AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಮಂಡ್ಯದ ವಿಶೇಷ ಆರ್ಗಾನಿಕ್ ಬೆಲ್ಲವನ್ನ ಕೊಡುತ್ತೇನೆ: ಸಂಸದೆ ಸುಮಲತಾ

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12ರಂದು ಮಂಡ್ಯಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲಿದ್ದೇವೆ. ನಮ್ಮ ಬೆಂಬಲಿಗರು ರೋಡ್ ಶೋಗೆ ಸಾಥ್ ನೀಡಲಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಮಂಡ್ಯದ ವಿಶೇಷ ಆರ್ಗಾನಿಕ್ ಬೆಲ್ಲವನ್ನ ಕೊಡುತ್ತೇನೆ: ಸಂಸದೆ ಸುಮಲತಾ
ಸಂಸದೆ ಸುಮಲತಾ ಅಂಬರೀಷ್ ಮತ್ತು ಪ್ರಧಾನಿ ನರೇಂದ್ರ ಮೋದಿ
Rakesh Nayak Manchi
Rakesh Nayak Manchi|

Updated on:Mar 11, 2023 | 11:15 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರು ಮೈಸೂರು ಎಕ್ಸ್​​​ಪ್ರೆಸ್​ ವೇ (Bengaluru-Mysuru Expressway)ಯನ್ನು ಮಾರ್ಚ್ 12ರಂದು ಮಂಡ್ಯದ ಮದ್ದೂರು ತಾಲೂಕಿನಲ್ಲಿ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh), ಪ್ರಧಾನಿ ಮೋದಿಯವರಿಗೆ ಮಂಡ್ಯ ನಗರದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಿದ್ದೇವೆ. ಇದಕ್ಕಾಗಿ ಜಿಲ್ಲಾಡಳಿತ ತಯಾರಿ ನಡೆಸಿದೆ. ಹಿಂದೆಂದು ನೋಡಿಲ್ಲದಂತೆ, ಮೆಗಾ ಇವೆಂಟ್​ಗಾಗಿ ಮಂಡ್ಯದಲ್ಲಿ ಎಲ್ಲರೂ ಒಂಥರಾ ಕಾತುರದಿಂದ ಕಾಯುತ್ತಿದ್ದಾರೆ. ಮಾತ್ರವಲ್ಲದೆ, ಮೋದಿಯವರ ರೋಡ್ (Modi Road Show) ಶೋಗೆ ನಮ್ಮ ಬೆಂಬಲಿಗರು ಸಾಥ್ ನೀಡಲಿದ್ದಾರೆ. ಮೋದಿಗೆ ನಾನು ಮಂಡ್ಯದ ವಿಶೇಷವಾದ ಆರ್ಗಾನಿಕ್ ಬೆಲ್ಲವನ್ನ ಕೊಡಲಿದ್ದೇನೆ. ಒಟ್ಟಾರೆಯಾಗಿ 41 ವರ್ಷದ ನಂತರ ಪ್ರಧಾನಿಯೊಬ್ಬರು ಜಿಲ್ಲೆಗೆ ಬರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಬೆನ್ನಲ್ಲೇ ಇಂದು ಸುಮಲತಾ ಅವರು ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸುಮಲತಾ, ಯುಡಿಯೂರಪ್ಪ ಅವರು ನನ್ನ ನಿರ್ಧಾರ ಚನ್ನಾಗಿದೆ ಅಂದಿದ್ದಾರೆ. ನಮ್ಮ ಬೆಂಬಲ ಇರುತ್ತದೆ, ಕೆಲವರದ್ದು ನಿಷ್ಠೂರ ಇರುತ್ತದೆ, ಧೈರ್ಯವಾಗಿ ಮುನ್ನುಗ್ಗಿ ಅಂತಾ ಸಲಹೆ ನೀಡಿದ್ದಾರೆ. ಮಂಡ್ಯದ ರಾಜಕೀಯದ ಬಗ್ಗೆ ಮಾತನಾಡಿದರು. ನಾನು ಮಂಡ್ಯದವನೇ ಮುನ್ನುಗ್ಗಿ ಅಂತ ಹೇಳಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Sumalatha Ambareesh: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ಮೋದಿ; ಸುಮಲತಾ ಬಣ್ಣನೆ

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ತಾರಾ? ಈ ಚುನಾವಣೆಯಲ್ಲೇ ಬಿಜೆಪಿಯಿಂದ ವಿಧಾನಸಭಾ ಅಖಾಡಕ್ಕೆ ಧುಮುಕುತ್ತಾರಾ? ಹೀಗೆ ನಾನಾ ಪ್ರಶ್ನೆಗಳು ಮಂಡ್ಯ ರಾಜಕೀಯದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸುಮಲತಾ, ವಿಧಾನಸಭೆ ಚುನಾವಣೆಯಲ್ಲಿ ನಿಲ್ಲುವ ಬಗ್ಗೆ ಚರ್ಚೆ ಮಾಡಿಲ್ಲ, ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಬಿಜೆಪಿಯನ್ನ ಮಂಡ್ಯದಲ್ಲಿ ಬಲಿಷ್ಟಗೊಳಿಸಲು ನನ್ನ ಕಮಿಟ್ ಮೆಂಟ್ ಶೇ. 100ರಷ್ಟು ಇರುತ್ತದೆ. ನನ್ನ ಜಿಲ್ಲೆಗೆ ಅಗತ್ಯವಾದ ಬೆಡಿಕೆಗಳಿವೆ, ಅದನ್ನ ಪೂರೈಸುವುದೇ ನನ್ನ ಉದ್ದೇಶವಾಗಿದೆ ಎಂದರು.

ಕರ್ನಾಟಕ ರಾಜ್ಯವು ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿದ್ದು, ಅಖಾಡದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯಲು ಟೊಂಕ ಕಟ್ಟಿ ನಿತ್ತಿದ್ದು, ಈ ಸಂಬಂಧ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಈಗ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್​ 12 ರಂದು ಧಾರವಾಡ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 pm, Sat, 11 March 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!