AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಅನುಮತಿ ನಿರಾಕರಿಸಿದರೂ ಸಿಂಗಾಪುರಕ್ಕೆ ಭೇಟಿ ನೀಡುವೆ: ಅರವಿಂದ ಕೇಜ್ರಿವಾಲ್

ಅದು ಮೇಯರ್​​ಗಳ ಸಮಾವೇಶವಾಗಿರುವುದರಿಂದ ಕೇಜ್ರಿವಾಲ್ ಹೋಗಬೇಕಾದ ಅಗತ್ಯವಿಲ್ಲ ಎಂದು ಸಕ್ಸೇನಾ ಗುರುವಾರ ಅನುಮತಿ ನಿರಾಕರಿಸಿದ್ದರೂ ನಾನು ಸಿಂಗಾಪುರಕ್ಕೆ ಭೇಟಿ ನೀಡುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ .

Breaking ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಅನುಮತಿ ನಿರಾಕರಿಸಿದರೂ ಸಿಂಗಾಪುರಕ್ಕೆ ಭೇಟಿ ನೀಡುವೆ: ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Jul 21, 2022 | 6:48 PM

Share

ಸಿಂಗಾಪುರದಲ್ಲಿ (Singapore visit) ಅಗಸ್ಟ್ ತಿಂಗಳಲ್ಲಿ ನಡೆಯಲಿರುವ ಸಮಾವೇಶವೊಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಭಾಗವಹಿಸುವುದಕ್ಕೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ( VK Saxena) ಅನುಮತಿ ನಿರಾಕರಿಸಿದ್ದಾರೆ. ಅದು ಮೇಯರ್​​ಗಳ ಸಮಾವೇಶವಾಗಿರುವುದರಿಂದ ಕೇಜ್ರಿವಾಲ್ ಹೋಗಬೇಕಾದ ಅಗತ್ಯವಿಲ್ಲ ಎಂದು ಸಕ್ಸೇನಾ ಗುರುವಾರ ಅನುಮತಿ ನಿರಾಕರಿಸಿದ್ದರೂ ನಾನು ಸಿಂಗಾಪುರಕ್ಕೆ ಭೇಟಿ ನೀಡುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.ವಿದೇಶದಲ್ಲಿ ನಡೆಯುವ ಸಮಾವೇಶದಲ್ಲಿ ಹಾಜರಾಗದಂತೆ ಕೇಜ್ರಿವಾಲ್ ಅವರಿಗೆ ಅನುಮತಿ ನಿರಾಕರಿಸುತ್ತಿರುವುದು ಇದು ಎರಡನೇ ಬಾರಿ. ಇದು ಮೇಯರ್ ಗಳ ಸಮಾವೇಶ. ಇದರಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಅಗತ್ಯವಿಲ್ಲ ಎಂದು ವಿಕೆ ಸಕ್ಸೇನಾ ಅವರು ಕೇಜ್ರಿವಾಲ್ ಮನವಿಗೆ ಉತ್ತರಿಸಿದ್ದಾರೆ. ಗೌರವಾನ್ವಿತ ಲೆಫ್ಟಿನೆಂಟ್ ಗವರ್ನರ್ ಅವರ ಆದೇಶವನ್ನು ನಾನು ಒಪ್ಪುವುದಿಲ್ಲ ಎಂದು ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ನಮ್ಮ ದೇಶದಲ್ಲಿರುವ ಪ್ರತಿಯೊಂದು ಸಾಂವಿಧಾನಿಕ ಅಧಿಕಾರಿಯ ಭೇಟಿಯು ಆ ಅಧಿಕಾರಿಯ ಅಧಿಕಾರದ ವ್ಯಾಪ್ತಿಯೊಳಗೆ ಯಾವ ವಿಷಯಗಳು ಬರುತ್ತವೆ ಎಂಬುದನ್ನು ನಿರ್ಧರಿಸಿ ಆಗುವುದಾದರೆ ಇದು ತುಂಬಾ ತಮಾಷೆಯ ಸಂಗತಿ. ಹೀಗಾಗುವುದಾದರೆ ಪ್ರಧಾನಿಯವರೂ ಹೆಚ್ಚಿನ ಸ್ಥಳಗಳಿಗೆ ಹೋಗುವಂತಿಲ್ಲ. ಯಾಕೆಂದರೆ ಅವರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚೆ ಮಾಡುತ್ತಾರೆ, ಅದರಲ್ಲಿ ಹೆಚ್ಚಿನದ್ದು ಅವರ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದೀಗ ದೆಹಲಿ ಸರ್ಕಾರವು ನೇರವಾಗಿಯೇ ವಿದೇಶಾಂಗ ಸಚಿವಾಲಯದ ಅನುಮತಿ ಪಡೆಯಲು ನಿರ್ಧರಿಸಿದೆ. ಸಿಂಗಾಪುರದಲ್ಲಿ World Cities Summit ನಡೆಯಲಿದ್ದು, ಇದರಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಅಗತ್ಯವಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದರು.

Published On - 5:24 pm, Thu, 21 July 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?