AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP JDS Alliance: ಬಿಜೆಪಿ ಜೆಡಿಎಸ್ ಮೈತ್ರಿ ಅಂತಿಮ; ಮಾತುಕತೆಯ ನಂತರ ಹೆಚ್​ಡಿಕೆ ಹೇಳಿದ್ದಿಷ್ಟು

BJP JDS Alliance in Karnataka; ಬಿಜೆಪಿ, ಜೆಡಿಎಸ್ ಮೈತ್ರಿ ಸಂಬಂಧ ಅಂತಿಮ ಮಾತುಕತೆ ವೇಳೆ ಹೆಚ್​ಡಿ ಕುಮಾರಸ್ವಾಮಿ 6 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. 6 ಕ್ಷೇತ್ರಗಳಲ್ಲಿ ಪಕ್ಷಗಳ ಬಲಾಬಲ, ಮತ ವಿವರ ಕಲೆ ಹಾಕಿ, ಬಿಜೆಪಿಗಿಂತ ಹೆಚ್ಚು ಮತಗಳು ಇರುವ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

BJP JDS Alliance: ಬಿಜೆಪಿ ಜೆಡಿಎಸ್ ಮೈತ್ರಿ ಅಂತಿಮ; ಮಾತುಕತೆಯ ನಂತರ ಹೆಚ್​ಡಿಕೆ ಹೇಳಿದ್ದಿಷ್ಟು
ಅಮಿತ್ ಶಾ ನಿವಾಸದಲ್ಲಿ ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಇತರರುImage Credit source: ANI
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma|

Updated on:Sep 22, 2023 | 4:45 PM

Share

ನವದೆಹಲಿ, ಸೆಪ್ಟೆಂಬರ್ 22: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ (JDS) ನಾಯಕ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆಯಿತು. ದೆಹಲಿಯ ಕೃಷ್ಣ ಮೆನನ್​ ಮಾರ್ಗ್​ನಲ್ಲಿರುವ ಅಮಿತ್ ಶಾ (Amit Shah) ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ ಸಿಎಂ ಪ್ರಮೋದ್ ಸಾವಂತ್, ಕುಪೇಂದ್ರ ರೆಡ್ಡಿ, ನಿಖಿಲ್ ಕುಮಾರಸ್ವಾಮಿ ಸಹ ಹಾಜರಿದ್ದರು. ಮಾತುಕತೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಅಧಿಕೃತವಾಗಿ ಕೆಲವು ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

ಗೊಂದಲವಿಲ್ಲದೆ ಮೈತ್ರಿ; ಕುಮಾರಸ್ವಾಮಿ

ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿಯಾಗಲಿದೆ ಎಂದು ಅವರು ಹೇಳಿದರು.

ಮೈತ್ರಿ ವಿಚಾರವಷ್ಟೇ ಅಲ್ಲದೆ ಕರ್ನಾಟಕಕ್ಕೆ ಸಂಬಂಧಿಸಿದ ಇತರ ಅನೇಕ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಜತೆ ಚರ್ಚಿಸಿದ್ದೇವೆ. ಕಾವೇರಿ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರಿದೆ. ರಾಜ್ಯದ ರೈತರಿಗೆ ಮಾರಕವಾಗುವ ರೀತಿ ಸರ್ಕಾರದ ನಡವಳಿಕೆ ಇದೆ. ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ಮಾಡುವ ಕನಿಷ್ಠ ತಿಳವಳಿಕೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಅಮಿತ್ ಶಾ ನಿವಾಸದಲ್ಲಿ ಕುಮಾರಸ್ವಾಮಿ

ವಿಜಯದಶಮಿ ಬಳಿಕ ಸೀಟು ಹಂಚಿಕೆ

ಸೀಟು ಹಂಚಿಕೆ ಬಗ್ಗೆ ವಿಜಯದಶಮಿ ಬಳಿಕ ಚರ್ಚೆ ನಡೆಸಲಾಗುವುದು. ಸೀಟು ಹಂಚಿಕೆ ಮುಂಚೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜೆಡಿಎಸ್ ತಿಳಿಸಿದೆ.

ಜೆಪಿ ನಡ್ಡಾ ಹರ್ಷ

ಎನ್​​​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿರುವುದಕ್ಕೆ ಜೆಪಿ ನಡ್ಡಾ ಹರ್ಷ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಸೇರ್ಪಡೆಯಿಂದ ಎನ್​​ಡಿಎ ಮತ್ತಷ್ಟು ಸುಭದ್ರವಾಗಿದೆ. ಪ್ರಧಾನಿ ಮೋದಿ ದೃಷ್ಟಿಕೋನ ಕೂಡ ಬಲಗೊಳ್ಳಲು ಸಹಕಾರಿ ಎಂದು ನಡ್ಡಾ ಹೇಳಿದ್ದಾರೆ.

ಎನ್​​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್​​ಗೆ ಸ್ವಾಗತ ಎಂದ ಪ್ರಮೋದ್ ಸಾವಂತ್

ಎನ್​ಡಿಎ ಒಕ್ಕೂಟಕ್ಕೆ ಜೆಡಿಎಸ್​ ಸೇರ್ಡಡೆಯಾಗಿದ್ದಕ್ಕೆ ಸ್ವಾಗತಿಸುತ್ತೇನೆ ಎಂದು ದೆಹಲಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನನ್ನ ಒಳ್ಳೆಯ ಸ್ನೇಹಿತರು. ಲೋಕಸಭೆಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸೀಟ್ ಬಿಜೆಪಿ ಸಿಗಲಿದೆ ಎಂದು ಅವರು ಹೇಳಿದರು.

ಆರು ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ; ಇಲ್ಲಿದೆ ಬಲಾಬಲ

ಬಿಜೆಪಿ, ಜೆಡಿಎಸ್ ಮೈತ್ರಿ ಸಂಬಂಧ ಅಂತಿಮ ಮಾತುಕತೆ ವೇಳೆ ಹೆಚ್​ಡಿ ಕುಮಾರಸ್ವಾಮಿ 6 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. 6 ಕ್ಷೇತ್ರಗಳಲ್ಲಿ ಪಕ್ಷಗಳ ಬಲಾಬಲ, ಮತ ವಿವರ ಕಲೆ ಹಾಕಿ, ಬಿಜೆಪಿಗಿಂತ ಹೆಚ್ಚು ಮತಗಳು ಇರುವ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅವುಗಳೆಂದರೆ ತುಮಕೂರು, ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಾಗಿವೆ. ವಿಧಾನಸಭಾ ಚುನಾವಣೆಯ ಮತ ಗಳಿಕೆಯ ಪಟ್ಟಿ ಹಿಡಿದುಕೊಂಡೇ ಕುಮಾರಸ್ವಾಮಿ ಅವರು ಗೃಹ ಸಚಿವ ಅಮಿತ್ ಶಾ ಅವರ ಬಳಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ: ಹೆಚ್​​ಡಿ ದೇವೇಗೌಡ

ಆರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಗಳ ಮತ ಗಳಿಕೆ ವಿವರ ಇಲ್ಲಿದೆ;

ತುಮಕೂರು

ಬಿಜೆಪಿ – 4.13 ಲಕ್ಷ ಮತಗಳು ಜೆಡಿಎಸ್ – 4.69 ಲಕ್ಷ ಮತಗಳು ಕಾಂಗ್ರೆಸ್ – 4.35 ಲಕ್ಷ ಮತಗಳು

ಮಂಡ್ಯ

ಕಾಂಗ್ರೆಸ್ – 6.72 ಲಕ್ಷ ಮತಗಳು ಬಿಜೆಪಿ – 1.81 ಲಕ್ಷ ಮತಗಳು ಜೆಡಿಎಸ್ – 5.69 ಲಕ್ಷ ಮತಗಳು

ಹಾಸನ

ಜೆಡಿಎಸ್ – 5.34 ಲಕ್ಷ ಕಾಂಗ್ರೆಸ್ – 4.76 ಲಕ್ಷ ಬಿಜೆಪಿ – 2.99 ಲಕ್ಷ

ಕೋಲಾರ

ಕಾಂಗ್ರೆಸ್ – 5.80 ಲಕ್ಷ ಬಿಜೆಪಿ – 1.94 ಲಕ್ಷ ಜೆಡಿಎಸ್ – 4.71 ಲಕ್ಷ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ

ಕಾಂಗ್ರೆಸ್ – 8.12 ಲಕ್ಷ ಮತಗಳು ಬಿಜೆಪಿ – 6.09ಲಕ್ಷ ಜೆಡಿಎಸ್ – 3.62 ಲಕ್ಷ

ಚಿಕ್ಕಬಳ್ಳಾಪುರ

ಕಾಂಗ್ರೆಸ್ – 6.10 ಲಕ್ಷ ಬಿಜೆಪಿ – 5.40 ಲಕ್ಷ ಜೆಡಿಎಸ್ – 2.35 ಲಕ್ಷ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Fri, 22 September 23

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ