AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಮ ಒಬ್ಬರದ್ದು, ಅನುಭವಿಸುವವರು ಮತ್ತೊಬ್ಬರು; ಚರ್ಚೆಗೆ ಗ್ರಾಸವಾಯ್ತು ಡಿಕೆ ಶಿವಕುಮಾರ್ ‘ಮಾರ್ಮಿಕ’ ಹೇಳಿಕೆ

ಶ್ರಮಪಡುವುದು ಒಬ್ಬರು, ಅದನ್ನು ಅನುಭವಿಸುವುದು ಮತ್ತೊಬ್ಬರು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ನೀಡಿದ್ದ ಹೇಳಿಕೆಯೂ ಚರ್ಚೆಗೆ ಗ್ರಾಸವಾಗಿದೆ.

ಶ್ರಮ ಒಬ್ಬರದ್ದು, ಅನುಭವಿಸುವವರು ಮತ್ತೊಬ್ಬರು; ಚರ್ಚೆಗೆ ಗ್ರಾಸವಾಯ್ತು ಡಿಕೆ ಶಿವಕುಮಾರ್ ‘ಮಾರ್ಮಿಕ’ ಹೇಳಿಕೆ
ಡಿಕೆ ಶಿವಕುಮಾರ್
TV9 Web
| Updated By: Ganapathi Sharma|

Updated on:Jun 29, 2023 | 6:22 PM

Share

ಬೆಂಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಉಕ್ಕಿನ ಸೇತುವೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ನೀಡಿದ್ದ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಶ್ರಮಪಡುವುದು ಒಬ್ಬರು, ಅದನ್ನು ಅನುಭವಿಸುವುದು ಮತ್ತೊಬ್ಬರು ಎಂದು ಅವರು ಮಾರ್ಮಿಕವಾಗಿ ನೀಡಿದ್ದ ಹೇಳಿಕೆಯೂ ಚರ್ಚೆಗೆ ಗ್ರಾಸವಾಗಿದೆ. ಡಿಕೆ ಶಿವಕುಮಾರ್ ಅವರ ಹೇಳಿಕೆ ಕುರಿತ ಪತ್ರಿಕಾ ವರದಿಯ ತುಣುಕನ್ನು ಸಾಮಾಜಿಕ ಮಾಧ್ಯಮ ಫೇಸ್​​ಬುಕ್​ನಲ್ಲಿ ಹಂಚಿಕೊಂಡಿರುವ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್, ಈ ‘ಮಾರ್ಮಿಕ’ ಮಾತು ಓದಿದ ನಂತರ ಹಂಚಿಕೊಳ್ಳಬೇಕೆಂದು ಅನಿಸಿತು ಎಂದು ಬರೆದುಕೊಂಡಿದ್ದಾರೆ.

ಡಿಕೆ ಶಿವಕುಮಾರ್ ಮಾತಿನ ಹಿನ್ನೆಲೆ ಏನು? ಯಾರನ್ನು ಉದ್ದೇಶಿಸಿ ಅವರು ಈ ಹೇಳಿಕೆ ನೀಡಿರಬಹುದು ಎಂಬ ಚರ್ಚೆ ಆರಂಭವಾಗಿದೆ. ಶ್ರಮಕ್ಕೆ ಸಿಗಬೇಕಾದ ಸಿಎಂ ಸ್ಥಾನ ಸಿಗಲಿಲ್ಲ ಎಂಬ ಬೇಸರ ಡಿಕೆ ಶಿವಕುಮಾರ್ ಅವರ ಮಾತಿನಲ್ಲಿ ಎದ್ದುಕಾಣಿಸುತ್ತಿದೆ. ಅದೇ ಹಿನ್ನೆಲೆಯಲ್ಲಿ ಅವರು ಆ ಹೇಳಿಕೆ ನೀಡಿರಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?

ಏನು ಹೇಳಿದ್ದರು ಡಿಕೆ ಶಿವಕುಮಾರ್?

ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ವೇಳೆ ಮಾತನಾಡಿದ್ದ ಡಿಕೆ ಶಿವಕುಮಾರ್, ಶ್ರಮ ಒಬ್ಬರದ್ದಾದರೆ, ಅನುಭವಿಸುವವರು ಮತ್ತೊಬ್ಬರು. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಏನೂ ಮಾಡಲಾಗದು. ವಿಧಾನಸೌಧಕ್ಕಾಗಿ ಕೆಂಗಲ್ ಹನುಮಂತಯ್ಯ ಶ್ರಮ ವಹಿಸಿದ್ದರು. ಕೈದಿಗಳು ಕಾಲಿಗೆ ಸರಪಳಿ ಹಾಕಿಕೊಂಡೇ ಕಲ್ಲು ಹೊತ್ತು ಸಾಗಿಸಿದ್ದರು. ಆದರೆ, ವಿಧಾನಸೌಧದಲ್ಲಿ ಬೇರೆಯವರು ಸವಲತ್ತು ಅನುಭವಿಸುತ್ತಿದ್ದಾರೆ, ಜೀವನವೇ ಹಾಗೆ ಎಂದು ಹೇಳಿದ್ದರು.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸುವ ಮುನ್ನ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಲವು ದಿನಗಳ ಕಾಲ ದೆಹಲಿಯಲ್ಲಿ ಠಿಕಾಣಿ ಹೂಡಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಮ್ಮ ಕಠಿಣ ಪರಿಶ್ರಮದಿಂದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಸಾಧ್ಯವಾಯಿತು ಎಂದು ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಮುಂದೆ ವಾದಿಸಿದ್ದರು. ಹಲವು ಸುತ್ತಿನ ಚರ್ಚೆಯ ಬಳಿಕ ಹೈಕಮಾಂಡ್ ಶಿವಕುಮಾರ್ ಅವರನ್ನು ಸಮಾಧಾನಪಡಿಸಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:42 pm, Thu, 29 June 23

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ