AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

BJP JDS alliance in Karnataka; ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿ ಸೀಟು ಹಂಚಿಕೆ ಘೋಷಣೆ ಮಾಡುವುದು ಒಳ್ಳೆಯದು. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆಯೂ ಅವರ ಜತೆ ಚರ್ಚಿಸಿದ ನಂತರ ಅಧಿಕೃತ ಘೋಷಣೆ ಮಾಡಿದರೆ ಉತ್ತಮ ಎಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟರು.

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ
ಅಮಿತ್ ಶಾ ನಿವಾಸದಲ್ಲಿ ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಇತರರು
ಹರೀಶ್ ಜಿ.ಆರ್​.
| Edited By: |

Updated on: Sep 22, 2023 | 6:35 PM

Share

ನವದೆಹಲಿ, ಸೆಪ್ಟೆಂಬರ್ 22: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಎದುರಿಸುವ ದೃಷ್ಟಿಯಿಂದ ಬಿಜೆಪಿ ಹಾಗೂ ಜೆಡಿಎಸ್ (BJP JDS Alliance) ಮೈತ್ರಿ ಮಾಡಿಕೊಳ್ಳುವ ಬಗ್ಗೆ ಒಪ್ಪಂದಕ್ಕೆ ಬಂದಿವೆ. ಈ ವಿಚಾರವಾಗಿ ಶುಕ್ರವಾರ ಸಂಜೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಿವಾಸದಲ್ಲಿ ನಡೆದ ಸಭೆಯಲ್ಲಿ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಇತರರು ಒಮ್ಮತಕ್ಕೆ ಬಂದಿದ್ದಾರೆ. ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಕುಮಾರಸ್ವಾಮಿ, ಅಮಿತ್ ಶಾ, ನಡ್ಡಾ, ನಿಖಿಲ್ ಕುಮಾರಸ್ವಾಮಿ ಕುಪೇಂದ್ರ ರೆಡ್ಡಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಭಾಗವಹಿಸಿದ್ದರು. ಸಭೆಯಲ್ಲಿ ಏನೇನು ಚರ್ಚೆಯಾಯಿತು ಎಂಬ ಮಾಹಿತಿ ಇಲ್ಲಿದೆ.

ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೀಟು ಹಂಚಿಕೆ ಮಾಡುವುದು ಒಳಿತು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿ ಸೀಟು ಹಂಚಿಕೆ ಘೋಷಣೆ ಮಾಡುವುದು ಒಳ್ಳೆಯದು. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆಯೂ ಅವರ ಜತೆ ಚರ್ಚಿಸಿದ ನಂತರ ಅಧಿಕೃತ ಘೋಷಣೆ ಮಾಡಿದರೆ ಉತ್ತಮ ಎಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: BJP JDS Alliance: ಬಿಜೆಪಿ ಜೆಡಿಎಸ್ ಮೈತ್ರಿ ಅಂತಿಮ; ಮಾತುಕತೆಯ ನಂತರ ಹೆಚ್​ಡಿಕೆ ಹೇಳಿದ್ದಿಷ್ಟು

ವಿಜಯದಶಮಿ ಹಬ್ಬದ ಬಳಿಕ ರಾಜ್ಯ ನಾಯಕರೊಂದಿಗೆ ಚರ್ಚಿಸೋಣ. ರಾಜ್ಯ ನಾಯಕರೊಂದಿಗೆ ನಾವು ಚರ್ಚೆ ನಡೆಸೋಣ. ಮೈತ್ರಿ, ಸೀಟು ಹಂಚಿಕೆ ಬಗ್ಗೆ ಅವರ ಅಭಿಪ್ರಾಯ ಸಂಗ್ರಹಿಸುವುದು ಒಳ್ಳೆಯದು. ಸೀಟು ಹಂಚಿಕೆ ಬಗ್ಗೆ ಹಿರಿಯ ನಾಯಕರ ಅಭಿಪ್ರಾಯ ಅಗತ್ಯವಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಮನಸ್ಥಿತಿಯನ್ನು ಹೊಂದಿಸಬೇಕಿದೆ. ಲೋಕಸಭಾ ಚುನಾವಣೆಗೆ ಮತದಾರರ ಮನಸ್ಥಿತಿ ಹೊಂದಿಸಬೇಕಿದೆ. ಇದಕ್ಕೆ ನಾಯಕರು ಒಂದಷ್ಟು ಜಂಟಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕೆಳ ಮಟ್ಟದಲ್ಲಿ ಹೊಂದಾಣಿಕೆ ಆಗದಿದ್ದರೆ ಪ್ರಯತ್ನ ವ್ಯರ್ಥವಾಗಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ವಿವರವಾಗಿ ಚರ್ಚಿಸೋಣ ಎಂದು ಎರಡೂ ಪಕ್ಷಗಳ ನಾಯಕರು ತೀರ್ಮಾನಕ್ಕೆ ಬಂದಿದ್ದಾರೆ.

ಈ ಮಧ್ಯೆ, ಆರು ಸ್ಥಾನಗಳಿಗೆ ಜೆಡಿಎಸ್​​ ಬೇಡಿಕೆ ಇಟ್ಟಿದೆ ಎಂದೂ ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ