AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ಪ್ರವಾಸಕ್ಕೆ ತೆರಳಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಜುಲೈ 17ಕ್ಕೆ ವಾಪಸ್

Rahul Gandhi ಮಂಗಳವಾರ ಬೆಳಗ್ಗೆ ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿದ್ದು, ಜುಲೈ 17 ಭಾನುವಾರ ವಾಪಸ್ ಬರಲಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ವಿದೇಶ ಪ್ರವಾಸಕ್ಕೆ ತೆರಳಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಜುಲೈ 17ಕ್ಕೆ ವಾಪಸ್
ರಾಹುಲ್ ಗಾಂಧಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 12, 2022 | 1:45 PM

Share

ದೆಹಲಿ: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ, ವಯನಾಡ್ (Wayanad)ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಗಾಂಧಿ (Rahul Gandhi) ಇಂದು (ಮಂಗಳವಾರ) ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇಂದು ಬೆಳಗ್ಗೆ ಅವರು ವಿದೇಶಕ್ಕೆ ಹೋಗಿದ್ದು, ಜುಲೈ 17 ಭಾನುವಾರ ವಾಪಸ್ ಬರಲಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಹುಲ್ ಗಾಂಧಿಯವರ ವಿದೇಶ ಪ್ರವಾಸ ವೈಯಕ್ತಿಕವೇ ಅಥವಾ ಅಧಿಕೃತ ಪ್ರವಾಸವೇ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಯಾವ ದೇಶಕ್ಕೆ ಅವರು ಹೋಗಿದ್ದಾರೆ ಎಂಬುದ ಬಗ್ಗೆಯೂ ಸದ್ಯಕ್ಕೆ ಮಾಹಿತಿ ಇಲ್ಲ.ಜುಲೈ 18(ಸೋಮವಾರ) ಸಂಸತ್ ನಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅದೇ ದಿನ ರಾಷ್ಟ್ರಪತಿ ಚುನಾವಣೆಯೂ ನಡೆಯಲಿದ್ದು ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ರಾಹುಲ್ ಗಾಂಧಿ ಇತ್ತೀಚೆಗೆ ಕೈಗೊಂಡ ವಿದೇಶ ಪ್ರವಾಸ ಬಗ್ಗೆ ಭಾರೀ ಚರ್ಚೆಯಾಗಿತ್ತು. ಕಳೆದ ಮೇ ತಿಂಗಳಲ್ಲಿ ರಾಹುಲ್ ವಿದೇಶ ಯಾತ್ರೆ ಕೈಗೊಂಡಿದ್ದರು.

ಮೇ ತಿಂಗಳಲ್ಲಿ ಪ್ರವಾಸಕ್ಕೆ ಹೋದಾಗ ರಾಹುಲ್ ಕಾಠ್ಮಂಡುವಿನ ನೈಟ ಕ್ಲಬ್​​ನಲ್ಲಿ ಕಾಣಿಸಿಕೊಂಡಿದ್ದರು. ಈ ಹೊತ್ತಲ್ಲೇ ಕಾಂಗ್ರೆಸ್ ಪಕ್ಷ ಭಾರೀ ಬಿಕ್ಕಟ್ಟು ಅನುಭವಿಸುತ್ತಿತ್ತು. ಬಿಜೆಪಿ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್, ರಾಹುಲ್ ನೇಪಾಳದಲ್ಲಿ ಸ್ನೇಹಿತರೊಬ್ಬರ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗಿದ್ದರು ಎಂದು ಹೇಳಿತ್ತು.

ಇದನ್ನೂ ಓದಿ
Image
ನನ್ನ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿಯವರನ್ನು ಮಾತ್ರ ಆಹ್ವಾನಿಸಲಾಗಿದೆ, ಬೇರೆ ಪಕ್ಷದವರನ್ನು ಕರೆದಿಲ್ಲ: ಸಿದ್ದರಾಮಯ್ಯ
Image
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್​ ಜನರಲ್​ಗೆ ದೂರು ಸಲ್ಲಿಕೆ
Image
Rahul Gandhi: ಮೋದಿ ಸರ್​ನೇಮ್ ಕುರಿತು ಟೀಕೆ; ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾ

ಮೇ ತಿಂಗಳಾಂತ್ಯದಲ್ಲಿ ರಾಹುಲ್ ಬ್ರಿಟನ್ ಗೆ ಪ್ರವಾಸ ಮಾಡಿದ್ದು, ಈ ಪ್ರವಾಸಕ್ಕೆ ಸರ್ಕಾರದಿಂದ ರಾಜಕೀಯ ಸಮ್ಮತಿ ಇರಲಿಲ್ಲ ಎಂದು ಹೇಳಿ ವಿವಾದವಾಗಿತ್ತು.ಆದರೆ ಸಂಸದರೊಬ್ಬರು ಅಧಿಕೃತ ಪ್ರವಾಸ ಕೈಗೊಳ್ಳುವಾಗ ಮಾತ್ರ ಈ ಸಮ್ಮತಿ ಬೇಕಾಗಿರುವುದು ಆ ಭೇಟಿ ವೈಯಕ್ತಿಕ ಆಗಿತ್ತು ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿತ್ತು.

Published On - 1:30 pm, Tue, 12 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ