AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲೂ ಸೃಷ್ಟಿಯಾಗ್ತಾರಾ ಅಜಿತ್​ ಪವಾರ್? ಹೆಚ್​ ಡಿ ಕುಮಾರಸ್ವಾಮಿ ಮಾತಿನ ಮರ್ಮವೇನು?

ಮಹಾರಾಷ್ಟ್ರ ರಾಜಕೀಯದಲ್ಲಾದ ದಿಢೀರ್​ ಬೆಳವಣಿಗೆಯಿಂದ ಎನ್​​ಸಿಪಿ ನಾಯಕ ಅಜಿತ್​ ಪವಾರ್​ ಮುಖ್ಯಮಂತ್ರಿ ಏಕನಾಥ್​​ ಶಿಂಧೆ ನೇತೃತ್ವದ ಸರ್ಕಾರದ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರು. ಈ ರೀತಿ ರಾಜ್ಯದಲ್ಲೂ ಮತ್ತೊಬ್ಬ ಅಜಿತ್​ ಪವಾರ್​ ಹುಟ್ಟುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲೂ ಸೃಷ್ಟಿಯಾಗ್ತಾರಾ ಅಜಿತ್​ ಪವಾರ್? ಹೆಚ್​ ಡಿ ಕುಮಾರಸ್ವಾಮಿ ಮಾತಿನ ಮರ್ಮವೇನು?
ಹೆಚ್​.ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 03, 2023 | 2:51 PM

Share

ಬೆಂಗಳೂರು: ಮಹಾರಾಷ್ಟ್ರ (Maharashtra) ರಾಜಕೀಯದಲ್ಲಾದ ದಿಢೀರ್​ ಬೆಳವಣಿಗೆಯಿಂದ ಎನ್​​ಸಿಪಿ (NCP) ನಾಯಕ ಅಜಿತ್​ ಪವಾರ್ (Ajit Pawar) ಮುಖ್ಯಮಂತ್ರಿ ಏಕನಾಥ್​​ ಶಿಂಧೆ (Eknath Shinde) ನೇತೃತ್ವದ ಸರ್ಕಾರದ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿ ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆಯಾಗಿದೆ. ನಿನ್ನೆ (ಜು.02) ಅಜಿತ್ ಪವಾರ್​ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ. ಇಲ್ಲಿ ಯಾವ ಅಜಿತ್ ಪವಾರ್ ಹುಟ್ಟು ಹಾಕ್ತಾರೋ ಗೊತ್ತಿಲ್ಲ. ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಣ ತರುವಂತೆ ಬೇಡಿಕೆ ಇಡುತ್ತಾರೆ. ಶಾಸಕರ ಶಿಫಾರಸು ತಂದ್ರೆ ಸಾಲದು 30 ಲಕ್ಷ ದುಡ್ಡು ತನ್ನಿ ಅಂತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಕೊಟ್ಟರೇ ಬರಿ ಪತ್ರ ಬೇಡ 30 ಲಕ್ಷ ಕೊಡಬೇಕು ಎಂದು ಹೇಳುತ್ತಾರೆ. ಸಿಎಂ ಕಛೇರಿಯಲ್ಲಿ ಇರುವವರು ಸಾಕ್ಷಿ ಕೊಡಿ ಅಂತ ಕೇಳುತ್ತಾರೆ. ದುಡ್ಡು ಕೊಟ್ಟೋನು ಸಾಕ್ಷಿ ಇಡುತ್ತಾನೆ. ಅವನಿಗೆ ಕೆಲಸ ಆದ್ರೆ ಸಾಕು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದರು.

ಟ್ರಾನ್ಸ್ಪೋರ್ಟ್ ಡಿಪಾರ್ಟ್ಮೆಂಟ್​​ನಲ್ಲಿ ವರ್ಗಾವಣೆ ವಿಚಾರದಲ್ಲಿ ಒಂದು ಸಿಂಡಿಕೇಟ್ ಇದೆ. ಕೆಎಸ್​​ಆರ್​ಟಿಸಿಯಲ್ಲಿ ಒಂದು ಸಿಂಡಿಕೇಟ್ ಇದೆ. ಸಬ್​ರಿಜಿಸ್ಟರ್ ಕಚೇರಿಯಲ್ಲಿ ಕೂಡ ಸಿಂಡಿಕೇಟ್ ಇದೆ. ಭ್ರಷ್ಟಾಚಾರದ ಬಗ್ಗೆ ಹೇಳುತ್ತಾರೆ. ಭ್ರಷ್ಟಾಚಾರ ಇದೆ ಅಂತಾ ಒಪಿಕೊಂಡಿದ್ದೀರಾ. ಭ್ರಷ್ಟಾಚಾರದ ವಿರುದ್ಧ ಕ್ರಮ ಅಂತಾ ಹೇಳುತ್ತೀರಿ, ಏನೂ ಕ್ರಮ ತಗೊಂಡಿದೀರಾ ನೀವು? ಸರ್ಕಾರ ಬಂದು ಒಂದು ತಿಂಗಳು ಮೇಲೆ ಆಯ್ತು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ಶಾಸಕನಾಗಿ ಸರ್ಕಾರದ ಲೋಪ ದೋಷಗಳ ಬಗ್ಗೆ ನಿರ್ಧಾಕ್ಷಿಣ್ಯವಾಗಿ ಮಾತಾಡುತ್ತೇನೆ. ನಾನು ಏನೇ ಮಾತಾಡಿದರು ಸಬ್ಜೆಕ್ಟ್ ಇದ್ದರೇ ಮಾತನಾಡುತ್ತೇನೆ. ಇಲ್ಲ ಅಂದ್ರೆ ಮಾತಾಡಲ್ಲ. ಆಡಳಿತ ಪಕ್ಷದ ಸೀನಿಯರ್ ಮಂತ್ರಿಗಳಿಗೆ ಹೇಳುತ್ತೇನೆ. ಬಿಜೆಪಿ ವಿರುದ್ಧ ಹಲವರು ಆರೋಪ ಮಾಡಿದ್ರಿ ಕಳೆದ 5 ವರ್ಷ ನಮಗೆ ಸದನದಲ್ಲಿ ಮಾತಾಡೋಕೆ ಬಿಟ್ಟಿಲ್ಲ. ನೀವೇ ಮಾತನಾಡಿದ್ದೀರಿ. ನಾವು ಸುಮ್ಮನೆ ಸದನದಲ್ಲಿ ಕುಳಿತುಕೊಳ್ಳಬೇಕು ಎಂದರು.

ನಾನು ವಿರೋಧ ಪಕ್ಷ ಸ್ಥಾನದಲ್ಲಿ ಇರೋದಕ್ಕೆ ಟಿಕೀಸುತ್ತಿಲ್ಲ. ಚುನಾವಣೆ ಪೂರ್ವದಲ್ಲಿ ವೀರಾವೇಶದಿಂದ ಜನರಕ್ಕೆ ಭರವಸೆ ಕೊಟ್ಟರಿ. ಈಗ ಆ ವೀರಾವೇಶ ಎಲ್ಲಿ? ಮುಂದಿನ ದಿನ ಈ ಸರ್ಕಾರ ಐಸಿಯು ಮತ್ತು ವೆಂಟಿಲೇಟರ್​ಗೆ ಹೋಗುತ್ತೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಐಸಿಯು ಮತ್ತು ವೆಂಟಿಲೇಟರ್ ಹೋಗುತ್ತೆ ಎಂದು ಭವಿಷ್ಯ ನುಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ