AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ವಿದ್ಯುತ್ ಬೇಡ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ: ರಾಜ್ಯ ಸರ್ಕಾರಕ್ಕೆ ಪ್ರಜ್ವಲ್‌ ರೇವಣ್ಣ ಮನವಿ

200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೇನು ಫಲ? ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಆರೋಪಿಸಲು ಆರಂಭಿಸಿದ್ದಾರೆ. ಸರಿಯಾದ ರೀತಿಯಲ್ಲಿ, ಸರಿಯಾದ ಸಮಯದಲ್ಲಿ ಕರೆಂಟ್ ಕೊಡಲಿಲ್ಲ ಅಂದರೆ ನಿಮ್ಮ ಉಚಿತ ಕರೆಂಟ್ ಏನಕ್ಕೆ ಬೇಕು ಅಂತ ಸಂಸದ ಪ್ರಜ್ವಲ್ ರೇವಣ್ಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಉಚಿತ ವಿದ್ಯುತ್ ಬೇಡ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ: ರಾಜ್ಯ ಸರ್ಕಾರಕ್ಕೆ ಪ್ರಜ್ವಲ್‌ ರೇವಣ್ಣ ಮನವಿ
ಪ್ರಜ್ವಲ್ ರೇವಣ್ಣ
ಮಂಜುನಾಥ ಕೆಬಿ
| Edited By: Rakesh Nayak Manchi|

Updated on: Aug 17, 2023 | 6:30 PM

Share

ಹಾಸನ, ಆಗಸ್ಟ್ 17: ಕಾಂಗ್ರೆಸ್ ಸರ್ಕಾರ ಷರತ್ತು ವಿಧಿಸಿ 200 ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೇನು ಫಲ? ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಆರೋಪಿಸಲು ಆರಂಭಿಸಿದ್ದಾರೆ. ಸರಿಯಾದ ರೀತಿಯಲ್ಲಿ, ಸರಿಯಾದ ಸಮಯದಲ್ಲಿ ಕರೆಂಟ್ ಕೊಡಲಿಲ್ಲ ಅಂದರೆ ನಿಮ್ಮ ಉಚಿತ ಕರೆಂಟ್ (Free Electricity) ಏನಕ್ಕೆ ಬೇಕು ಅಂತ ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ನಿಮ್ಮ ಉಚಿತ ಕರೆಂಟ್ ನಮಗೆ ಬೇಡ. ರೈತರ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ. ಎಲ್ಲಾ ಕಡೆಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದೊಂದು ಸಮಸ್ಯೆ ಆಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ರೈತರ ಮೇಲೆ ಕೇಸ್ ದಾಖಲಿಸಿ, ದಂಡ ವಿಧಿಸುತ್ತಿದ್ದಾರೆ ಎಂದು ಹೇಳಿದ ಪ್ರಜ್ವಲ್ ರೇವಣ್ಣ, ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ರೈತರು ಟ್ರಾನ್ಸ್‌ಫಾರ್ಮರ್ ಹಾಕಿಕೊಂಡುವಂತೆ ಹಣ ಕಟ್ಟಿದ್ದಾರೆ. ಆದರೂ ಟ್ರಾನ್ಸ್‌ಫಾರ್ಮರ್ ಆಳವಡಿಸಿಲ್ಲ. ಹೀಗಾಗಿ ರೈತರು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದರು.

ಇದನ್ನೂ ಓದಿ: ಹಾಸನ: ಆಸ್ಪತ್ರೆಗೆ ವಾಸ್ತು ಪ್ರಕಾರವೇ ವಿದ್ಯುತ್ ಸ್ಟೇಷನ್ ಅಳವಡಿಕೆಗೆ ಹೆಚ್​ಡಿ ರೇವಣ್ಣ ಸೂಚನೆ

ಜಿಲ್ಲೆಯಲ್ಲಿ ದುಡ್ಡು ಕಟ್ಟಿರುವ ಹದಿಮೂರುವರೆ ಸಾವಿರ ರೈತರಿದ್ದಾರೆ. ಬಜೆಟ್ ಇಲ್ಲಾ ಎಂದು ಪ್ರತಿ ಬಾರಿ ಐವತ್ತು, ಅರವತ್ತು ಲಕ್ಷ ಕೊಡುತ್ತೀರಾ, ಅಷ್ಟು ಹಣದಲ್ಲಿ ಎಷ್ಟು ಟ್ರಾನ್ಸ್‌ಫಾರ್ಮರ್ ಅಳವಡಿಸಲು ಆಗುತ್ತದೆ. ಹಾಸನ ತಾಲ್ಲೂಕು ಒಂದರಲ್ಲಿ 1061 ರೈತರು ಹಣ ಕಟ್ಟಿದ್ದಾರೆ. ಇದು ಹೀಗೆ ಮುಂದುವರೆದರೆ, ರೈತರ ಹಿತ ಕಾಯದಿದ್ದರೆ ನಾವೆಲ್ಲರೂ ದೊಡ್ಡಮಟ್ಟದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದೆ ರೈತರು ಬೆಳೆದ ಬೆಳೆಗಳು ಹಾಳಾಗುತ್ತಿವೆ. ನಾಲ್ಕು ಗಂಟೆ ಅಂತ ಹೇಳಿ ಮೂರು ಗಂಟೆ ವಿದ್ಯುತ್ ನೀಡುತ್ತಿದ್ದಾರೆ. ಜೋಳ ಎಲ್ಲಾ ಒಣಗುವ ಮಟ್ಟಕ್ಕೆ ಬಂದಿದೆ. ಈ ರೈತರ ಕ್ಷೇಮ ಕಾಯದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದರು.

ನಿಮ್ಮ ಉಚಿತ ಯೋಜನೆಯನ್ನು ನಾವ್ಯಾರು ಕೇಳುತ್ತಿಲ್ಲ. ರೈತರಿಗೆ ಸರಿಯಾದ ಸಮಯಕ್ಕೆ ವಿದ್ಯುತ್, ನೀರು, ರೈತರ ಬೆಳೆಗೆ ಸರಿಯಾದ ವೈಜ್ಞಾನಿಕ ಬೆಲೆ ನೀಡಿದರೆ ಅವರೇ ಅನುದಾನ ಕೊಡುತ್ತಾರೆ ಅಂತ ದೇವೇಗೌಡ ಅವರು 2009ರಲ್ಲೇ ಹೇಳಿದ್ದರು. ಇಂತಹ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕೇ ಹೊರತು ಸರ್ಕಾರ ಬರೀ ಯೋಜನೆಗಳ ಬಗ್ಗೆ ತಲೆಕೆಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಈ ಸರ್ಕಾರ ದಿವಾಳಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಸನಕ್ಕೆ ಬಂದ ವೇಳೆ ವಿದ್ಯುತ್ ಸಮಸ್ಯೆ ಬಗ್ಗೆ ಗಮನಕ್ಕೆ ತರುತ್ತೇನೆ. ರಾಜಣ್ಣ ಅವರ ಮೇಲೆ ನನಗೆ ವಿಶ್ವಾಸವಿದೆ. ಅವರು ಅಧಿಕಾರಿಗಳನ್ನು ಕರೆದು ಚರ್ಚಿಸಿ ನಿರ್ದೇಶನ ನೀಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ