AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬಿಜೆಪಿ ಸೇರ್ಪಡೆ: ಬೆಂಬಲಿಗರ ಸಭೆ ಬಳಿಕ ಜನಾರ್ದನ ರೆಡ್ಡಿ ಅಧಿಕೃತ ಘೋಷಣೆ

Gali janardhan reddy: ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ಸಂಬಂಧ ಇಂದು ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೆಆರ್‌ಪಿಪಿ ಕಾರ್ಯಕರ್ತರ ಸಭೆ ನಡೆಸಿದ್ದು, ಸಭೆಯಲ್ಲಿ ಕೆಆರ್​ಪಿಪಿಯನ್ನು ಬಿಜೆಪಿ ಪಕ್ಷದೊಂದಿಗೆ ವಿಲೀನಗೊಳಿಸಲು ಸರ್ವ ಸದಸ್ಯರು ಸಮ್ಮಿತಿಸಿದ್ದಾರೆ. ಇನ್ನು ಸಭೆ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ರೆಡ್ಡು, ಬಿಜೆಪಿ ಸೇರ್ಪಡೆಯಾಗುವುದಾಗಿ ಬಹಿರಂಗವಾಗಿ ಘೋಷಿಸಿದರು.

ನಾಳೆ ಬಿಜೆಪಿ ಸೇರ್ಪಡೆ: ಬೆಂಬಲಿಗರ ಸಭೆ ಬಳಿಕ ಜನಾರ್ದನ ರೆಡ್ಡಿ ಅಧಿಕೃತ ಘೋಷಣೆ
ಜನಾರ್ದನ ರೆಡ್ಡಿ
ರಮೇಶ್ ಬಿ. ಜವಳಗೇರಾ
|

Updated on: Mar 24, 2024 | 5:18 PM

Share

ಬೆಂಗಳೂರು, (ಮಾರ್ಚ್ 24): ಕೆಆರ್​ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುಉದು ಖಚಿತವಾಗಿದೆ. ಅಲ್ಲದೇ ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಗಿದೆ. ಇಂದು (ಮಾರ್ಚ್ 24) ಬೆಂಗಳೂರಿನಲ್ಲಿ ನಡೆದ ಕೆಆರ್​ಪಿಪಿ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನವಾಗಿದೆ. ಇನ್ಜು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ನಾಯಕರ ಆಹ್ವಾನದ ಮೇರೆಗೆ ನಾಳೆ (ಮಾರ್ಚ್ 25) ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಧಿಕೃತವಾಗಿ ಘೋಷಿಸಿದರು.

ಬೆಂಗಳೂರಿನನಲ್ಲಿರುವ ತಮ್ಮ ಪಾರಿಜಾತ ನಿವಾಸದಲ್ಲಿ ಪದಾಧಿಕಾರಿಗಳು, ಬೆಂಬಲಗರ ಸಭೆ ನಡೆಸಿದ ಜನಾರ್ದನ ರೆಡ್ಡಿ, ಬಿಜೆಪಿ ನಾಯಕರು ನೀಡಿದ ಆಹ್ವಾನದ ಬಗ್ಗೆ ಮುಕ್ತವಾಗಿ ಚರ್ಚಿಸಿದರು. ಅಲ್ಲದೇ ಸಭೆಯಲ್ಲಿ ಬಿಜೆಪಿ ಜತೆ ಕೆಆರ್‌ಪಿಪಿ ಪಕ್ಷದ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಯ್ತು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲಾ‌ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಮಾರ್ಚ್ 25 ಬೆಳಗ್ಗೆ ಬಿಜೆಪಿ ಸೇರ್ಪಡೆ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಾಳೆ (ಮಾರ್ಚ್ 25) ಬೆಳಗ್ಗೆ 10ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲಾ ಬೆಂಬಲಿಗರ ಅಭಿಪ್ರಾಯ ಪಡೆದಿದ್ದೇನೆ. ಇದಕ್ಕೆ ಎಲ್ಲಾ ಬೆಂಬಲಿಗರು ಒಪ್ಪಿಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕಳೆದ 10 ವರ್ಷದಿಂದ ಅಭಿವೃದ್ಧಿಯಾಗಿದೆ. ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ಈ ನಿರ್ಧಾರ ಮಾಡಿದ್ದೇನೆ. KRPP ಸ್ಥಾಪನೆ ವೇಳೆ ಬಿಎಸ್​​ವೈರನ್ನು ತಂದೆ ರೀತಿ ನೋಡುತ್ತೇನೆ ಎಂದಿದ್ದೆ. ಮಾಜಿ ಸಚಿವ ಶ್ರೀರಾಮುಲು ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಮೋದಿರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು.

ಬಿಜೆಪಿಗೆ ಅತೀ‌ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯೆದಲ್ಲಿ ಏನೆನ್ನೆಲ್ಲಾ ಆಯ್ತು. ಅದು ನಿಮಗೂ ಗೊತ್ತು. ನಾನು ಕೂಡ ಬಿಜೆಪಿ ಸೇರ್ಪಡೆಯಾಗೋದಕ್ಕೂ ಮುನ್ನ ಬೆಂಬಲಿಗರ ಜೊತೆ ಸಭೆ ಮಾಡಿದ್ದೇನೆ. ಪಕ್ಷದ ಬೆಂಬಲಿಗರು ಬಿಜೆಪಿ ಸೇರುವುದಕ್ಕೆ ಒಪ್ಪಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಜಯೇಂದ್ರ, ರಾಧಾ ಮೋಹನ್ ದಾಸ್ ನೇತೃತ್ವದಲ್ಲಿ ‌ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ