AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಅನುಮತಿ ನಿರಾಕರಿಸಿದರೂ ಸಿಂಗಾಪುರಕ್ಕೆ ಭೇಟಿ ನೀಡುವೆ: ಅರವಿಂದ ಕೇಜ್ರಿವಾಲ್

ಅದು ಮೇಯರ್​​ಗಳ ಸಮಾವೇಶವಾಗಿರುವುದರಿಂದ ಕೇಜ್ರಿವಾಲ್ ಹೋಗಬೇಕಾದ ಅಗತ್ಯವಿಲ್ಲ ಎಂದು ಸಕ್ಸೇನಾ ಗುರುವಾರ ಅನುಮತಿ ನಿರಾಕರಿಸಿದ್ದರೂ ನಾನು ಸಿಂಗಾಪುರಕ್ಕೆ ಭೇಟಿ ನೀಡುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ .

Breaking ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಅನುಮತಿ ನಿರಾಕರಿಸಿದರೂ ಸಿಂಗಾಪುರಕ್ಕೆ ಭೇಟಿ ನೀಡುವೆ: ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 21, 2022 | 6:48 PM

Share

ಸಿಂಗಾಪುರದಲ್ಲಿ (Singapore visit) ಅಗಸ್ಟ್ ತಿಂಗಳಲ್ಲಿ ನಡೆಯಲಿರುವ ಸಮಾವೇಶವೊಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಭಾಗವಹಿಸುವುದಕ್ಕೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ( VK Saxena) ಅನುಮತಿ ನಿರಾಕರಿಸಿದ್ದಾರೆ. ಅದು ಮೇಯರ್​​ಗಳ ಸಮಾವೇಶವಾಗಿರುವುದರಿಂದ ಕೇಜ್ರಿವಾಲ್ ಹೋಗಬೇಕಾದ ಅಗತ್ಯವಿಲ್ಲ ಎಂದು ಸಕ್ಸೇನಾ ಗುರುವಾರ ಅನುಮತಿ ನಿರಾಕರಿಸಿದ್ದರೂ ನಾನು ಸಿಂಗಾಪುರಕ್ಕೆ ಭೇಟಿ ನೀಡುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.ವಿದೇಶದಲ್ಲಿ ನಡೆಯುವ ಸಮಾವೇಶದಲ್ಲಿ ಹಾಜರಾಗದಂತೆ ಕೇಜ್ರಿವಾಲ್ ಅವರಿಗೆ ಅನುಮತಿ ನಿರಾಕರಿಸುತ್ತಿರುವುದು ಇದು ಎರಡನೇ ಬಾರಿ. ಇದು ಮೇಯರ್ ಗಳ ಸಮಾವೇಶ. ಇದರಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಅಗತ್ಯವಿಲ್ಲ ಎಂದು ವಿಕೆ ಸಕ್ಸೇನಾ ಅವರು ಕೇಜ್ರಿವಾಲ್ ಮನವಿಗೆ ಉತ್ತರಿಸಿದ್ದಾರೆ. ಗೌರವಾನ್ವಿತ ಲೆಫ್ಟಿನೆಂಟ್ ಗವರ್ನರ್ ಅವರ ಆದೇಶವನ್ನು ನಾನು ಒಪ್ಪುವುದಿಲ್ಲ ಎಂದು ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ನಮ್ಮ ದೇಶದಲ್ಲಿರುವ ಪ್ರತಿಯೊಂದು ಸಾಂವಿಧಾನಿಕ ಅಧಿಕಾರಿಯ ಭೇಟಿಯು ಆ ಅಧಿಕಾರಿಯ ಅಧಿಕಾರದ ವ್ಯಾಪ್ತಿಯೊಳಗೆ ಯಾವ ವಿಷಯಗಳು ಬರುತ್ತವೆ ಎಂಬುದನ್ನು ನಿರ್ಧರಿಸಿ ಆಗುವುದಾದರೆ ಇದು ತುಂಬಾ ತಮಾಷೆಯ ಸಂಗತಿ. ಹೀಗಾಗುವುದಾದರೆ ಪ್ರಧಾನಿಯವರೂ ಹೆಚ್ಚಿನ ಸ್ಥಳಗಳಿಗೆ ಹೋಗುವಂತಿಲ್ಲ. ಯಾಕೆಂದರೆ ಅವರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚೆ ಮಾಡುತ್ತಾರೆ, ಅದರಲ್ಲಿ ಹೆಚ್ಚಿನದ್ದು ಅವರ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದೀಗ ದೆಹಲಿ ಸರ್ಕಾರವು ನೇರವಾಗಿಯೇ ವಿದೇಶಾಂಗ ಸಚಿವಾಲಯದ ಅನುಮತಿ ಪಡೆಯಲು ನಿರ್ಧರಿಸಿದೆ. ಸಿಂಗಾಪುರದಲ್ಲಿ World Cities Summit ನಡೆಯಲಿದ್ದು, ಇದರಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಅಗತ್ಯವಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದರು.

Published On - 5:24 pm, Thu, 21 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ