AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?

ಚೆನ್ನೈನಲ್ಲಿ ನಡೆದ ಕ್ಷೇತ್ರ ವಿಂಗಡಣೆ ಸಭೆಯಲ್ಲಿ ಡಿಕೆ ಶಿವಕುಮಾರ್​ ಭಾಗವಹಿಸಿದ್ದರು. ಮೇಕೆದಾಟು ಯೋಜನೆ ವಿರೋಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ I.N.D.I ಮೈತ್ರಿಕೂಟದ ನಾಯಕರು ಭಾಗಿಯಾಗಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತಿರಿಸಿದ್ದಾರೆ.

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?
ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?
ಗಂಗಾಧರ​ ಬ. ಸಾಬೋಜಿ
|

Updated on:Mar 22, 2025 | 3:33 PM

Share

ಬೆಂಗಳೂರು, ಮಾರ್ಚ್​ 22: ಚೆನ್ನೈನಲ್ಲಿ ಕ್ಷೇತ್ರ ವಿಂಗಡಣೆ ವಿಚಾರವಾಗಿ ನಡೆದ ಸಭೆಯಲ್ಲಿ ಕರ್ನಾಟಕದಿಂದ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇತ್ತ ಮೇಕೆದಾಟು ಯೋಜನೆ ವಿರೋಧಿಸಿ, ಕ್ಷೇತ್ರ ಮರುವಿಂಗಡಣೆ ಕುರಿತ ಸಭೆಗೆ ಬಂದಿರುವ ಡಿಕೆ ಶಿವಕುಮಾರ್​​ ವಿರುದ್ಧ ಕಪ್ಪು ಬಟ್ಟೆ ಧರಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆಯುತ್ತಿರುವ ಐಎನ್​ಡಿಐ (INDI) ಮೈತ್ರಿಕೂಟದ ನಾಯಕರನ್ನು ಯಾಕೆ ಸಭೆಗೆ ಕರೆದಿದ್ದೀರಿ ಎಂದು ಬಿಜೆಪಿ ಕಿಡಿಕಾರಿದ್ದು, ಇದಕ್ಕೆ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತರ ನೀಡಿದ್ದಾರೆ.

ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್ ಎಂದ ಡಿಕೆ ಶಿವಕುಮಾರ್

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​, ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್​. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅವರಿಗೆ ನನ್ನ ಶಕ್ತಿ ಬಗ್ಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರಿಗೆ ಶುಭವಾಗಲಿ ಎಂದು ಕಿಡಿಕಾರಿದ್ದಾರೆ.

ಇತ್ತ ಅಣ್ಣಾಮಲೈ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಡಿಕೆ ಶಿವಕುಮಾರ್​ಗೆ ತಿರುಗೇಟು ಕೊಟ್ಟಿದ್ದಾರೆ. ಹೌದು. ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಇದನ್ನು ನೆನಪಿಸಿಕೊಂಡಿದ್ದಕ್ಕೆ ನಿಮಗೆ ಧನ್ಯವಾದಗಳು ಡಿಕೆ ಶಿವಕುಮಾರ್​​ ಅವರೇ ಎಂದು ಹೇಳಿದ್ದಾರೆ.

ಅಲ್ಲದೆ, ಸಿಎಂ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಿಗೆ ಈ ಬಡವನಿಂದ ನಿಮಗೆ ಶುಭಾಶಯಗಳು ಎಂದು ಹಾಸ್ಯಮಯವಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:30 pm, Sat, 22 March 25

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ