AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಘೋಷಿಸಿದ 5 ಗ್ಯಾರಂಟಿ ಜಾರಿಗೊಳಿಸುವುದು ನಿಶ್ಚಿತ: ಟ್ವೀಟ್ ಮೂಲಕ ಬಿಜೆಪಿಗೆ ರಾಜ್ಯ ಕಾಂಗ್ರೆಸ್​​ ಟಾಂಗ್​

ನಾವು ಘೋಷಿಸಿದ 5 ಗ್ಯಾರಂಟಿ ಜಾರಿಗೊಳಿಸುವುದು ನಿಶ್ಚಿತ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ ಎಂದು ಟ್ವೀಟ್ ಮೂಲಕ ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ.​

ನಾವು ಘೋಷಿಸಿದ 5 ಗ್ಯಾರಂಟಿ ಜಾರಿಗೊಳಿಸುವುದು ನಿಶ್ಚಿತ: ಟ್ವೀಟ್ ಮೂಲಕ ಬಿಜೆಪಿಗೆ ರಾಜ್ಯ ಕಾಂಗ್ರೆಸ್​​ ಟಾಂಗ್​
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 25, 2023 | 4:20 PM

Share

ಬೆಂಗಳೂರು: ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ (Congress guarantee) ಬಗ್ಗೆ ಈಗ ಎಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಬಿಜೆಪಿ ನಾಯಕರು ಗ್ಯಾರಂಟಿಗಳ ಕುರಿತಾಗಿ ಟೀಕೆಗಳನ್ನು ಸಹ ಮಾಡುತ್ತಿದ್ದಾರೆ. ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳಿಂದ ರಾಜ್ಯದ ವಾತಾವರಣವನ್ನು ಹಾಳುಮಾಡುತ್ತಿದೆ ಎಂದು ಕಿಡಕಾರಿದ್ದು, ಸದ್ಯ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್​ ಮಾಡಿದೆ. ನಾವು ಘೋಷಿಸಿದ 5 ಗ್ಯಾರಂಟಿ ಜಾರಿಗೊಳಿಸುವುದು ನಿಶ್ಚಿತ ಎಂದು ಹೇಳುವ ಮೂಲಕ ಬಿಜೆಪಿಗೆ ಟಾಂಗ್​ ನೀಡಿದೆ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರಿಗೆ ಕರ್ನಾಟಕದ ಜನ ತಪರಾಕಿ ನೀಡಿದ್ದಾರೆ.

ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲಿ. ಹಾಗೆಯೇ ವಿಪಕ್ಷ ನಾಯಕನ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಹುಡುಕಿಕೊಳ್ಳಲಿ ಎಂದು ಟ್ವೀಟ್ ಮೂಲಕ ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಘಟಕ ಟಾಂಗ್​ ನೀಡಿದೆ.​

ಇದನ್ನೂ ಓದಿ: ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ; ಬಿಜೆಪಿ ಕಿಡಿ

ಬಿಜೆಪಿಗೆ ಕಾಂಗ್ರೆಸ್​ ಸಾಲು ಸಾಲು ಪ್ರಶ್ನೆ

ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಬಿಜೆಪಿಯಲ್ಲಿ ಯಾರೂ ಇಲ್ಲವೆ? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆ ಯಾರದ್ದು? ಅಮಿತ್ ಶಾ ಅವರದ್ದೋ? ಬಸವರಾಜ ಬೊಮ್ಮಾಯಿ ಅವರದ್ದೋ? ನರೇಂದ್ರ ಮೋದಿಯವರದ್ದೋ? ನಳಿನ್ ಕುಮಾರ್ ಕಟೀಲುರದ್ದೋ? ಬಿಜೆಪಿ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವವರು ಯಾರು ಎಂದು ಬಿಜೆಪಿಗೆ ಕಾಂಗ್ರೆಸ್​ ಸಾಲು ಸಾಲು ಪ್ರಶ್ನೆ ಮಾಡಿದೆ.

ಇದನ್ನೂ ಓದಿ: Congress 5 Guarantee: ಐದು ಗ್ಯಾರಂಟಿ ಜಾರಿಗೆಗೆ ಸದ್ದಿಲ್ಲದೆ ನಡೆದಿದೆ ಮಾಹಿತಿ ಸಂಗ್ರಹ

ಕಾಂಗ್ರೆಸ್​​ ವಿರುದ್ಧ ಬಿಜೆಪಿ ಕಿಡಿ

ಕಾಂಗ್ರೆಸ್​ ಗ್ಯಾರಂಟಿಗಳ ಕುರಿತು ಬಿಜೆಪಿ ಟ್ವೀಟ್​ ಮಾಡಿದ್ದು, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳು ರಾಜ್ಯದ ವಾತಾವರಣವನ್ನು ಹಾಳುಮಾಡುತ್ತಿದೆ. ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ನಿತ್ಯ ನಿರಂತರ ಜರುಗುತ್ತಿರುವ ಇಂತಹ ಹಲವಾರು ಘಟನೆಗಳಿಗೆ ಸಿದ್ಧರಾಮಯ್ಯ ಅವರ ನೇತೃತ್ವದ ಎಟಿಎಂ ಸರ್ಕಾರ (#ATMSarkara) ವೇ ನೇರ ಹೊಣೆ ಎಂದು ಕಿಡಿಕಾರಿದೆ.

ಕಾಂಗ್ರೆಸ್‌ ಸಾರಿರುವ ಸುಳ್ಳುಗಳಿಂದ ಜನಸಾಮಾನ್ಯರ ಹಾಗೂ ಸರ್ಕಾರಿ ಸಿಬ್ಬಂದಿಗಳ ನಡುವೆ ಅನಾವಶ್ಯಕ ಸಂಘರ್ಷ ನಡೆಯುವಂತಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಬಸ್ಸುಗಳಲ್ಲಿ ಸಿಬ್ಬಂದಿಗಳು ಹಾಗೂ ಪ್ರಯಾಣಿಕರ ನಡುವೆ ವಾಗ್ವಾದ ನಡೆಯುತ್ತಿದೆ ಎಂದು ಅಸಹಾಯಕತೆಯಿಂದ ಕೆಎಸ್‌ಆರ್‌ಟಿಸಿ ನೌಕರರ ಸಂಘ ಪತ್ರ ಬರೆದಿದೆ.

ಸಾರ್ವಜನಿಕರ ಭಾವನೆಗಳೊಂದಿಗೆ ಚೆಲ್ಲಾಟವಾಡುವ ಹಾಗೂ ಸರ್ಕಾರದ ಈ ಹೊಣೆಗೇಡಿತನದ ವಿರುದ್ಧ ರಾಜ್ಯದ ಜನ ಸಿಡಿದೇಳುವ ಕಾಲ ದೂರವಿಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Thu, 25 May 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್