AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಭಿನ್ನಮತ ದೂರವಿಟ್ಟು ಪ್ರಧಾನಿ ಮೋದಿಗೆ ಬೆಂಬಲ ನೀಡಬೇಕು: ಶೋಭಾ ಕರಂದ್ಲಾಜೆ

ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಬೆಂಬಲ ಕೊಡಬೇಕು. ಇಂತಹ ಅಪೇಕ್ಷೆ ಅನೇಕ ರಾಜಕೀಯ ಪಾರ್ಟಿಯಲ್ಲೂ ಇದೆ. ಜೆಡಿಎಸ್​ನಿಂದಲೂ ಈ ನಿರೀಕ್ಷೆ ಮಾಡುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಜಕೀಯ ಭಿನ್ನಮತ ದೂರವಿಟ್ಟು ಪ್ರಧಾನಿ ಮೋದಿಗೆ ಬೆಂಬಲ ನೀಡಬೇಕು: ಶೋಭಾ ಕರಂದ್ಲಾಜೆ
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ನಿಂದ ಬೆಂಬಲ ಅಪೇಕ್ಷಿಸಿದ ಶೋಭಾ ಕರಂದ್ಲಾಜೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 15, 2023 | 12:07 PM

Share

ಚಿಕ್ಕಮಗಳೂರು: ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ (Loka Sabha Elections) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಬೆಂಬಲ ಕೊಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಸೂಚಿಸುವ ಬಗ್ಗೆ ಜಿಲ್ಲೆಯಲ್ಲಿ ಮಾತನಾಡಿದ ಅವರು, ಅನೇಕ ಪಕ್ಷಗಳು ಬೆಂಬಲಿಸುತ್ತಿದ್ದು, ಜೆಡಿಎಸ್​ನಿಂದಲೂ ನಾವು ಅಪೇಕ್ಷೆ ಮಾಡುತ್ತೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಬೇಕು. ಇಂದು ಭಾರತಕ್ಕೆ ಎದ್ದುನಿಂತ್ತು ಗೌರವ ನೀಡುತ್ತಿದ್ದಾರೆ ಎದರೆ ಅದಕ್ಕೆ ಪ್ರಧಾನಿ ಮೋದಿ ಅವರೇ ಕಾರಣ. ಹೀಗಾಗಿ ರಾಜಕೀಯ ಭಿನ್ನಮತಗಳನ್ನ ದೂರ ಬಿಟ್ಟು ಬೆಂಬಲ ಕೊಡಬೇಕು. ಇಂತಹ ಅಪೇಕ್ಷೆ ಅನೇಕ ರಾಜಕೀಯ ಪಾರ್ಟಿಯಲ್ಲೂ ಇದೆ. ಈ ಅಪೇಕ್ಷೆಯನ್ನ ಜೆಡಿಎಸ್​ನಿಂದಲೂ ನಿರೀಕ್ಷೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಫ್ರಾನ್ಸ್​​ ಅಧ್ಯಕ್ಷರಿಗೆ ಶ್ರೀಗಂಧದ ಸಿತಾರ್ ಉಡುಗೊರೆ ನೀಡಿದ ಪ್ರಧಾನಿ ಮೋದಿ; ಇತರ ಗಣ್ಯರಿಗೂ ವಿಶಿಷ್ಟ ಉಡುಗೊರೆ

ದೇಶದ ಉನ್ನತಿ ಬಗ್ಗೆ ಯೋಚಿಸುವ ರಾಜಕೀಯ ಪಕ್ಷಗಳು ಪ್ರಧಾನಿ ಮೋದಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿವೆ ಎಂದು ಹೇಳಿದ ಶೋಭಾ ಕರಂದ್ಲಾಜೆ, ನೂರನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರತ ವಿಶ್ವದಲ್ಲೇ ನಂಬರ್ ಓನ್ ಆಗಿರಬೇಕು ಎಂಬುದು ಮೋದಿ ಅವರ ಆಸೆ ಎಂದರು.

ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್​ನಿಂದ ದ್ವೇಷದ ರಾಜಕಾರಣ

ಸರ್ಕಾರ ಆರ್​​ಎಸ್​ಎಸ್​ಗೆ ನೀಡಿದ್ದ ಭೂಮಿ ತಡೆ ಹಿಡಿದ ವಿಚಾರವಾಗಿ ಮಾತನಾಡಿದ ಶೋಭಾ ಕರಂದ್ಲಾಜೆ, ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್​ನಿಂದ ದ್ವೇಷದ ರಾಜಕಾರಣ ಆರಂಭವಾಗಿದೆ. ಆರ್​ಎಸ್​ಎಸ್​ಗೆ ನೀಡಿದ್ದ ಭೂಮಿ ಸರ್ಕಾರ ವಾಪಸ್​ ಪಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ಆರ್​ಎಸ್​ಎಸ್​ ಯಾವುದೇ ಜಾತಿ, ಧರ್ಮದ ಪರ ಮತ್ತು ವಿರೋಧವಾಗಿ ಇಲ್ಲ. ರಾಷ್ಟ್ರದ ಜೊತೆ ಕೆಲಸ ಮಾಡುವುದು ಆರ್​ಎಸ್​ಎಸ್​ನ ಉದ್ದೇಶವಾಗಿದೆ. ಸಾಮಾಜಿಕ ಚಟುವಟಿಕೆಗಳ ಮೂಲಕ ಉತ್ತಮ ಶಿಕ್ಷಣ ನೀಡುತ್ತಿದೆ. ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ‌ ಆರ್​ಎಸ್​ಎಸ್ ಸೇವೆ ನೀಡುತ್ತದೆ. ಕಾಂಗ್ರೆಸ್ ಸರ್ಕಾರ ಇಂತಹ ದ್ವೇಷದ ರಾಜಕಾರಣ ಮಾಡಬಾರದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ