AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ದರ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ: ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದುಃಖದಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆಗೆ ನಾನ್ಯಾಕೆ ಬೇಸರ ಮಾಡಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.

ವಿದ್ಯುತ್ ದರ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ: ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​
ಗಂಗಾಧರ​ ಬ. ಸಾಬೋಜಿ
|

Updated on: Jun 13, 2023 | 6:35 PM

Share

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದುಃಖದಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆಗೆ ನಾನ್ಯಾಕೆ ಬೇಸರ ಮಾಡಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)​ ಹೇಳಿದರು. ಬಿಜೆಪಿ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ ಎಂಬ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರು ಸಿಟಿ ರೌಂಡ್ಸ್​ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿದ್ಯುತ್ ದರ ಸಂಬಂಧ ನಮ್ಮ ಬಳಿ ಎಲ್ಲಾ ದಾಖಲೆಗಳಿವೆ ಎಂದು ಹೇಳಿದರು.

ನಾನು ಟ್ರಾಫಿಕ್ ಬಗ್ಗೆ ಹೆಚ್ಚು ಗಮನ‌ಹರಿಸಿದ್ದೇನೆ

ಬೆಂಗಳೂರಿನಲ್ಲಿ ಸಂಚಾರ ನಿರ್ವಹಣೆ ಬಗ್ಗೆ ಹೆಚ್ಚು ಗಮನ‌ಹರಿಸಿದ್ದೇನೆ. ಟ್ರಾಫಿಕ್ ವಿಚಾರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಸಾರ್ವಜನಿಕರಿಂದಲೂ ಮಾಹಿತಿ ಪಡೆಯುತ್ತೇನೆ. ಟ್ರಾಫಿಕ್ ವಿಚಾರವಾಗಿ ಸಾರ್ವಜನಿಕರು, ತಜ್ಞರ ಸಭೆ ನಡೆಸುವೆ ಎಂದರು.

ಇದನ್ನೂ ಓದಿ: ನಮ್ಮ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ; ಇಂಧನ ಸಚಿವರ ಆರೋಪಕ್ಕೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು

ವಿದ್ಯುತ್​ ದರ ಹೆಚ್ಚಳ ಆರೋಪ ತಳ್ಳಿ ಹಾಕಿದ ಮಾಜಿ ಸಿಎಂ ಬೊಮ್ಮಾಯಿ

ನಮ್ಮ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದ್ದಾರೆ. ವಿದ್ಯುತ್​ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ವಿದ್ಯುತ್​ ದರ ಹೆಚ್ಚಳವಾಗಿದೆ ಎನ್ನುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ಹುಸಿ ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವುದು ನಿಶ್ಚಿತ: ಸುನಿಲ್ ಕುಮಾರ್

ಕಾದುನೋಡುವ ತಂತ್ರ ನಮ್ಮದು

ಗ್ಯಾರಂಟಿ ಯೋಜನೆ ವಿಚಾರದಲ್ಲಿ ಕಾದುನೋಡುವ ತಂತ್ರ ನಮ್ಮದು. ಉಚಿತ ಪ್ರಯಾಣ ವಿಚಾರದಲ್ಲಿ ಸರ್ಕಾರ ಆರಂಭ ಶೂರತ್ವ ತೋರುತ್ತಿದೆ. ಗ್ಯಾರಂಟಿ ಜಾರಿಗೆ ಹಣಕಾಸಿನ ಬಗ್ಗೆ ಸರ್ಕಾರ‌ ಸ್ಪಷ್ಟವಾಗಿ ಹೇಳುತ್ತಿಲ್ಲ. ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ