AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್ ಪಾಟೀಲ್​ಗೆ ಸಚಿವ ಸ್ಥಾನ ನೀಡದಿದ್ದರೆ ಸಮೂಹಿಕ ರಾಜೀನಾಮೆ: ರೋಣಾ ಕೈ ಮುಖಂಡರ ಎಚ್ಚರಿಕೆ

ರೋಣ ಶಾಸಕ ಜಿ.ಎಸ್.ಪಾಟೀಲ್​ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಜಿಎಸ್ ಪಾಟೀಲ್​ಗೆ ಸಚಿವ ಸ್ಥಾನ ನೀಡದಿದ್ದರೆ ಸಮೂಹಿಕ ರಾಜೀನಾಮೆ: ರೋಣಾ ಕೈ ಮುಖಂಡರ ಎಚ್ಚರಿಕೆ
ಜಿಎಸ್​ ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
Rakesh Nayak Manchi
Rakesh Nayak Manchi|

Updated on: May 21, 2023 | 4:46 PM

Share

ಗದಗ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಡಿಸಿಎಂ ಪಟ್ಟಕ್ಕಾಗಿ ಭಾರೀ ಪೈಪೋಟಿ ನಡೆದಿತ್ತು. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ, ಡಿಕೆ ಶಿವಕುಮಾರ್ (DK Shivakumar) ಅವರು ಡಿಸಿಎಂ ಆಗುವ ಮೂಲಕ ಜಿದ್ದಾಜಿದ್ದಿ ಕೊನೆಗೊಂಡಿತು ಎನ್ನುಷ್ಟರಲ್ಲಿ ಕಾಂಗ್ರೆಸ್ ಹೈಕಮಾಂಡ್​ಗೆ ಸಚಿವ ಸ್ಥಾನ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ. ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿಯಲಾರಂಭಿಸಿದ್ದಾರೆ. ಕೆಲವೆಡೆ ಕಾರ್ಯಕರ್ತರು, ಮುಖಂಡರ ಆಗ್ರಹಗಳು ಕೇಳಿಬರುತ್ತಿವೆ. ಇದೀಗ ರೋಣ ಕ್ಷೇತ್ರ ಶಾಸಕ ಜಿಎಸ್ ಪಾಟೀಲ್ (GS Patil)​ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೈ ಮುಖಂಡರು ಆಗ್ರಹಿಸುತ್ತಿದ್ದಾರೆ.

ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಕಾಂಗ್ರೆಸ್ ಮುಖಂಡರು, ಜಿಎಸ್ ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡುವ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಮೇ 23ರಂದು ಕೆಪಿಸಿಸಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಮುಖಂಡರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಬಾರಿಯೂ ರೋಣ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗುತ್ತದೆ ಎಂದು ಕಿಡಿಕಾರಿದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಲ್ಕು ದಶಕದಿಂದ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ಬಾರಿ ಜಿಎಸ್ ಪಾಟೀಲರಿಗೆ ಸಚಿವ ಸ್ಥಾನ ನೀಡಲೇಬೇಕು ಅಂತ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಲಡಾಯಿ, 5 ಲಿಂಗಾಯತ ಶಾಸಕರಲ್ಲಿ ಯಾರಿಗೆ ಮಂತ್ರಿ ಭಾಗ್ಯ?

ಪಾಟೀಲರಿಗೆ ಸಚಿವ ಸ್ಥಾನ ಕೈತಪ್ಪಿದರೆ ಸಾಮೂಹಿಕ ರಾಜೀನಾಮೆ, ಪ್ರತಿಭಟನೆಯ ಜೊತೆಗೆ ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ಎಐಸಿಸಿ, ಕೆಪಿಸಿಸಿ ವರಿಷ್ಠರಿಗೆ ರೋಣಾ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ರೋಣ ಕ್ಷೇತ್ರಕ್ಕೆ ಅಷ್ಟೊಂದು ಅನ್ಯಾಯ ಆಗಿದೆ. ಈ ಬಾರಿ ಅನ್ಯಾಯ ಸಹಿಸಲ್ಲ ಎಂದು ಹೇಳಿದ್ದಾರೆ.

ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೈಮುಗಿದು ಕೇಳಿಕೊಂಡ ಮುಖಂಡರು, ನಮ್ಮ ನಾಯಕರಿಗೆ ಮಂತ್ರಿ ಸ್ಥಾನ ಕೊಟ್ಟರೆ ಸಾಕು, ನಮಗೆ ಯಾವುದೇ ಸ್ಥಾನಮಾನ ಬೇಡ. ಈ ಬಾರಿ ಯಾವುದೇ ಕಾರಣಕ್ಕೂ ರೋಣ ಕ್ಷೇತ್ರಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್