AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಬೆಳಗಾವಿ ಲೋಕಸಭಾ ಅಖಾಡಕ್ಕಿಳಿಯಲು ಸಜ್ಜಾದ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ಮುಂದಿನ 2 ತಿಂಗಳೊಳಗೆ ಬೆಳಗಾವಿ, ಚಿಕ್ಕೋಡಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.

ಮತ್ತೊಮ್ಮೆ ಬೆಳಗಾವಿ ಲೋಕಸಭಾ ಅಖಾಡಕ್ಕಿಳಿಯಲು ಸಜ್ಜಾದ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು
ಸತೀಶ್ ಜಾರಕಿಹೊಳಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 15, 2023 | 2:54 PM

Share

ಬೆಳಗಾವಿ: 2019ರಲ್ಲಿ ನಡೆದಿದ್ದ  ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತರೂ ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟಿದ್ದ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಹೌದು…ಮುಂದಿನ ವರ್ಷ ಅಂದ್ರೆ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಬೆಳಗಾವಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಇಂದು(ಜುಲೈ 15) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಬೆಳಗಾವಿ ಜಿಲ್ಲೆಯ ಶಾಸಕರ ಜೊತೆ ಸಭೆ ಮಾಡಿ ಚರ್ಚಿಸಿದ್ದೇನೆ. ಮುಂದಿನ 2 ತಿಂಗಳೊಳಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಾಜಿ ಸಚಿವ ಯುಟರ್ನ್: ಲೋಕಸಭಾ ಟಿಕೆಟ್ ಮೇಲೆ ಮಾಜಿ ಸಚಿವ ವಿ.ಸೋಮಣ್ಣ ಕಣ್ಣು​, ಯಾವ ಕ್ಷೇತ್ರ?

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಮುಂದಿನ 2 ತಿಂಗಳೊಳಗೆ ಘೋಷಣೆಯಾಗಲಿದೆ. ಎರಡೂ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಸ್ಥಳೀಯ ಶಾಸಕರು, ಮುಖಂಡರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ನಮ್ಮ ಕುಟುಂಬ ಎರಡನೇ ಸ್ಥಾನದಲ್ಲಿ ಇರಲಿದೆ. ಪಕ್ಷ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೇಳಿದರೆ ನಿಲ್ಲುತ್ತೇನೆ. ಅವಶ್ಯಕತೆ ಇದ್ದರೆ ನಮ್ಮ ಕುಟುಂಬದಿಂದಲೇ ಅಭ್ಯರ್ಥಿ ನಿಲ್ಲಿಸುತ್ತೇವೆ ಎಂದು ಪರೋಕ್ಷವಾಗಿ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಸುಳಿವು ನೀಡಿದರು.

ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ 135 ಸ್ಥಾನಗಳಲ್ಲಿ ಗೆಲ್ಲುವುದರ ಮೂಲಕ ಅಧಿಕಾರಕ್ಕೇರಿರುವ ಕಾಂಗ್ರೆಸ್ ಇದೀಗ ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ. ವಿಧಾನಸಭೆಯಲ್ಲಿ ಗೆದ್ದ ಉತ್ಸಹದಲ್ಲಿರುವ ಕಾಂಗ್ರೆಸ್, ಕಾಂಗ್ರೆಸ್​ದಲ್ಲಿ ಕನಿಷ್ಠ 15 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಹೀಗಾಗಿ ಈಗಿನಿಂದಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಿದ್ಧತೆ ನಡೆಸಿದ್ದಾರೆ. ಅಲ್ಲದೇ ಚುನಾವಣೆಗೆ ತಯಾರಾಗುವಂತೆ ನಾಯುಕರಿಗೆ ಸೂಚನೆ ನೀಡಿದ್ದಾರೆ. ​ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದಿದ್ದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಅಲ್ಪಮತಗಳಿಂದ ಸೋಲು ಕಂಡಿದ್ದರು. ಬಿಜೆಪಿಯ ಮಂಗಳ ಅಂಗಡಿ ವಿರುದ್ಧ ಕಣಕ್ಕಿಳಿದಿದ್ದ ಸತೀಶ್​ ಜಾರಕಿಹೊಳಿ ಪ್ರಬಲ ಪೈಪೋಟಿ ನೀಡುವ ಮೂಲಕ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದ್ದರು. ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಸ್ಪರ್ಧೆಯಿಂದ ಕಾಂಗ್ರೆಸ್​ನ ಶಕ್ತಿ ಹೆಚ್ಚಿಸಿತ್ತು. ಹೀಗಾಗಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಗೆಲುವ ಸಾಧಿಸುವಲ್ಲಿ ಸಹಾಯಕವಾಯ್ತು. ಇದೀಗ ಮತ್ತೆ ಬೆಳಗಾವಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ ಸಜ್ಜಾಗಿದ್ದು, ಮತ್ತೆ ಸತೀಶ್ ಜಾರಕಿಹೊಳಿಯನ್ನು ಅಖಾಡಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದೆ.

ಒಂದು ವೇಳೆ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ, ಯಮಕನಮರಡಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಟಿಕೆಟ್ ಸತೀಶ್ ಜಾರಕಿಹೊಳಿ ಪುತ್ರನಿಗೆ ನೀಡುವ ಬಗ್ಗೆಯೂ ಸಹ ಚರ್ಚೆಗಳು ನಡೆದಿವೆ.

ಒಟ್ಟಿನಲ್ಲಿ ಬೆಳಗಾವಿಯಲ್ಲಿ ತಮ್ಮದೇ ಹಿಡಿತ ಹೊಂದಿರುವ ಸತೀಶ್ ಜಾರಕಿಹೊಳಿ ಈ ಬಾರಿ ಲೋಕಸಭಾ ಚುನಾವಣೆಯ ಕಾಂಗ್ರೆಸ್​ ಪಾಲಿನ ಪ್ರಮುಖ ಅಸ್ತ್ರವಾಗಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?