AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ವಿರುದ್ಧ ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ: ಡಿಕೆ ಶಿವಕುಮಾರ್​

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಕೇಂದ್ರ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ "ನಮ್ಮ​ ತೆರಿಗೆ ನಮ್ಮ ಹಕ್ಕು" ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್​​ ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ: ಡಿಕೆ ಶಿವಕುಮಾರ್​
ಡಿಸಿಎಂ ಡಿಕೆ ಶಿವಕುಮಾರ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Oct 12, 2024 | 12:20 PM

Share

ಬೆಂಗಳೂರು, ಅಕ್ಟೋಬರ್​ 12: ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ತಾರತಮ್ಯವಾಗಿದೆ. ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” (Namma Terige Namma Hakku) ಎಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ನಮಗೆ ತಾರತಮ್ಯವಾಗುತ್ತಿದೆ. ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತ‌ಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ಕೀಳಾಗಿದ್ದೇವಾ? ಎಂದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ಐವರು ಸಚಿವರು ನಮ್ಮವರೇ ಇದ್ದಾರೆ. ನಮ್ಮಲ್ಲೇ ಇದ್ದುಕೊಂಡು ಈಗ ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಜಾಹೀರಾತಿಗೆ ವಿಪಕ್ಷಗಳು ಆಕ್ಷೇಪ ಎತ್ತಿರುವ ವಿಚಾರವಾಗಿ ಮಾತನಾಡಿದ ಅವರು, ನಮಗಿರುವ ಮಾಹಿತಿಯನ್ನು ಜಾಹಿರಾತು ರೂಪದಲ್ಲಿ ನೀಡಿದ್ದೇವೆ. ನಾವು ಮುನ್ನಡೆಯುತ್ತಿರುವ ದಾರಿಯ ಆಧಾರದ ಮೇಲೆ ಮತ್ತು ನಮ್ಮ ಭಾವನೆಗಳ ಮೇಲೆ ಜಾಹೀರಾತು ನೀಡಿದ್ದೇವೆ. ನಮ್ಮ ಸರ್ಕಾರದ ಸಾಧನೆ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡುತ್ತೇವೆ ಎಂದರು.

ಇದನ್ನೂ ಓದಿ: ನವೆಂಬರ್​ 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಕೆ ಶಿವಕುಮಾರ್​

ಈ ವರ್ಷ ದಸರಾ ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಮಳೆ-ಬೆಳೆ ಕೊಟ್ಟಿದ್ದಾಳೆ. ತಮಿಳುನಾಡಿನ ಹೋರಾಟ ಕಡಿಮೆಯಾಗಿದೆ. ಎಲ್ಲ ಡ್ಯಾಂಗಳು ತುಂಬಿವೆ. ಕಟ್​​ ಆಗಿದ್ದ ತುಂಗಭದ್ರಾ ಡ್ಯಾಂನ ಗೇಟ್​ ಅನ್ನು ಆರು ದಿನದಲ್ಲೇ ಕೂರಿಸಿ ನೀರು ಪೋಲಾಗುತ್ತಿದ್ದದ್ದನ್ನು ನಿಲ್ಲಿಸಿದ್ದೇವೆ. ಅ.16 ಬೆಂಗಳೂರಿಗೆ ವಿಶೇಷ ದಿನವಾಗಿದೆ. ಐದನೇ ಹಂತದ ಕುಡಿಯುವ ಯೋಜನೆ ಚಾಲನೆ ಸಿಗಲಿದೆ. ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮೈಸೂರಿನ ದಸರಾ ಲೈಟಿಂಗ್ಸ್​ ಇನ್ನು ಸ್ವಲ್ಪ ದಿನಗಳ ಕಾಲ ಹಾಗೆ ಇರಲಿದೆ. ಕೋಟ್ಯಂತರ ರೂಪಾಯಿ ಅದಕ್ಕೆ ಖರ್ಚು ಮಾಡಿದ್ದೇವೆ. ನಾನು ಆ ರೀತಿಯ ಲೈಟಿಂಗ್ಸ್​ ಇಲ್ಲಿವರೆಗೆ ಎಲ್ಲೂ ನೋಡಿಲ್ಲ. ಲೈಟಿಂಗ್ಸ್​ ನೋಡಿ ರಾಜ್ಯದ ಜನತೆ ಸಂತೋಷ ಪಡಬೇಕು. ಸಾಂಸ್ಕೃತಿಕ ಹಬ್ಬವನ್ನ ಆಚರಿಸಬೇಕು ಎಂದು ಕರೆ ಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು