AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ: ಕುಮಾರಸ್ವಾಮಿಗೆ ಜಮೀರ್ ಸವಾಲು

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್​ ಮಾಡುವ ಮೂಲಕ ವಾಗ್ದಾಳಿ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ: ಕುಮಾರಸ್ವಾಮಿಗೆ ಜಮೀರ್ ಸವಾಲು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಚಿವ ಜಮೀರ್ ಅಹ್ಮದ್‌
Pramod Shastri G
| Edited By: |

Updated on: Sep 24, 2023 | 5:20 PM

Share

ಬೆಂಗಳೂರು, ಸೆಪ್ಟೆಂಬರ್​ 24: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ (hd Kumaraswamy) ವಿರುದ್ಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್​ ಮಾಡಿರುವ ಅವರು, ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಹೆಚ್​ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ ಕುಮಾರಸ್ವಾಮಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಗೌಡರು ನಂಬಿ, ಪಾಲಿಸಿಕೊಂಡು ಬಂದ ತತ್ವ ಸಿದ್ಧಾಂತವನ್ನು ಬಲಿ ಕೊಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಹೆಚ್​ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? ತಮ್ಮ ಹೇಳಿಕೆಯಿಂದ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಟ್ವೀಟ್

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ, ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್​ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ 6 ಸ್ಥಾನ ಬರುತ್ತಿತ್ತು ಎಂದು ಟೀಕಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ತಾವು ಗೆಲ್ಲುತ್ತಿದ್ದರೆ ಎಂಬುದನ್ನು ಕುಮಾರಸ್ವಾಮಿ ಎದೆ ಮುಟ್ಟಿಕೊಂಡು ಹೇಳಲಿ. ಹೆಚ್​ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ