AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲೇ ಯಾಕೆ ಕೆಂಪೇಗೌಡರ ಜಯಂತಿ ಮಾಡಿದ್ರು? ಸರ್ಕಾರಕ್ಕೆ ಪ್ರಶ್ನಿಸಿದ ಹೆಚ್​ಡಿ ರೇವಣ್ಣ

ಜೂ.27 ರಾಜ್ಯ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹೊರಗಡೆ ಹಾಸನ ಜಿಲ್ಲೆಯಲ್ಲಿ ಹಮ್ಮಿಕೊಂಡಿತ್ತು. ಈ ವಿಚಾರವಾಗಿ ‘ಕಾರ್ಯಕ್ರಮದ ತಯಾರಿ ಸಭೆಗೆ ನನ್ನನ್ನ ಕರೆದಿರಲಿಲ್ಲ, ಉಸ್ತುವಾರಿ ಸಚಿವರ ಕಛೇರಿಯಿಂದಲೂ ಕರೆ ಬಂದಿರಲಿಲ್ಲವೆಂದು ಮಾಜಿ ಸಚಿವ ಎಚ್​.ಡಿ ರೇವಣ್ಣನವರು ಹೇಳಿದ್ದಾರೆ.

ಹಾಸನದಲ್ಲೇ ಯಾಕೆ ಕೆಂಪೇಗೌಡರ ಜಯಂತಿ ಮಾಡಿದ್ರು? ಸರ್ಕಾರಕ್ಕೆ ಪ್ರಶ್ನಿಸಿದ ಹೆಚ್​ಡಿ ರೇವಣ್ಣ
ಹೆಚ್​ಡಿ ರೇವಣ್ಣ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 30, 2023 | 1:27 PM

ಹಾಸನ: ಜೂ.27 ರಾಜ್ಯ ಸರ್ಕಾರ ಕೆಂಪೇಗೌಡ ಜಯಂತಿ(Kempegowda Jayanthi)ಯನ್ನು ಅದ್ದೂರಿಯಾಗಿ ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹೊರಗಡೆ ಹಾಸನ ಜಿಲ್ಲೆಯಲ್ಲಿ ಹಮ್ಮಿಕೊಂಡಿತ್ತು. ಈ ವಿಚಾರವಾಗಿ ‘ಕಾರ್ಯಕ್ರಮದ ತಯಾರಿ ಸಭೆಗೆ ನನ್ನನ್ನ ಕರೆದಿರಲಿಲ್ಲ, ಉಸ್ತುವಾರಿ ಸಚಿವರ ಕಛೇರಿಯಿಂದಲೂ ಕರೆ ಬಂದಿರಲಿಲ್ಲವೆಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ(HD Revanna)ನವರು ಹೇಳಿದರು. ಹಾಸನದಲ್ಲಿ ಮಾತನಾಡಿದ ಅವರು ‘ಕಾಂಗ್ರೆಸ್​ನವರು ಹಾಸನದಲ್ಲೇ ಯಾಕೆ ಕೆಂಪೇಗೌಡರ ಜಯಂತಿ ಮಾಡಿದ್ರು, ಏನು ದೃಷ್ಠಿ ಇತ್ತು ಎಂದು ಪ್ರಶ್ನಿಸಿದ ಅವರು ಜುಲೈ 10 ಕ್ಕೆ ನಮ್ಮ ಕ್ಷೇತ್ರದಲ್ಲಿಯೇ ದೊಡ್ಡದಾಗಿ ಕೆಂಪೇಗೌಡರ ಜಯಂತಿ ಮಾಡುತ್ತೇವೆ ಎಂದರು.

ಇನ್ನು ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು ‘ನಮ್ಮ ಪಕ್ಷದ ನಾಯಕರ ಜೊತೆ ಕೂತು ಚರ್ಚೆ ಮಾಡುತ್ತೇವೆ. ಇನ್ನೂ ಕೂಡ ಸಾಕಷ್ಟು ಸಮಯಾವಕಾಶ ಇದ್ದು, ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ಯಾರಿಗೆ ಟಿಕೆಟ್​ ಕೊಡಬೇಕು, ಯಾರನ್ನ ಯಾವ ಕ್ಷೇತ್ರದಲ್ಲಿ ನಿಲ್ಲಿಸಬೇಕು ಎಲ್ಲವನ್ನೂ ಗಮನಿಸಬೇಕಾಗುತ್ತದೆ. ಆದಕ್ಕೊಸ್ಕರ ನಮ್ಮ ಪಕ್ಷದ ನಾಯಕರು ಸೇರಿ ಈ ಕುರಿತು ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ:ಶಾಂತಿ ಸಂದೇಶವಾಹಕರೋ ಅಥವಾ ರಾಜಕೀಯ ಅವಕಾಶವಾದಿಯೋ?: ರಾಹುಲ್ ಗಾಂಧಿ ಮಣಿಪುರ ಭೇಟಿ ಬಗ್ಗೆ ಕಾಂಗ್ರೆಸ್, ಬಿಜೆಪಿ ನಡುವೆ ವಾಕ್ಸಮರ

ಜೆಡಿಎಸ್ ಮುಗಿಸಬೇಕೆಂದು ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಯತ್ನ

ಕಾಂಗ್ರೆಸ್ ವಿರುಧ್ದ ಕುಮಾರಸ್ವಾಮಿ ಟೀಕೆ ವಿಚಾರ ‘ ಕುಮಾರಸ್ವಾಮಿ ಹೇಳುವುದರಲ್ಲಿ ತಪ್ಪೇನಿದೆ ಹೇಳಿ. ಕಾಂಗ್ರೆಸ್​ನವರು ಹತ್ತು ಕೆಜಿ ಅಕ್ಕಿ ಕೊಡ್ತಿವಿ ಅಂದಿದ್ದರು. ಈಗಾಗಲೇ ಕೊಡುತ್ತಿರುವ ಅಕ್ಕಿ ಜೊತೆಗೆ 5 ಕೆ.ಜಿ ಕೊಡುತ್ತೇವೆಂದು ಹೇಳಿರಲಿಲ್ಲ. ಹಾಗಾಗಿ ಕುಮಾರಸ್ವಾಮಿ ಕೇಳಿದ್ದಾರೆ ಅಷ್ಟೇ, ಈ ಕಾಂಗ್ರೆಸ್​ನವರು ಕೇವಲ ಹತ್ತುವರೆ ತಿಂಗಳಲ್ಲಿ ದೇವೇಗೌಡರನ್ನೇ ಮನೆಗೆ ಕಳಿಸಿದ್ರು, ದೇಶದ ಹದಿನೇಳು ರಾಷ್ಟ್ರೀಯ ಪಕ್ಷಗಳು ಮಾಡುತ್ತಿರುವುದು ಅವಕಾಶಸಿಂದ ರಾಜಕಾರಣ. ಜೆಡಿಎಸ್ ಮುಗಿಸಬೇಕು ಎಂದು ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಯತ್ನ ಮಾಡುತ್ತಿದ್ದಾರೆ. ಇದು ಯಾರಿಂದಲು ಸಾಧ್ಯವಿಲ್ಲ ಎಂದು ರೇವಣ್ಣ ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್