AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?

ಚೆನ್ನೈನಲ್ಲಿ ನಡೆದ ಕ್ಷೇತ್ರ ವಿಂಗಡಣೆ ಸಭೆಯಲ್ಲಿ ಡಿಕೆ ಶಿವಕುಮಾರ್​ ಭಾಗವಹಿಸಿದ್ದರು. ಮೇಕೆದಾಟು ಯೋಜನೆ ವಿರೋಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ I.N.D.I ಮೈತ್ರಿಕೂಟದ ನಾಯಕರು ಭಾಗಿಯಾಗಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತಿರಿಸಿದ್ದಾರೆ.

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?
ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 22, 2025 | 3:33 PM

ಬೆಂಗಳೂರು, ಮಾರ್ಚ್​ 22: ಚೆನ್ನೈನಲ್ಲಿ ಕ್ಷೇತ್ರ ವಿಂಗಡಣೆ ವಿಚಾರವಾಗಿ ನಡೆದ ಸಭೆಯಲ್ಲಿ ಕರ್ನಾಟಕದಿಂದ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇತ್ತ ಮೇಕೆದಾಟು ಯೋಜನೆ ವಿರೋಧಿಸಿ, ಕ್ಷೇತ್ರ ಮರುವಿಂಗಡಣೆ ಕುರಿತ ಸಭೆಗೆ ಬಂದಿರುವ ಡಿಕೆ ಶಿವಕುಮಾರ್​​ ವಿರುದ್ಧ ಕಪ್ಪು ಬಟ್ಟೆ ಧರಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆಯುತ್ತಿರುವ ಐಎನ್​ಡಿಐ (INDI) ಮೈತ್ರಿಕೂಟದ ನಾಯಕರನ್ನು ಯಾಕೆ ಸಭೆಗೆ ಕರೆದಿದ್ದೀರಿ ಎಂದು ಬಿಜೆಪಿ ಕಿಡಿಕಾರಿದ್ದು, ಇದಕ್ಕೆ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತರ ನೀಡಿದ್ದಾರೆ.

ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್ ಎಂದ ಡಿಕೆ ಶಿವಕುಮಾರ್

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​, ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್​. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅವರಿಗೆ ನನ್ನ ಶಕ್ತಿ ಬಗ್ಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರಿಗೆ ಶುಭವಾಗಲಿ ಎಂದು ಕಿಡಿಕಾರಿದ್ದಾರೆ.

ಇತ್ತ ಅಣ್ಣಾಮಲೈ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಡಿಕೆ ಶಿವಕುಮಾರ್​ಗೆ ತಿರುಗೇಟು ಕೊಟ್ಟಿದ್ದಾರೆ. ಹೌದು. ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಇದನ್ನು ನೆನಪಿಸಿಕೊಂಡಿದ್ದಕ್ಕೆ ನಿಮಗೆ ಧನ್ಯವಾದಗಳು ಡಿಕೆ ಶಿವಕುಮಾರ್​​ ಅವರೇ ಎಂದು ಹೇಳಿದ್ದಾರೆ.

ಅಲ್ಲದೆ, ಸಿಎಂ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಿಗೆ ಈ ಬಡವನಿಂದ ನಿಮಗೆ ಶುಭಾಶಯಗಳು ಎಂದು ಹಾಸ್ಯಮಯವಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:30 pm, Sat, 22 March 25

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್