Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಗೆಲ್ಲಲು ಎಐಸಿಸಿ ಸೂತ್ರವೇನು? ಕಾಂಗ್ರೆಸ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಬೇಕು ಎಂದು ರಾಜ್ಯ ಕಾಂಗ್ರೆಸ್​ನ ಹಿರಿಯ ನಾಯಕರಿಗೆ ಎಐಸಿಸಿ ನಾಯಕರು ಸೂಚನೆ ನೀಡಿದ್ದಾರೆ.

Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on:Aug 02, 2023 | 7:08 PM

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ (Lok Sabha Election 2024) ಸಿದ್ಧತೆ ದೃಷ್ಟಿಯಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (AICC) ಕರ್ನಾಟಕ ಕಾಂಗ್ರೆಸ್ ನಾಯಕರ ಜತೆ ದೆಹಲಿಯಲ್ಲಿ ಮೊದಲ ಹಂತದ ಸಭೆಯನ್ನು ಬುಧವಾರ ನಡೆಸಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಂಸದ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ. ಇದೇ ವೇಳೆ, 2024ರ ಲೋಕಸಭೆ ಚುನಾವಣೆ ಗೆಲ್ಲುವುದಕ್ಕಾಗಿ ಸೂತ್ರವೊಂದನ್ನು ಎಐಸಿಸಿ ಪಕ್ಷದ ನಾಯಕರ ಮುಂದಿಟ್ಟಿದೆ.

5 ಉಚಿತ ಗ್ಯಾರಂಟಿಗಳು ಸರಿಯಾಗಿ ಜಾರಿಯಾಗಬೇಕು. ಅದಕ್ಕಾಗಿ ಫಲಾನುಭವಿಗಳ ಸಭೆ ನಡೆಸಬೇಕು. ಫಲಾನುಭವಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಸಂಪರ್ಕ ಮಾಡಬೇಕು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ತಡವಾಗಬಾರದು. ಸೂಕ್ತವಾದ ಅಭ್ಯರ್ಥಿಗಳನ್ನು ಗುರುತಿಸಿ ಆದಷ್ಟು ಬೇಗ ಅಖಾಡಕ್ಕೆ ಬಿಡಬೇಕು. ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವ ಕಾರ್ಯಕ್ರಮ ರೂಪಿಸಬೇಕು. ಬಿಜೆಪಿಯ ಹಿಂದೂ ಮುಸ್ಲಿಂ ವಿಭಜನೆ ತಂತ್ರಕ್ಕೆ ಪ್ರತಿತಂತ್ರ ರೂಪಿಸಬೇಕು. ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಬೇಕು ಎಂದು ರಾಜ್ಯ ಕಾಂಗ್ರೆಸ್​ನ ಹಿರಿಯ ನಾಯಕರಿಗೆ ಎಐಸಿಸಿ ನಾಯಕರು ಸೂಚನೆ ನೀಡಿದ್ದಾರೆ.

ಕರ್ನಾಟಕದ ನಾಯಕರಿಗೆ ರಾಹುಲ್ ಗಾಂಧಿ ಕೊಟ್ಟ ಸೂಚನೆಗಳೇನು?

ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಕಚೇರಿ ಇರಬೇಕು ಎಂದು ಕಾಂಗ್ರೆಸ್​ ನಾಯಕರ ಸಭೆಯಲ್ಲಿ ರಾಹುಲ್​ ಗಾಂಧಿ ಸೂಚನೆ ನೀಡಿದರು. ಪಕ್ಷದ ಕಾರ್ಯಕರ್ತರ ಜತೆ ಎಲ್ಲಾ ಸಚಿವರು ಸಂಪರ್ಕದಲ್ಲಿರಬೇಕು. ಯಾವ ಸಚಿವರ ವಿರುದ್ಧವೂ ದೂರು ಬರದಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಗ್ಯಾರಂಟಿಗಳನ್ನು ಕೊಟ್ಟಿದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಬೇಕು. ಕಾಂಗ್ರೆಸ್​​ ಪಕ್ಷವನ್ನೇ ಮುನ್ನೆಲೆಯಲ್ಲಿಟ್ಟುಕೊಂಡು ಪ್ರಚಾರ ಮಾಡಬೇಕು ಎಂದು ರಾಹುಲ್ ಗಾಂಧಿ ಸೂಚನೆ ನೀಡಿದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದಿಷ್ಟು

ಜನರ ಪರವಾಗಿದ್ದರೆ ಜನ ನಮ್ಮ ಪರವಾಗಿರುತ್ತಾರೆ ಎನ್ನುವುದಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶವೇ ಉದಾಹರಣೆ. ಈ ನಿಟ್ಟಿನಲ್ಲಿ ಕಾರ್ಯ ಮುಂದುವರಿಸಿ. ಗ್ಯಾರಂಟಿಗಳನ್ನು ಜನರಿಗೆ ತಲುಪಿಸಿ. ಜನರು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಹಣಕಾಸು ಇಕ್ಕಟ್ಟು ಎಂದು ಟೀಕೆ ಮಾಡುತ್ತಾರೆ. ಆರ್ಥಿಕ ದಿವಾಳಿ ಬಗ್ಗೆ ಪ್ರತಿ ಪಕ್ಷಗಳು ವಾದಿಸುತ್ತವೆ. ಸರಿಯಾಗಿ ಸಂಪನ್ಮೂಲ ಹೊಂದಿಸಿದರೆ ಯಾವುದೇ ಸಮಸ್ಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಹೇಳಿದ್ದೇನು?

ರಾಜ್ಯ ಬಿಜೆಪಿ ನಾಯಕತ್ವ ಇಲ್ಲದ ಪಕ್ಷವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ನಾವು ಪಕ್ಷ ಕಟ್ಟಬೇಕು. ಬಿಜೆಪಿ ಪಕ್ಷವು ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾತ್ರ ನಂಬಿಕೊಂಡಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಪ್ರತಿಕ್ರಿಯೆ ಚೆನ್ನಾಗಿದೆ. ಹೀಗಾಗಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಲಕ್ಷ್ಮಣ ಸವದಿ ಮತ್ತು ಶೆಟ್ಟರ್ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ, ಜೆಡಿಎಸ್ ಮೈತ್ರಿಯಾದರೆ ರಣತಂತ್ರ ಬದಲಿಸಬೇಕು

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯಾದರೆ ರಣತಂತ್ರ ಬದಲಿಸಬೇಕು ಎಂದು ಸಭೆಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರಿಗೆ ವರಿಷ್ಠರು ಸೂಚನೆ ನೀಡಿದರು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಒಲವು ತೋರುತ್ತಿದೆ. ಎರಡೂ ಪಕ್ಷಗಳು ಒಂದಾಗಿ ಸ್ಪರ್ಧೆ ಮಾಡುವ ಸೂಚನೆ ತೋರಿವೆ. ಹೀಗಾಗಿ ಪ್ಲ್ಯಾನ್​​ ಎ & ಬಿ ಸಿದ್ಧವಾಗಿರಬೇಕೆಂದು ನಾಯಕರು ಸಲಹೆ ನೀಡಿದರು. ಚುನಾವಣೆ ಅಸ್ತ್ರವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ರೂಪಿಸಬೇಕು. ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣವೆಂದು ಹೋರಾಟ ರೂಪಿಸಿ. ಗ್ಯಾಸ್​ ಸಬ್ಸಿಡಿ, ಪೆಟ್ರೋಲ್, ಡೀಸೆಲ್ ದರ ಇಳಿಕೆಗೆ ಆಗ್ರಹಿಸಿ ಹೋರಾಟ ನಡೆಸಿ ಎಂದು ರಾಜ್ಯ ನಾಯಕರಿಗೆ ಹೈಕಮಾಂಡ್ ನಾಯಕರು ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Wed, 2 August 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್