AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿ ವಿಶ್ಲೇಷಣೆ: ಮಂತ್ರಿಗಿರಿ ಇಲ್ಲದ ಜಾರಕಿಹೊಳಿ ಕುಟುಂಬದಿಂದ ಬಿಜೆಪಿ ಸರಕಾರ ಕೆಡವಲು ಸಾಧ್ಯವೇ?

2006 ರಿಂದ ಜಾರಕಿಹೊಳಿ ಕುಟುಂಬದ ಒಬ್ಬರಲ್ಲ ಒಬ್ಬರು ಬೇರೆ ಬೇರೆ ಸರಕಾರದಲ್ಲಿ ಮಂತ್ರಿ ಆಗಿ ಇದ್ದಾರೆ. ಈಗ ತಮ್ಮ ಕುಟುಂಬದ ಮೇಲೆ ಬಂದ ಕಪ್ಪು ಚುಕ್ಕೆಗೆ ಬದಲಾಗಿ ಹಗೆ ತೀರಿಸಿಕೊಳ್ಳಲು ಸರಕಾರ ಬೀಳಿಸುವ ತಂತ್ರಗಾರಿಕೆಗೆ ಅವರು ಹೋಗಲಾರರು. ಅದಕ್ಕೆ ಕಾರಣ ಇಲ್ಲಿದೆ ನೋಡಿ.

ಸುದ್ದಿ ವಿಶ್ಲೇಷಣೆ: ಮಂತ್ರಿಗಿರಿ ಇಲ್ಲದ ಜಾರಕಿಹೊಳಿ ಕುಟುಂಬದಿಂದ ಬಿಜೆಪಿ ಸರಕಾರ ಕೆಡವಲು ಸಾಧ್ಯವೇ?
ರಮೇಶ್​ ಜಾರಕಿಹೊಳಿ, ಬಿ.ಎಸ್​.ಯಡಿಯೂರಪ್ಪ
ಡಾ. ಭಾಸ್ಕರ ಹೆಗಡೆ
| Edited By: |

Updated on: Mar 05, 2021 | 3:04 PM

Share

ರಮೇಶ ಜಾರಕಿಹೊಳಿ ಅವರ ಖಾಸಗೀ ಸಿಡಿ ಆಧರಿಸಿ ನಡೆಯುತ್ತಿರುವ ರಾಜಕೀಯ ವಿದ್ಯಮಾನ ಮುಂದೆ ಎಲ್ಲಿಗೆ ಹೋಗಿ ಮುಟ್ಟುತ್ತೆ ಎನ್ನುವುದನ್ನು ಈಗ ಹೇಳಲಾಗದಿದ್ದರೂ ಈ ಬೆಳವಣಿಗೆಯನ್ನಿಟ್ಟುಕೊಂಡು ಜಾರಕಿಹೊಳಿ ಕುಟುಂಬ ಬಿಜೆಪಿ ಸರಕಾರವನ್ನೇ ಉರುಳಿಸಬಹುದು ಎಂಬ ಚರ್ಚೆ ಎಲ್ಲ ಕಡೆ ಪ್ರಾರಂಭವಾಗಿದೆ. ಅದು ನಿಜವೇ? ಎನ್ನುವುದನ್ನು ನೋಡುವ ಮೊದಲು ಈ ಚರ್ಚೆ ನಡೆಯಲು ಏನೇನು ಕಾರಣವಿದೆ ಎನ್ನುವುದನ್ನು ನೋಡೋಣ. ರಮೇಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮತ್ತು ಅವರ ಕುಟುಂಬದ ಮೇಲೆ ಸಿಟ್ಟಿತ್ತು. ಹಾಗಾಗಿ ಅವರನ್ನು ತೆಗೆಯಲೇ ಬೇಕೆಂದು ಅವರು ಪಣ ತೊಟ್ಟಿದ್ದರು. ಈ ಉದ್ದೇಶವಿಟ್ಟುಕೊಂಡು ಅವರು ಪದೇ ಪದೇ ದೆಹಲಿಗೆ ಹೋಗಿ ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆಗೆ ತಂತ್ರ ಹೆಣೆಯುತ್ತಿದ್ದರು. ಅದಕ್ಕೆ ಸಾಕ್ಷಿ ಏನು? ಈಗ ಬಿಡುಗಡೆ ಆಗಿರುವ ಸಿಡಿಯಲ್ಲಿ ರಮೇಶ ಜಾರಕಿಹೊಳಿ ಅವರು ಮಾತನಾಡಿದ್ದು ಇದೆ. ಆ ಪ್ರಕಾರ, ರಮೇಶ ಜಾರಕಿಹೊಳಿ ಅವರು ಯಡಿಯೂರಪ್ಪ ಭ್ರಷ್ಟ ಮತ್ತು ಸಿದ್ದರಾಮಯ್ಯ ಒಳ್ಳೆಯವರು. ಇದೇ ಹೇಳಿಕೆ ಅಥವಾ ಮಾತನ್ನಿಟ್ಟುಕೊಂಡು ಕಾಂಗ್ರೆಸ್ಸಿನ ಕೆಲವರು ಮತ್ತು ತುಂಬಾ ಜನ ರಾಜಕೀಯ ಪಂಡಿತರು ಈ ಲೆಕ್ಕಾಚಾರಕ್ಕೆ ಇಳಿದಿದ್ದು ನಿಜ.

ಸರಕಾರ ಕೆಡವಲು ಸಾಧ್ಯವೇ? ಜಾರಕಿಹೊಳಿ ಕುಟುಂಬ ಇಲ್ಲಿವರೆಗೆ ಆಡಿರುವ ರಾಜಕೀಯವನ್ನು ವಿಶ್ಲೇಷಿಸಿದರೆ ಒಂದು ಅಂಶ ಸ್ಪಷ್ಟವಾಗುತ್ತದೆ: ಅವರು ಅಧಿಕಾರದಿಂದ ದೂರ ಇದ್ದು ರಾಜಕೀಯ ಮಾಡುವ ಕುಟುಂಬವಲ್ಲ. ಅದಕ್ಕೇ ಅವರ ಕುಟುಂಬದವರು ಎಲ್ಲಾ ಪಕ್ಷದಲ್ಲೂ ಇದ್ದಾರೆ. ಹಾಗಾಗಿ ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಅವರ ಕುಟುಂಬಕ್ಕೆ ಅಧಿಕಾರದಿಂದ ದೂರ ಇರುವ ಅನುಭವ ಆಗುವುದಿಲ್ಲ. ಹೆಚ್ಚು ಕಡಿಮೆ 2006 ರಿಂದ ಆ ಕುಟುಂಬದ ಒಬ್ಬರಲ್ಲ ಒಬ್ಬರು, ಬೇರೆ ಬೇರೆ ಪಕ್ಷದ ಸರಕಾರದ ಸಂಪುಟದಲ್ಲಿ ಅಧಿಕಾರದಲ್ಲಿ ಇದ್ದಾರೆ. ಅಧಿಕಾರ ಅನುಭವಿಸಿದ್ದಾರೆ. ಇದನ್ನ ನೋಡಿದರೆ ಗೊತ್ತಾಗುತ್ತೆ, ಅವರು ಅಧಿಕಾರದಿಂದ ದೂರ ಇರಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕೆಲವು ತಿಂಗಳು ಯಾರೂ ಅಧಿಕಾರದಲ್ಲಿ ಇರಲಿಲ್ಲ. ರಮೇಶ್ ಜಾರಕಿಹೊಳಿ ಕಾಂಗ್ರೆಸ್​ ಬಿಡುವುದಕ್ಕಿಂತ ಮೊದಲು ಅವರು ಸಮ್ಮಿಶ್ರ ಸರಕಾರದಲ್ಲಿ ಇದ್ದರು. ಆಗ ತನಗೆ ಡಿ.ಕೆ. ಶಿವಕುಮಾರ್​ ಅವರ ಕೈನಲ್ಲಿ ಇದ್ದ ಭಾರಿ ಮತ್ತು ಮಧ್ಯಮ ನೀರಾವರಿ ಖಾತೆ ತನಗೆ ಬೇಕೆಂದು ಹಠ ಹಿಡಿದಿದ್ದರು. ಆದರೆ ಆಗ ಅವರಿಗೆ ಕಾಂಗ್ರೆಸ್​ ಪಕ್ಷ ಸೊಪ್ಪು ಹಾಕಿರಲಿಲ್ಲ. ಒಂದು ಬಾರಿ ಪ್ರಯತ್ನ ಮಾಡಿ ಕೈ ಸುಟ್ಟುಕೊಂಡಿದ್ದ ಅವರು ಆ ಪ್ರಯತ್ನ ಬಿಟ್ಟಿದ್ದರು. ಕೊನೆಗೆ ಬಿಜೆಪಿ ನಾಯಕರ ಸಂಘಟಿತ ಪ್ರಯತ್ನ ಶುರುವಾದಾಗ ಜೊತೆಯಾದ ರಮೇಶ್​ ಜಾರಕಿಹೊಳಿ ಸರಕಾರ ಬರುವಲ್ಲಿ ಎಲ್ಲ ಪ್ರಯತ್ನ ಮಾಡಿದರು ಮತ್ತು ಮುಂದೆ ಅದೇ ಭಾರೀ ನೀರಾವರಿ ಖಾತೆ ತೆಗೆದುಕೊಂಡರು.

ಈಗ ಸದ್ಯಕ್ಕೆ ಅವರ ಕುಟುಂಬದವರು ಯಾರೂ ಸಂಪುಟದಲ್ಲಿ ಇಲ್ಲ. ಆದರೆ ಅವರ ತಮ್ಮ ಬಾಲಚಂದ್ರ ಕೆಎಂ​ಎಫ್​ ಅಧ್ಯಕ್ಷರಾಗಿದ್ದಾರೆ. ಕೆಲವು ಬಿಜೆಪಿ ನಾಯಕರು ಹೇಳುವಂತೆ, ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ತೆಗೆಯಲೇ ಬೇಕು ಎಂದು ಛಲ ತೊಟ್ಟು  ಓಡಾಡುತ್ತಿದ್ದರು. ಈಗ ಮಂತ್ರಿಗಿರಿ ಕಳೆದುಕೊಂಡು ಕುಳಿತಿರುವಾಗ ಸರಕಾರ ಕೆಡವಬಹುದಲ್ಲ? ಹಾಗೆ ಮಾಡಲು ಹೋದರೆ ಏನಾಗುತ್ತೆ? ಮೊದಲನೆಯದಾಗಿ ಇದರಿಂದ ಯಡಿಯೂರಪ್ಪ ಅವರಿಗೆ ಇನ್ನೂ ಸಿಟ್ಟು ಬರುವುದು ಸಹಜ. ಆಗ ಅವರು, ಪೊಲೀಸ್ ಮತ್ತು ಇತರೇ ಏಜೆನ್ಸಿಗಳ ಮೂಲಕ ಈ ಸಿಡಿ ಹಿಂದೆ ಯಾರಿದ್ದಾರೆ ಎಂಬುದನ್ನು ಕಂಡುಕೊಳ್ಳುವ ತನಿಖೆಯನ್ನು ನಿಧಾನಗೊಳಿಸಬಹುದು. ಅದು ಜಾರಕಿಹೊಳಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ಜಾಸ್ತಿ ಹೊಡೆತ ನೀಡುವುದು ಖಂಡಿತ. ಅಷ್ಟೇ ಅಲ್ಲ, ಸರಕಾರ ಕೆಡವಲು ಕೈ ಹಾಕಿದರೆ ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಇತ್ತೀಚೆಗೆ ಬೆಳೆಸಿಕೊಂಡಿದ್ದ ಉತ್ತಮ ಸಂಪರ್ಕ ರಮೇಶ್​ ಮತ್ತು ಬಾಲಚಂದ್ರ ಅವರ ಪಾಲಿಗೆ ಮುಗಿದೇ ಹೋಗುತ್ತದೆ. ಇದರ ಪರಿಣಾಮ ಏನು ಎನ್ನುವುದು ಅವರಿಗೂ ಗೊತ್ತು. ಹಾಗಾಗಿ ಸರಕಾರ ಉರುಳಿಸುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಜಾರಕಿಹೊಳಿ ಕುಟುಂಬವನ್ನು ಹತ್ತಿರದಿಂದ ನೋಡಿರುವ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಜಕೀಯ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿದೆ ಹಲವು ಲೆಕ್ಕಾಚಾರ: ‘ಸಾಹುಕಾರ’ನ ಮುಂದಿನ ನಡೆ ನಿಗೂಢ

ವಿಡಿಯೋ ಸಾಕ್ಷ್ಯ ಸಾಕಾಗಲ್ಲ, ದಾರೀಲಿ ಹೋಗುವವರು ದೂರು ಕೊಟ್ರೆ FIR ಹಾಕೋಕೆ ಆಗಲ್ಲ; ಜಾರಕಿಹೊಳಿ ಪರ​ ವಕೀಲ ರಮೇಶ್ ಬ್ಯಾಟಿಂಗ್

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ