ಪ್ರಾಣ ಕೊಡುತ್ತೇವೆ, ಮೀಸಲಾತಿ ಮುಟ್ಟಿದರೆ ಸಹಿಸಲ್ಲ: ಕಾಂಗ್ರೆಸ್ ಸರ್ಕಾರಕ್ಕೆ ಶ್ರೀರಾಮುಲು ಎಚ್ಚರಿಕೆ

ಜೀವ, ಪ್ರಾಣ ಕೊಡುತ್ತೇವೆ ಆದರೆ ಮೀಸಲಾತಿ ಮುಟ್ಟಿದರೆ ಸಹಿಸಲ್ಲ, ಶಾಸಕರ ಮನೆಗಳಿಗೆ ನುಗ್ಗುವಂತಹ ಕೆಲಸ ಕೂಡ ಆಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಪ್ರಾಣ ಕೊಡುತ್ತೇವೆ, ಮೀಸಲಾತಿ ಮುಟ್ಟಿದರೆ ಸಹಿಸಲ್ಲ: ಕಾಂಗ್ರೆಸ್ ಸರ್ಕಾರಕ್ಕೆ ಶ್ರೀರಾಮುಲು ಎಚ್ಚರಿಕೆ
ಮೀಸಲಾತಿ ಮುಟ್ಟಿದರೆ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಶ್ರೀರಾಮುಲು
Follow us
|

Updated on: Jun 08, 2023 | 8:23 PM

ಬೆಂಗಳೂರು: ಜೀವ, ಪ್ರಾಣ ಕೊಡುತ್ತೇವೆ ಆದರೆ ಮೀಸಲಾತಿ ಮುಟ್ಟಿದರೆ ಸಹಿಸಲ್ಲ, ಶಾಸಕರ ಮನೆಗಳಿಗೆ ನುಗ್ಗುವಂತಹ ಕೆಲಸ ಕೂಡ ಆಗುತ್ತದೆ ಎಂದು ಕಾಂಗ್ರೆಸ್ (Congress) ಸರ್ಕಾರಕ್ಕೆ ಮಾಜಿ ಸಚಿವ ಶ್ರೀರಾಮುಲು (B Sriramulu) ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೀಸಲಾತಿ ಮುಟ್ಟಿದರೆ ಜನರು ಮುಂದೆ ಬೀದಿಗಿಳಿಯುತ್ತಾರೆ. ಎಂತಹ ಪರಿಸ್ಥಿತಿಯಾದರೂ ಸರಿ ಜೀವ, ಪ್ರಾಣ ಬೇಕಾದರೆ ಕೊಡುತ್ತೇವೆ. ಆದರೆ ಮೀಸಲಾತಿ (Resurvation) ಮುಟ್ಟುವವರನ್ನು, ತೆಗೆಯುವವರನ್ನು ಸಹಿಸಲ್ಲ ಎಂದು ಹೇಳಿದ್ದಾರೆ.

ಜಾತಿ ಜನಗಣತಿ ಬಹಳ ಹಳೆಯದ್ದು. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಅದನ್ನು ಸ್ವೀಕಾರ ಮಾಡಲು ಒಪ್ಪಿರಲಿಲ್ಲ. ಅವರೇ ಸಿಎಂ ಆಗಿದ್ದರು, ಅವರೇ ಯಾರನ್ನೋ ಚೇರ್ಮನ್ ಕೂಡಾ ಮಾಡಿಕೊಂಡಿದ್ದರು. ಅವರು ಕೊಟ್ಟ ವರದಿಯನ್ನೇ ಸ್ವೀಕಾರ ಮಾಡಲು ರೆಡಿ ಇರಲಿಲ್ಲ. ಇವತ್ತು ಜಾತಿ ಜನಗಣತಿ ಬಗ್ಗೆ ಮಾತಾಡಿದರೆ ಎಲ್ಲಿಗೆ ಹೋಗಿ ನಿಲ್ಲುತ್ತದೆ? ಅಧಿಕಾರದಲ್ಲಿ ಇರುವಾಗ ಒಂದು ಮಾತು, ಅಧಿಕಾರದಲ್ಲಿ ಇಲ್ಲದೇ ಇರುವಾಗ ಒಂದು ಮಾತು ಎಂದು ಟೀಕಿಸಿದರು.

ಇದನ್ನೂ ಓದಿ: ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ಅಷ್ಟೇ ಎಂದ ಸಚಿವ ಚೆಲುವರಾಯಸ್ವಾಮಿ; ಇನ್ನೂ ಏನೇನಂದ್ರು? ವಿಡಿಯೋ ನೋಡಿ

ಜನ ಬೀದಿಗೆ ಇಳಿದು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುತ್ತಾರೆ: ಶ್ರೀರಾಮುಲು

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಕಾಂಗ್ರೆಸ್​ಗೆ ಕಷ್ಟ ಆಗುತ್ತಿದೆ. ಸರ್ಕಾರದ ಖಜಾನೆ ಖಾಲಿ ಆಗುತ್ತಿದೆ. ಉಚಿತ ಕರೆಂಟ್ ಸಿಗುತ್ತದೆ ಅಂತ ನಂಬಿದ ಬಡವರಿಗೆ ಮೋಸ ಮಾಡಿದ್ದಾರೆ. ಇದನ್ನೆಲ್ಲಾ ಜನ ಗಮನಿಸುತ್ತಿದ್ದಾರೆ. ಗ್ಯಾರಂಟಿಗಳಲ್ಲಿ ಷರತ್ತುಗಳನ್ನು ಹಾಕಿದ್ದಾರೆ. ಇವರ ಗ್ಯಾರಂಟಿಗಳು ಜಾರಿಗೆ ಬರುವ ಲಕ್ಷಣ ಕಾಣಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಮುಂದಿನ ದಿನಗಳಲ್ಲಿ ಜನ ಸುಮ್ಮನಿರುವುದಿಲ್ಲ. ಜನ ಬೀದಿಗೆ ಇಳಿದು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುತ್ತಾರೆ. ಕಾಂಗ್ರೆಸ್ ಶಾಸಕರ ಮನೆಗಳಿಗೂ ಜನ ನುಗ್ಗುವ ಕೆಲಸ ಮಾಡುತ್ತಾರೆ. ಆ ಮೂಲಕ ಕಾಂಗ್ರೆಸ್​ನವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ