AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್ ಪಾಟೀಲ್​ಗೆ ಸಚಿವ ಸ್ಥಾನ ನೀಡದಿದ್ದರೆ ಸಮೂಹಿಕ ರಾಜೀನಾಮೆ: ರೋಣಾ ಕೈ ಮುಖಂಡರ ಎಚ್ಚರಿಕೆ

ರೋಣ ಶಾಸಕ ಜಿ.ಎಸ್.ಪಾಟೀಲ್​ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಜಿಎಸ್ ಪಾಟೀಲ್​ಗೆ ಸಚಿವ ಸ್ಥಾನ ನೀಡದಿದ್ದರೆ ಸಮೂಹಿಕ ರಾಜೀನಾಮೆ: ರೋಣಾ ಕೈ ಮುಖಂಡರ ಎಚ್ಚರಿಕೆ
ಜಿಎಸ್​ ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
Rakesh Nayak Manchi
Rakesh Nayak Manchi|

Updated on: May 21, 2023 | 4:46 PM

Share

ಗದಗ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಡಿಸಿಎಂ ಪಟ್ಟಕ್ಕಾಗಿ ಭಾರೀ ಪೈಪೋಟಿ ನಡೆದಿತ್ತು. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ, ಡಿಕೆ ಶಿವಕುಮಾರ್ (DK Shivakumar) ಅವರು ಡಿಸಿಎಂ ಆಗುವ ಮೂಲಕ ಜಿದ್ದಾಜಿದ್ದಿ ಕೊನೆಗೊಂಡಿತು ಎನ್ನುಷ್ಟರಲ್ಲಿ ಕಾಂಗ್ರೆಸ್ ಹೈಕಮಾಂಡ್​ಗೆ ಸಚಿವ ಸ್ಥಾನ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ. ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿಯಲಾರಂಭಿಸಿದ್ದಾರೆ. ಕೆಲವೆಡೆ ಕಾರ್ಯಕರ್ತರು, ಮುಖಂಡರ ಆಗ್ರಹಗಳು ಕೇಳಿಬರುತ್ತಿವೆ. ಇದೀಗ ರೋಣ ಕ್ಷೇತ್ರ ಶಾಸಕ ಜಿಎಸ್ ಪಾಟೀಲ್ (GS Patil)​ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೈ ಮುಖಂಡರು ಆಗ್ರಹಿಸುತ್ತಿದ್ದಾರೆ.

ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಕಾಂಗ್ರೆಸ್ ಮುಖಂಡರು, ಜಿಎಸ್ ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡುವ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಮೇ 23ರಂದು ಕೆಪಿಸಿಸಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಮುಖಂಡರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಬಾರಿಯೂ ರೋಣ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗುತ್ತದೆ ಎಂದು ಕಿಡಿಕಾರಿದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಲ್ಕು ದಶಕದಿಂದ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ಬಾರಿ ಜಿಎಸ್ ಪಾಟೀಲರಿಗೆ ಸಚಿವ ಸ್ಥಾನ ನೀಡಲೇಬೇಕು ಅಂತ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಲಡಾಯಿ, 5 ಲಿಂಗಾಯತ ಶಾಸಕರಲ್ಲಿ ಯಾರಿಗೆ ಮಂತ್ರಿ ಭಾಗ್ಯ?

ಪಾಟೀಲರಿಗೆ ಸಚಿವ ಸ್ಥಾನ ಕೈತಪ್ಪಿದರೆ ಸಾಮೂಹಿಕ ರಾಜೀನಾಮೆ, ಪ್ರತಿಭಟನೆಯ ಜೊತೆಗೆ ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ಎಐಸಿಸಿ, ಕೆಪಿಸಿಸಿ ವರಿಷ್ಠರಿಗೆ ರೋಣಾ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ರೋಣ ಕ್ಷೇತ್ರಕ್ಕೆ ಅಷ್ಟೊಂದು ಅನ್ಯಾಯ ಆಗಿದೆ. ಈ ಬಾರಿ ಅನ್ಯಾಯ ಸಹಿಸಲ್ಲ ಎಂದು ಹೇಳಿದ್ದಾರೆ.

ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೈಮುಗಿದು ಕೇಳಿಕೊಂಡ ಮುಖಂಡರು, ನಮ್ಮ ನಾಯಕರಿಗೆ ಮಂತ್ರಿ ಸ್ಥಾನ ಕೊಟ್ಟರೆ ಸಾಕು, ನಮಗೆ ಯಾವುದೇ ಸ್ಥಾನಮಾನ ಬೇಡ. ಈ ಬಾರಿ ಯಾವುದೇ ಕಾರಣಕ್ಕೂ ರೋಣ ಕ್ಷೇತ್ರಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ