AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ: ಕುಮಾರಸ್ವಾಮಿಗೆ ಜಮೀರ್ ಸವಾಲು

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್​ ಮಾಡುವ ಮೂಲಕ ವಾಗ್ದಾಳಿ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ: ಕುಮಾರಸ್ವಾಮಿಗೆ ಜಮೀರ್ ಸವಾಲು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಚಿವ ಜಮೀರ್ ಅಹ್ಮದ್‌
Pramod Shastri G
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 24, 2023 | 5:20 PM

Share

ಬೆಂಗಳೂರು, ಸೆಪ್ಟೆಂಬರ್​ 24: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ (hd Kumaraswamy) ವಿರುದ್ಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್​ ಮಾಡಿರುವ ಅವರು, ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಹೆಚ್​ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ ಕುಮಾರಸ್ವಾಮಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಗೌಡರು ನಂಬಿ, ಪಾಲಿಸಿಕೊಂಡು ಬಂದ ತತ್ವ ಸಿದ್ಧಾಂತವನ್ನು ಬಲಿ ಕೊಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಹೆಚ್​ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? ತಮ್ಮ ಹೇಳಿಕೆಯಿಂದ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಟ್ವೀಟ್

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ, ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್​ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ 6 ಸ್ಥಾನ ಬರುತ್ತಿತ್ತು ಎಂದು ಟೀಕಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ತಾವು ಗೆಲ್ಲುತ್ತಿದ್ದರೆ ಎಂಬುದನ್ನು ಕುಮಾರಸ್ವಾಮಿ ಎದೆ ಮುಟ್ಟಿಕೊಂಡು ಹೇಳಲಿ. ಹೆಚ್​ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ