಪಾಟೀಲ್​ರೇ ಎಂದು ಗರಂ ಆಗಿದ್ದಾರೆ. ಸೈನ್ಸ್ ಸೆಂಟರ್ ಮಾಡಿದ್ದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಸರ್ಕಾರ ಅಲ್ಲ. ಸುಮ್ಮಸುಮ್ಮನೇ ಕ್ರೆಡಿಟ್ ಪಡಿಯಬೇಡಿ. ಬಿಜೆಪಿ ಮಾಡಿದ್ದ ಕಾರ್ಯಕ್ರಮ ಹೈಜಾಕ್‌ ಮಾಡಿ ಹೆಚ್.ಕೆ ಪಾಟೀಲ್ ಕ್ರೆಡಿಟ್ ಪಡೆಯಲು ಹೊರಟಿದ್ದು ದುರ್ದೈವ ಎಂದು ಸಂಕನೂರ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಟಿಪ್ಪು ನಿಜ ಕನಸುಗಳು ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ಪ್ರೇರಣೆ: ಅಡ್ಡಂಡ ಕಾರ್ಯಪ್ಪ

ಸಿದ್ದರಾಮಯ್ಯ ಎಲ್ಲಿ ಸ್ಪರ್ಧಿಸಬೇಕು ಎಂದು ಇನ್ನೂ ನಿರ್ಧಾರ ಆಗಿಲ್ಲ: ಹೆಚ್​​.ಕೆ.ಪಾಟೀಲ್‌  

ಮಾಜಿ ಸಿಎಂ ಸಿದ್ದರಾಮಯ್ಯ 2 ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೆಚ್​​.ಕೆ.ಪಾಟೀಲ್‌ ಹೇಳಿದರು. ಸಿದ್ದರಾಮಯ್ಯ ಎಲ್ಲಿ ಸ್ಪರ್ಧಿಸಬೇಕು ಎಂದು ಇನ್ನೂ ನಿರ್ಧಾರ ಆಗಿಲ್ಲ. ಹೈಕಮಾಂಡ್​ ಹೇಳಿದ ಕಡೆ ಸ್ಪರ್ಧೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರಿಗೆ ಹಲವು ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ವರಿಷ್ಠರು ಹೇಳಿದ ಕಡೆ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ. ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯಗೆ ಬಹಳ ಒತ್ತಾಯವಿದೆ. ಮೈಸೂರು ಜಿಲ್ಲೆಯಲ್ಲೂ ಕಣಕ್ಕಿಳಿಯುವಂತೆ ಒತ್ತಾಯ ಇದೆ ಎಂದು ಹೇಳಿದರು.

ಇದನ್ನೂ ಓದಿ: ಶ್ರೀರಾಮುಲು 200 ಕೋಟಿ ಹಣ ಖರ್ಚು ಮಾಡಿದರೂ ಗೆಲ್ಲುವುದಿಲ್ಲ: ಶಾಸಕ ಬಿ ನಾಗೇಂದ್ರ

ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಹಿಂದೇಟು

ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಹಿಂದೇಟು ಹಾಕಲಾಗುತ್ತಿದೆ ಎನ್ನಲಾಗುತ್ತಿದೆ. ಹಾಗಾದರೆ ಅವರ  ಮುಂದಿನ ಆಯ್ಕೆ ವರುಣನಾ ಅಥವಾ ಬಾದಾಮಿನಾ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಹಿಂದೆ ಕೋಲಾರ ಬಾದಾಮಿ ವರುಣ ಕ್ಷೇತ್ರದ ಬಗ್ಗೆ ಹೇಳಿದ್ದ ಸಿದ್ಧರಾಮಯ್ಯ, ಮೂರು ಕ್ಷೇತ್ರ ಫೈನಲ್ ಆಗಿದೆ. ಒಂದರಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದರು.

ಇದೀಗ ಕೋಲಾರದಿಂದ ಸ್ಪರ್ಧೆ ಬಹುತೇಕ ಇಲ್ಲವೆನ್ನಲಾಗುತ್ತಿದ್ದು, ಈ ಹಿನ್ನೆಲೆ ವರುಣ ಅಥವಾ ಬಾದಾಮಿ ಆಯ್ಕೆ ಸಾಧ್ಯತೆ ಎನ್ನಲಾಗುತ್ತಿದೆ. ಅಥವಾ ವರುಣ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆಗೆ ಒಲವು ತೋರಿದಂತಿದೆ. ವರುಣಗೆ ಬಂದರೆ ಮಗ ಡಾ. ಯತೀಂದ್ರ ರಾಜಕೀಯ ಭವಿಷ್ಯ ಮಂಕಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಅಳೆದು ತೂಗಿ ಸಿದ್ದರಾಮಯ್ಯ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​