AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

BJP JDS alliance in Karnataka; ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿ ಸೀಟು ಹಂಚಿಕೆ ಘೋಷಣೆ ಮಾಡುವುದು ಒಳ್ಳೆಯದು. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆಯೂ ಅವರ ಜತೆ ಚರ್ಚಿಸಿದ ನಂತರ ಅಧಿಕೃತ ಘೋಷಣೆ ಮಾಡಿದರೆ ಉತ್ತಮ ಎಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟರು.

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ
ಅಮಿತ್ ಶಾ ನಿವಾಸದಲ್ಲಿ ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಇತರರು
ಹರೀಶ್ ಜಿ.ಆರ್​.
| Edited By: |

Updated on: Sep 22, 2023 | 6:35 PM

Share

ನವದೆಹಲಿ, ಸೆಪ್ಟೆಂಬರ್ 22: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಎದುರಿಸುವ ದೃಷ್ಟಿಯಿಂದ ಬಿಜೆಪಿ ಹಾಗೂ ಜೆಡಿಎಸ್ (BJP JDS Alliance) ಮೈತ್ರಿ ಮಾಡಿಕೊಳ್ಳುವ ಬಗ್ಗೆ ಒಪ್ಪಂದಕ್ಕೆ ಬಂದಿವೆ. ಈ ವಿಚಾರವಾಗಿ ಶುಕ್ರವಾರ ಸಂಜೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಿವಾಸದಲ್ಲಿ ನಡೆದ ಸಭೆಯಲ್ಲಿ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಇತರರು ಒಮ್ಮತಕ್ಕೆ ಬಂದಿದ್ದಾರೆ. ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಕುಮಾರಸ್ವಾಮಿ, ಅಮಿತ್ ಶಾ, ನಡ್ಡಾ, ನಿಖಿಲ್ ಕುಮಾರಸ್ವಾಮಿ ಕುಪೇಂದ್ರ ರೆಡ್ಡಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಭಾಗವಹಿಸಿದ್ದರು. ಸಭೆಯಲ್ಲಿ ಏನೇನು ಚರ್ಚೆಯಾಯಿತು ಎಂಬ ಮಾಹಿತಿ ಇಲ್ಲಿದೆ.

ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೀಟು ಹಂಚಿಕೆ ಮಾಡುವುದು ಒಳಿತು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿ ಸೀಟು ಹಂಚಿಕೆ ಘೋಷಣೆ ಮಾಡುವುದು ಒಳ್ಳೆಯದು. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆಯೂ ಅವರ ಜತೆ ಚರ್ಚಿಸಿದ ನಂತರ ಅಧಿಕೃತ ಘೋಷಣೆ ಮಾಡಿದರೆ ಉತ್ತಮ ಎಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: BJP JDS Alliance: ಬಿಜೆಪಿ ಜೆಡಿಎಸ್ ಮೈತ್ರಿ ಅಂತಿಮ; ಮಾತುಕತೆಯ ನಂತರ ಹೆಚ್​ಡಿಕೆ ಹೇಳಿದ್ದಿಷ್ಟು

ವಿಜಯದಶಮಿ ಹಬ್ಬದ ಬಳಿಕ ರಾಜ್ಯ ನಾಯಕರೊಂದಿಗೆ ಚರ್ಚಿಸೋಣ. ರಾಜ್ಯ ನಾಯಕರೊಂದಿಗೆ ನಾವು ಚರ್ಚೆ ನಡೆಸೋಣ. ಮೈತ್ರಿ, ಸೀಟು ಹಂಚಿಕೆ ಬಗ್ಗೆ ಅವರ ಅಭಿಪ್ರಾಯ ಸಂಗ್ರಹಿಸುವುದು ಒಳ್ಳೆಯದು. ಸೀಟು ಹಂಚಿಕೆ ಬಗ್ಗೆ ಹಿರಿಯ ನಾಯಕರ ಅಭಿಪ್ರಾಯ ಅಗತ್ಯವಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಮನಸ್ಥಿತಿಯನ್ನು ಹೊಂದಿಸಬೇಕಿದೆ. ಲೋಕಸಭಾ ಚುನಾವಣೆಗೆ ಮತದಾರರ ಮನಸ್ಥಿತಿ ಹೊಂದಿಸಬೇಕಿದೆ. ಇದಕ್ಕೆ ನಾಯಕರು ಒಂದಷ್ಟು ಜಂಟಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕೆಳ ಮಟ್ಟದಲ್ಲಿ ಹೊಂದಾಣಿಕೆ ಆಗದಿದ್ದರೆ ಪ್ರಯತ್ನ ವ್ಯರ್ಥವಾಗಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ವಿವರವಾಗಿ ಚರ್ಚಿಸೋಣ ಎಂದು ಎರಡೂ ಪಕ್ಷಗಳ ನಾಯಕರು ತೀರ್ಮಾನಕ್ಕೆ ಬಂದಿದ್ದಾರೆ.

ಈ ಮಧ್ಯೆ, ಆರು ಸ್ಥಾನಗಳಿಗೆ ಜೆಡಿಎಸ್​​ ಬೇಡಿಕೆ ಇಟ್ಟಿದೆ ಎಂದೂ ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Harish GR
Harish GR
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್