AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ರೇಣುಕಾಚಾರ್ಯ: ಯಾವ ಕ್ಷೇತ್ರದಿಂದ?

ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮತ್ತೆ ಸ್ವಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿರುವ ರೇಣುಕಾಚಾರ್ಯ ಇದೀಗ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಹಾಲಿ ಬಿಜೆಪಿ ಸಂಸದರು ಇರುವ ದಾವಣಗೆರೆ ಲೋಕಸಭಾ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮೊದಲ ಬಾರಿಗೆ ಬಹಿರಂಗವಾಗಿಯೇ ಹೇಳಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ರೇಣುಕಾಚಾರ್ಯ: ಯಾವ ಕ್ಷೇತ್ರದಿಂದ?
ರೇಣುಕಾಚಾರ್ಯ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ರಮೇಶ್ ಬಿ. ಜವಳಗೇರಾ

Updated on: Oct 09, 2023 | 9:34 AM

ಚಿತ್ರದುರ್ಗದಲ್ಲಿ, (ಅಕ್ಟೋಬರ್ 09): ಲೋಕಸಭೆ ಚುನಾವಣೆಗೆ (Loksabha Elections 2024) ಕರ್ನಾಟಕದಲ್ಲಿ ಬಿಜೆಪಿ(BJP) ಹಾಗೂ ಕಾಂಗ್ರೆಸ್(Congress)  ಸಿದ್ಧತೆ ನಡೆಸಿವೆ. ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಕಾಂಗ್ರೆಸ್​​ ಸೆಡ್ಡು ಹೊಡೆಯಲು ಸಜ್ಜಾಗಿವೆ. ಇದರ ಮಧ್ಯೆ ಇದೀಗ ಟಿಕೆಟ್ ಫೈಟ್ ಶುರುವಾಗಿದೆ. ಹೌದು..ದಾವಣಗೆರೆ (Davanagere) ಬಿಜೆಪಿಯ ಹಾಲಿ ಸಂಸದ ಸಿದ್ದೇಶ್ವರ್ ಅವರು ಇದ್ದಾರೆ. ಆದರೂ ಸಹ ಎಂಪಿ ರೇಣುಕಾಚಾರ್ಯ (MP Renukacharya) ಈ ಬಾರಿ ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳ ಮಾತನಾಡಿರುವ ರೇಣುಕಾಚಾರ್ಯ, ಬೇರೆಯವರನ್ನು ಟೀಕೆ ಮಾಡಲು ನಮಗೆ ಯಾವ ನೈತಿಕತೆ ಇದೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ಆಯ್ಕೆ ಮಾಡಲಿ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತನಾಡುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷ ನಾಯಕರ ಆಯ್ಕೆ ಆಗಲಿ. ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದರು.

ಇದನ್ನೂ ಓದಿ: 2024ಕ್ಕೆ ಮತ್ತೆ ವಿಧಾನಸಭೆ ಚುನಾವಣೆ ಖಚಿತ; ಡಿಕೆಶಿ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್​ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಮ್ಮದೇ ಪಕ್ಷದ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಸೋಲಿಗೆ ನಾಯಕರ ದೌರ್ಬಲ್ಯ ಕಾರಣ. ಬಿಜೆಪಿ ಕಾರ್ಯಕರ್ತರನ್ನೇ ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷ ನಾಯಕರ ಆಯ್ಕೆ ಆಗಲಿ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತನಾಡುತ್ತಿದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಗುಡುಗಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ಬಗ್ಗೆ ಮಾತನಾಡಿ, ಜೆಡಿಎಸ್​, ಬಿಜೆಪಿ ಮೈತ್ರಿಗೆ ವಿರೋಧ ಮಾಡಲ್ಲ. ಆದ್ರೆ, ಮೈತ್ರಿ ಎಂದರೆ ಕಾರ್ಯಕರ್ತರ ನಡುವೆ ಸಾಮರಸ್ಯ ಇರಬೇಕು. ಆದ್ರೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಆಗುತ್ತಿದೆ. ಬಿಜೆಪಿ ಕಾರ್ಯಕರ್ತರು ಜೆಡಿಎಸ್, ಕಾಂಗ್ರೆಸ್ ವಿರೋಧಿಸಿಕೊಂಡು ಬಂದಿದ್ದಾರೆ. ಈ ಹಿಂದೆ ಜೆಡಿಎಸ್​ನವರು ವಚನ ಭ್ರಷ್ಟರು ಎಂದು ನಾವೇ ಹೇಳಿದ್ದೆವು. ಅಂತಹವರ ಜೊತೆ ಯಾವ ರೀತಿ ಮೈತ್ರಿ ಎಂದು ಜನ ಕೇಳುತ್ತಿದ್ದಾರೆ. ರಾಜ್ಯ ನಾಯಕರನ್ನು ಹೊರಗಿಟ್ಟು ಮೈತ್ರಿಯಾದ್ರೆ ಅಪೂರ್ಣ ಆಗುತ್ತದೆ. ಯಡಿಯೂರಪ್ಪ ಸೇರಿ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಪರೋಕ್ಷವಾಗಿ ಹೈಕಮಾಂಡ್​ ನಾಯಕರಿಗೆ ಟಾಂಗ್ ಕೊಟ್ಟರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ