AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹15 ಲಕ್ಷ ನೀಡುವ ಭರವಸೆ, ರೈತರ ಆದಾಯ ದುಪ್ಪಟ್ಟು ಮಾಡುವ ವಾಗ್ದಾನ ಏನಾಯಿತು: ಮೋದಿ ವಿರುದ್ಧ ಪವನ್ ಖೇರಾ ವಾಗ್ದಾಳಿ

ಪ್ರಧಾನಿ ಭಾಷಣದಲ್ಲಿ ಹೇಳಿದ ಭಾಯಿ- ಬತೀಜಾವಾದ್ (ಸ್ವಜನ ಪಕ್ಷಪಾತ)ದ ಬಗ್ಗೆ ಟೀಕಿಸಿದ ಖೇರಾ, ಇದು ಬಿಜೆಪಿಯ ಆಂತರಿಕ ಸಮಸ್ಯೆ ಎಂದು ನನಗನಿಸುತ್ತಿದೆ.

₹15 ಲಕ್ಷ ನೀಡುವ ಭರವಸೆ, ರೈತರ ಆದಾಯ ದುಪ್ಪಟ್ಟು ಮಾಡುವ ವಾಗ್ದಾನ ಏನಾಯಿತು: ಮೋದಿ ವಿರುದ್ಧ ಪವನ್ ಖೇರಾ ವಾಗ್ದಾಳಿ
ಕಾಂಗ್ರೆಸ್ ನಾಯ ಕ ಪವನ್ ಖೇರಾ
TV9 Web
| Edited By: |

Updated on: Aug 15, 2022 | 2:24 PM

Share

ದೆಹಲಿ: 75ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ ಕೆಲವು ಮಾತುಗಳನ್ನು ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಖಂಡಿಸಿದ್ದಾರೆ. ಸ್ವಾತಂತ್ರ್ಯ ದಿನದ ಭಾಷಣವೆಂದರೆ ಅಲ್ಲಿ ರಾಜಕೀಯ ವಿಷಯಗಳನ್ನು ಹೇಳುವುದಲ್ಲ. ಈ ರೀತಿ ಮಾತನಾಡುವ ಸಂಪ್ರದಾಯವನ್ನು ಮೋದಿ ಮಾಡಿಕೊಂಡು ಬಂದಿದ್ದಾರೆ. ಸ್ವಾತಂತ್ರ್ಯ ದಿನದಂದು ಮಾಡಿದ ಯಾವುದೇ ಭರವಸೆಯನ್ನು ಮೋದಿ ಈಡೇರಿಸಿಲ್ಲ ಎಂದಿದ್ದಾರೆ ಖೇರಾ. ₹15 ಲಕ್ಷ ನೀಡುವ ಭರವಸೆ ಏನಾಯ್ತು? ರೈತರ ಆದಾಯ ದುಪ್ಪಟ್ಟು ಮಾಡುವ, ಎಲ್ಲರಿಗೂ ಮನೆ ಭರವಸೆಗಳು ಎಲ್ಲಿ ಹೋದವು ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ. ಪ್ರಧಾನಿ ಭಾಷಣದಲ್ಲಿ ಹೇಳಿದ ಭಾಯಿ- ಬತೀಜಾವಾದ್ (ಸ್ವಜನ ಪಕ್ಷಪಾತ)ದ ಬಗ್ಗೆ ಟೀಕಿಸಿದ ಖೇರಾ, ಇದು ಬಿಜೆಪಿಯ ಆಂತರಿಕ ಸಮಸ್ಯೆ ಎಂದು ನನಗನಿಸುತ್ತಿದೆ. ಬಿಜೆಪಿಯಲ್ಲಿ ಸ್ವಜನ ಪಕ್ಷಪಾತವಿದೆ. ಅವರು ತಮ್ಮದೇ ಪಕ್ಷದ ಸಚಿವರು ಮತ್ತು ಅವರ ಮಕ್ಕಳ ಬಗ್ಗೆ ಹೇಳಿದ್ದೇ ಎಂಬುದನ್ನು ಮೋದಿಯೇ ಸ್ಪಷ್ಟ ಪಡಿಸಬೇಕು. ಅವರು ಯಾರ ಮೇಲೆ ದಾಳಿ ಮಾಡಿದ್ದು ಎಂದು ತಿಳಿದಿಲ್ಲ. ಆದರೆ 8 ವರ್ಷದಲ್ಲಿ ಅವರು ಮಾಡಿದ ಕೆಲಸದ ರಿಪೋರ್ಟ್ ಕಾರ್ಡ್ ನೀಡಲಿ ಎಂದು ದೇಶ ನಿರೀಕ್ಷಿಸುತ್ತಿದೆ ಎಂದಿದ್ದಾರೆ ಖೇರಾ.

ಸ್ವಾತಂತ್ರ್ಯ ದಿನ ಎಂಬುದು ಐತಿಹಾಸಿಕ ದಿನ. ಇವತ್ತು 75ನೇ ವರ್ಷದ ಆಚರಣೆ ನಡೆಯುತ್ತಿರುವುದರಿಂದ ಇದು ಹೆಚ್ಚು ಮಹತ್ವ ಪಡೆದಿದೆ. ಹಿಂದಿನಿಂದಲೂ ಕೆಂಪುಕೋಟೆಯಲ್ಲಿ ಅದ್ಭುತ ಭಾಷಣಗಳನ್ನು ಮಾಡಲಾಗಿದೆ. ಜಗತ್ತು ಕೆಂಪುಕೋಟೆಯತ್ತ ಕಣ್ಣಿಟ್ಟಿರುವಾಗ ಅಲ್ಲಿ ಪ್ರಬುದ್ಧ ಭಾಷಣವನ್ನು ನಿರೀಕ್ಷಿಸಿದ್ದೆವು ಎಂದು ಪವನ್ ಖೇರಾ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ನರೇಂದ್ರ ಮೋದಿ ಸರ್ಕಾರ ಕಡೆಗಣಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಟೀಕಾ ಪ್ರಹಾರ ಮಾಡಿದ ಬೆನ್ನಲ್ಲೇ ಖೇರಾ ಮೋದಿ ವಿರುದ್ಧ ಟೀಕೆ ಮಾಡಿದ್ದಾರೆ. ಗಾಂಧಿ- ನೆಹರು-ಪಟೇಲ್- ಆಜಾದ್ ಜೀ ಮೊದಲಾದ ರಾಷ್ಟ್ರ ನಾಯಕರನ್ನು ಅವಮಾನಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ ಸೋನಿಯಾ ಗಾಂಧಿ.

ಇದನ್ನೂ ಓದಿ
Image
ಸ್ವಾತಂತ್ರ್ಯೋತ್ಸವ ನಡಿಗೆ ಕಾರ್ಯಕ್ರಮದಲ್ಲಿ ಭಾಗಿಯಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಉಪಹಾರ, ಫಲಾಹಾರ ಮತ್ತು ನೀರು
Image
Sonia Gandhi: ಗಾಂಧಿ, ನೆಹರೂ ಅವರನ್ನು ನಿಂದಿಸುವ ಪ್ರಯತ್ನವಾಗುತ್ತಿದೆ; ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ
Image
ಭ್ರಷ್ಟಾಚಾರ, ಸ್ವಜನಪಕ್ಷಪಾತ ಭಾರತವನ್ನು ಗೆದ್ದಲಿನ ಹಾಗೆ ತಿನ್ನುತ್ತಿದೆ; ಪ್ರಧಾನಿ ಮೋದಿ ಅಸಮಾಧಾನ
Image
ನೆಹರೂ, ಲಾಲ್​ ಬಹದ್ದೂರ್ ಶಾಸ್ತ್ರಿ, ವೀರ ಸಾವರ್ಕರ್, ರಾಣಿ ಚೆನ್ನಮ್ಮನನ್ನು ಮರೆಯುವಂತಿಲ್ಲ; ಪ್ರಧಾನಿ ಮೋದಿ

ಭಾರತವು ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಈ ಎರಡು ಪಿಡುಗು ವಿರುದ್ಧ ಹೋರಾಡಬೇಕಾಗಿದೆ. ನಾನು ಸ್ವಜನ ಪಕ್ಷಪಾತದ ಬಗ್ಗೆ ಮಾತನಾಡುವಾಗಲೆಲ್ಲ ಜನರು ನಾನು ರಾಜಕೀಯ ಬಗ್ಗೆ ಮಾತನಾಡುತ್ತೇನೆ ಎಂದು ಅಂದುಕೊಳ್ಳುತ್ತಾರೆ. ದುರದೃಷ್ಟವಶಾತ್, ಹಲವಾರು ಸಂಸ್ಥೆಗಳಲ್ಲಿಯೂ ಸ್ವಜನ ಪಕ್ಷಪಾತ ಇದೆ ಎಂದಿದ್ದಾರೆ ಮೋದಿ. ಕ್ರೀಡಾ ವಲಯದ ಉದಾಹರಣೆ ನೀಡಿದ ಮೋದಿ, ಭಾರತದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಪ್ರತಿಭೆಯನ್ನು ಮಾತ್ರ ನೋಡಿ ಅವರನ್ನು ಆಯ್ಕೆ ಮಾಡಿರುವುದರಿಂದ ಅವರು ಯಶಸ್ವಿಯಾಗಿದ್ದಾರೆಯೇ ಹೊರತು ಸ್ವಜನ ಪಕ್ಷಪಾತದಿಂದ ಅಲ್ಲ ಎಂದಿದ್ದಾರೆ ಮೋದಿ.

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಆಗಾಗ ಜಗಳ ನಡೆಯುತ್ತಲೇ ಇದೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಇತಿಹಾಸ ನಾಶ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಿಜೆಪಿ ಭಾನುವಾರ ಟ್ವೀಟ್ ಮಾಡಿದ ವಿಡಿಯೊದಲ್ಲಿ ನೆಹರು ಅವರು ದೇಶದ ವಿಭಜನೆಗೆ ಕಾರಣ ಎಂದು ದೂಷಿಸಿದೆ. ಆದರೆ ಸಾವರ್ಕರ್ ಎರಡು ದೇಶದ ಕಲ್ಪನೆಯನ್ನು ಮುಂದಿಟ್ಟಿದ್ದರು ಎಂದು ಕಾಂಗ್ರೆಸ್ ಹೇಳಿದೆ. ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರದಲ್ಲಿ ನೆಹರು ಅವರ ಚಿತ್ರವನ್ನು ಕೈ ಬಿಟ್ಟಿದ್ದಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು